First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

ಸ್ಲೀಪರ್‌ ಕೋಚ್‌ ರೈಲಿನಲ್ಲಿ 820 ಪ್ರಯಾಣಿಕರು ಪ್ರಯಾಣಿಸಬಹುದು...

Team Udayavani, Oct 25, 2024, 4:20 PM IST

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

ಬಹುನಿರೀಕ್ಷಿತ ವಂದೇ ಭಾರತ್‌ ರೈಲಿನ ಸ್ಲೀಪರ್‌ ಕೋಚ್‌ ಆವೃತ್ತಿಯನ್ನು ಬಿಡುಗಡೆ ಮಾಡಲು ಚೆನ್ನೈನ ಇಂಟಗ್ರಲ್‌ ಕೋಚ್‌ ಫ್ಯಾಕ್ಟರಿ (ICF) ಸಿದ್ಧಗೊಂಡಿರುವುದಾಗಿ ವರದಿ ತಿಳಿಸಿದೆ. ಶುಕ್ರವಾರ (ಅ.25) ನೂತನವಾಗಿ ಬಿಡುಗಡೆಗೊಳಿಸಿದ ಚಿತ್ರಗಳಲ್ಲಿ ರೈಲಿನ ಇಂಟಿರಿಯರ್ಸ್‌, ಐಶಾರಾಮಿ ಡಿಸೈನ್‌ ಮತ್ತು ಅತ್ಯಾಧುನಿಕ ಫೀಚರ್ಸ್‌ ಅನ್ನು ನೋಡಬಹುದಾಗಿದೆ.

ಮೊದಲ ಬಾರಿಗೆ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ಗಳನ್ನು ಐಸಿಎಫ್‌ ರೈಲ್ವೆ ಕಾರ್ಖಾನೆಯಲ್ಲಿ ತಯಾರಿಸಲಾಗಿದೆ. ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲಿನಲ್ಲಿ 820 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ ಎಂದು ವರದಿ ತಿಳಿಸಿದೆ.

ಹೆಚ್ಚುವರಿ ಎಂಬಂತೆ ವಂದೇ ಭಾರತ್‌ ರೈಲಿನಲ್ಲಿ Chair Car ಮತ್ತು ಮೆಟ್ರೋ ಟ್ರೈನ್ಸ್‌ ಶ್ರೇಣಿಯನ್ನು ಹೊಂದಿದೆ. ರಾತ್ರಿ ನಿದ್ದೆಯ ಪ್ರಯಾಣದ ವಂದೇ ಭಾರತ್‌ ಸ್ಲೀಪರ್‌ ರೈಲು 800 ಕಿಲೋ ಮೀಟರ್‌ ನಿಂದ 1,200 ಕಿಲೋ ಮೀಟರ್‌ ದೂರದ ನಡುವೆ ಸಂಚಾರ ನಡೆಸಲಿದೆ ಎಂದು ವರದಿ ವಿವರಿಸಿದೆ.

ಸ್ಲೀಪರ್‌ ಕೋಚ್‌ ನಲ್ಲಿ ಹಲವು ವೈಶಿಷ್ಟ್ಯ:

ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲಿನಲ್ಲಿ ಪ್ರಯಾಣಿಕರ ಸುಖಕರ ಮತ್ತು ಸುರಕ್ಷತೆಯೊಂದಿಗೆ ಹಲವಾರು ಫೀಚರ್ಸ್‌ ಗಳನ್ನು ಒಳಗೊಂಡಿದೆ. ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು ಸಂಪೂರ್ಣ ಹವಾನಿಯಂತ್ರಿತ( Air Conditioned). ಒಟ್ಟು 16 ಬೋಗಿ (ಕೋಚ್ಸ್)‌ ಗಳನ್ನು ಹೊಂದಿದ್ದು, ಸುಮಾರು 820 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಗಂಟೆಗೆ 160 ಕಿಲೋ ಮೀಟರ್‌ ವೇಗದಲ್ಲಿ ಚಲಿಸುವ ವಂದೇ ಭಾರತ್‌ ಮುಖ್ಯವಾಗಿ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ.

ಐಸಿಎಫ್‌ ನ ಜನರಲ್‌ ಮ್ಯಾನೇಜರ್‌ ಯು. ಸುಬ್ಬಾ ರಾವ್‌ ಅವರು ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು ಇತರ ಸಾಂಪ್ರದಾಯಿಕ ರೈಲುಗಳಿಗಿಂತ ಭಿನ್ನವಾಗಿರುವ ಅತ್ಯಾಧುನಿಕ ಸೌಲಭ್ಯದ ಕುರಿತು ವಿವರಿಸಿದ್ದರು.

ಕೀ ಫೀಚರ್ಸ್(Key Features):

*ಸೆನ್ಸಾರ್‌ ನಿಯಂತ್ರಿತ ಬಾಗಿಲುಗಳು: ಪ್ರಯಾಣಿಕರು ಡೋರ್‌ ಅನ್ನು ಸ್ಪರ್ಶಿಸಿದಾಗ ಸ್ವಯಂಚಾಲಿತವಾಗಿ ತೆರೆದುಕೊಳ್ಳಲಿದೆ.

