ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!
ಮದ್ಯದ ಬಾಟಲಿಗಳನ್ನು ಹೊತ್ತೊಯ್ದಿರುವ ಘಟನೆಯಿಂದ ಪೊಲೀಸರೇ ತಬ್ಬಿಬ್ಬಾದ ಘಟನೆ ನಡೆದಿದೆ.
Team Udayavani, Sep 11, 2024, 11:51 AM IST
ಆಂಧ್ರಪ್ರದೇಶ(ಗುಂಟೂರು): ವಶಪಡಿಸಿಕೊಂಡಿದ್ದ ಅಕ್ರಮ ಮದ್ಯದ ಬಾಟಲಿಗಳನ್ನು ನಾಶ ಮಾಡುತ್ತಿದ್ದ ವೇಳೆಯಲ್ಲಿಯೇ ಪೊಲೀಸರ ಎಚ್ಚರಿಕೆಯ ನಡುವೆಯೇ ಮದ್ಯಪ್ರಿಯರು ಬಾಟಲಿಗಳನ್ನು ಹೊತ್ತೊಯ್ದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜಧಾನಿ ಅಮರಾವತಿಯಿಂದ ಸುಮಾರು 40 ಕಿಲೋ ಮೀಟರ್ ದೂರದಲ್ಲಿರುವ ಗುಂಟೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಯ್, ಏಯ್ ಎಂದು ಕೂಗಾಡುತ್ತಿರುವ ನಡುವೆಯೇ ಜನರು ಗುಂಪಿನಲ್ಲಿ ಬಂದು ಬಾಟಲಿಗಳನ್ನು ಹೊತ್ತೊಯ್ದಿರುವುದಾಗಿ ವರದಿ ತಿಳಿಸಿದೆ.
ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಡಂಪಿಂಗ್ ಯಾರ್ಡ್ ನಲ್ಲಿ ನಾಶಪಡಿಸುತ್ತಿದ್ದ ವೇಳೆ ಏಕಾಏಕಿ ಜನರ ಗುಂಪು ಲಗ್ಗೆ ಇಟ್ಟು ಮದ್ಯದ ಬಾಟಲಿಗಳನ್ನು ಹೊತ್ತೊಯ್ದಿರುವ ಘಟನೆಯಿಂದ ಪೊಲೀಸರೇ ತಬ್ಬಿಬ್ಬಾದ ಘಟನೆ ನಡೆದಿದೆ.
View this post on Instagram
ಮದ್ಯದ ಬಾಟಲಿ ನಾಶದ ಸಂದರ್ಭದಲ್ಲಿ ಜನರು ಲಗ್ಗೆ ಇಟ್ಟು ಬಾಟಲಿ ಹೊತ್ತೊಯ್ಯುತ್ತಾರೆ ಎಂಬ ಊಹೆ ಪೊಲೀಸರಿಗೂ ಇದ್ದಿರಲಿಲ್ಲ. ಜನರು ಮುಗಿಬಿದ್ದು ಬಾಟಲಿ ಹೊತ್ತೊಯ್ಯುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ
Viral: ತಾಜ್ ಮಹಲ್ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ
U.P: ಜ್ಯೂಸ್ಗೆ ಮೂತ್ರ ಬೆರೆಸಿ ನೀಡುತ್ತಿದ್ದ ವ್ಯಾಪಾರಿ: ಕ್ಯಾನ್ನಲ್ಲಿತ್ತು ಮಾನವ ಮೂತ್ರ!
Tragedy: ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು
Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.