![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 31, 2019, 6:54 PM IST
ಚಿಕ್ಕಮಗಳೂರು: ಮಂಗಳೂರಿನ ಹೊಯ್ಗೆ ಬಜಾರ್ ನ ತೀರ ಪ್ರದೇಶದಲ್ಲಿ ಪತ್ತೆಯಾಗಿದ್ದ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ ಅವರ ಅಂತ್ಯ ಸಂಸ್ಕಾರ ಬುಧವಾರ ಸಂಜೆ ಹುಟ್ಟೂರು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚೇತನಹಳ್ಳಿಯ ಕಾಫಿ ಎಸ್ಟೇಟ್ ನಲ್ಲಿ ನಡೆಯಿತು.
ಸಿದ್ದಾರ್ಥ ಅವರ ಚಿತೆಗೆ ಪುತ್ರ ಅಮರ್ತ್ಯ ಅವರು ಅಗ್ನಿಸ್ಪರ್ಶ ಮಾಡುವ ಮೂಲಕ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಿರಿಯ ಮಗ ಇಶಾನ್ ಅಣ್ಣನಿಗೆ ಜತೆ ಕೈಜೋಡಿಸಿದ್ದರು. ಸಿದ್ದಾರ್ಥ ಅಂತ್ಯಕ್ರಿಯೆಗೆ ಶ್ರೀಗಂಧ, ಹಲಸು, ಮಾವು, ಗರಿಕೆ ಬಳಕೆ ಮಾಡಲಾಗಿತ್ತು.
ಅಂತ್ಯಸಂಸ್ಕಾರಕ್ಕೂ ಮುನ್ನ ಚಿಕ್ಕಮಗಳೂರಿನಲ್ಲಿ ಇಂದು ಮಧ್ಯಾಹ್ನ ಸಾರ್ವಜನಿಕರಿಗೆ ಸಿದ್ದಾರ್ಥ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪತ್ನಿ ಮಾಳವಿಕಾ, ಮಾವ ಎಸ್ ಎಂ ಕೃಷ್ಣ, ಅತ್ತೆ ಪ್ರೇಮಾ ಸಿದ್ದಾರ್ಥ ಪಾರ್ಥೀವ ಶರೀರದ ದರ್ಶನ ಪಡೆದಿದ್ದು, ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಶಾಸಕರಾದ ಆರ್.ಅಶೋಕ್, ಸಿಟಿ ರವಿ, ಕಾಂಗ್ರೆಸ್ ನ ಡಿಕೆ ಶಿವಕುಮಾರ್, ಶೃಂಗೇರಿ ಶಾಸಕ ರಾಜೇಗೌಡ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಸಾರ್ವಜನಿಕರು ಹಾಗೂ ಗಣ್ಯರು ಸಿದ್ದಾರ್ಥ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.