*ಟಚ್‌ ಫ್ರೀ ಬಯೋ ವ್ಯಾಕ್ಯೂಮ್‌ ಟಾಯ್ಲೆಟ್ಸ್:‌ ಇದು ನೈರ್ಮಲ್ಯ ಮತ್ತು ಅನುಕೂಲಕ್ಕೆ ತಕ್ಕ ಸೌಲಭ್ಯವಾಗಿದೆ.

*ಇಂಟರ್‌ ಕನೆಕ್ಟಿಂಗ್‌ ಡೋರ್ಸ್‌ (ಪರಸ್ಪರ ಸಂಪರ್ಕಿಸುವ ಬಾಗಿಲುಗಳ ವ್ಯವಸ್ಥೆ): ಸುಲಭವಾಗಿ ಪ್ರವೇಶಿಸಲು ಅನುಕೂಲವಾಗಲು.

*ಅತ್ಯುತ್ತಮ ಒಳಾಂಗಣ ವ್ಯವಸ್ಥೆ

*ಅಂಗವಿಕಲರಿಗೆ ವಿಶೇಷ ಆಸನ ಮತ್ತು ಶೌಚಾಲಯ ವ್ಯವಸ್ಥೆ

*ಟಾಕ್‌ ಬ್ಯಾಕ್‌ ಯೂನಿಟ್ಸ್:‌ ಈ ವ್ಯವಸ್ಥೆಯಿಂದ ಪ್ರಯಾಣಿಕರು ಮತ್ತು ರೈಲು ಸಿಬಂದಿಗಳ ನಡುವೆ ಉತ್ತಮ ಸಂವಹನಕ್ಕೆ ಸಹಾಯಕವಾಗಲಿದೆ.

*ಫ್ಲೈಟ್‌ ಸ್ಟೈಲ್‌ Attendant Buttons: ( ವಿಮಾನ ಮಾದರಿಯ ಬಟನ್‌ ವ್ಯವಸ್ಥೆ) ಇದು ಫಸ್ಟ್‌ ಕ್ಲಾಸ್‌ ಕಂಪಾರ್ಟ್‌ ಮೆಂಟ್ಸ್‌ ನಲ್ಲಿ ಇದ್ದು, ಈ ಬಟನ್‌ ಪ್ರಯಾಣಿಕರಿಗೆ Upper ಬರ್ತ್ಸ್‌ ಗೆ ಹೋಗಲು ಅನುಕೂಲ ಕಲ್ಪಿಸಲಿದೆ.

Safety Measures:

ವಂದೇ ಭಾರತ್‌ ಸ್ಲೀಪರ್‌ ರೈಲಿನಲ್ಲಿ ಎಮರ್ಜೆನ್ಸಿ ಬ್ರೇಕ್‌ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೇ ಇನ್ನಿತರ ಅತ್ಯಾಧುನಿಕ ಭದ್ರತಾ ಫೀಚರ್ಸ್‌ ಒಳಗೊಂಡಿದೆ. ವಂದೇ ಭಾರತ್‌ ಸ್ಲೀಪರ್‌ ಕೋಚ್‌ ನಲ್ಲಿ  ಅಪಘಾತ ನಿಗ್ರಹ ವ್ಯವಸ್ಥೆ “ಕವಚ್”‌ ವ್ಯವಸ್ಥೆ ಸೇರಿದಂತೆ Anti Climbing Technologyಯನ್ನು ಹೊಂದಿದೆ.

ವಂದೇ ಭಾರತ್‌ ಸ್ಲೀಪರ್‌ ಕೋಚ್‌ ಅಧಿಕೃತವಾಗಿ ಬಿಡುಗಡೆ ಮಾಡುವ ಮೊದಲು ಎರಡು ತಿಂಗಳ ಕಾಲ 90ರಿಂದ 180 ಕಿಲೋ ಮೀಟರ್‌ ವೇಗದಲ್ಲಿ ರೈಲನ್ನು ಪರೀಕ್ಷಾರ್ಥವಾಗಿ ಓಡಾಟ ನಡೆಸುತ್ತಿದ್ದು, ನವೆಂಬರ್‌ 15ರಂದು ಪರೀಕ್ಷಾರ್ಥ ಓಡಾಟ ಮುಕ್ತಾಯಗೊಳ್ಳಲಿದ್ದು, ನಂತರ ಅಧಿಕೃತ ಬಿಡುಗಡೆಗೆ ದಿನಾಂಕ ಘೋಷಿಸುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

KB-Bank

Mangaluru: ಕರ್ಣಾಟಕ ಬ್ಯಾಂಕ್‌: 336.07 ಕೋ.ರೂ. ನಿವ್ವಳ ಲಾಭ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.