Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

ಜನರು ಕಾಡಿನೊಳಗೆ ಸುತ್ತಾಟ ನಡೆಸಲು ಹೋಗಬಾರದು...

Team Udayavani, Oct 22, 2024, 3:11 PM IST

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

ಶಾದೋಲ್(ಮಧ್ಯಪ್ರದೇಶ): ಸಫಾರಿ ವೇಳೆ ಪ್ರವಾಸಿಗರ ಹುಚ್ಚಾಟದಿಂದ ಪ್ರಾಣಿಗಳು ಅಟ್ಟಾಡಿಸುವ, ವಾಹನವನ್ನು ಏರಿ ತನ್ನ ಆಕ್ರೋಶವನ್ನು ಹೊರಹಾಕುವ ಹಲವು ಘಟನೆಗಳು ನಡೆದಿವೆ. ಇದೀಗ ಮಧ್ಯಪ್ರದೇಶದ ಶಾದೋಲ್‌ ಪ್ರದೇಶದ ಅರಣ್ಯ ವಿಭಾಗದಲ್ಲಿ ಚಿರತೆಯೊಂದು ಮೂವರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಭಾನುವಾರ (ಅ.20) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶಾದೋಲ್‌ ವಲಯದ ಖಿತೌಲಿ ಬೀಟ್‌ ನ ಸೋನ್‌ ನದಿ ಪಾತ್ರದ ಬಳಿ ಗುಂಪೊಂದು ಪಿಕ್‌ ನಿಕ್‌ ಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಚಿರತೆಯ ದಾಳಿಯಿಂದ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಯುವಕನೊಬ್ಬ ಚಿತ್ರೀಕರಿಸಿದ್ದ 30 ಸೆಕೆಂಡ್‌ ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಚಿರತೆಗೆ ತಮಾಷೆ ಮಾಡುತ್ತ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಶ್ಯದಲ್ಲಿದೆ.

ದುರುಗುಟ್ಟಿ ನೋಡುತ್ತಿದ್ದ ಚಿರತೆಯನ್ನು ಗುಂಪು ಬಾ, ಬಾ ಎಂದು ಕರೆಯುತ್ತಿದ್ದು, ಅದನ್ನು ಯುವಕನೊಬ್ಬ ತನ್ನ ಮೊಬೈಲ್‌ ನಲ್ಲಿ ಸೆರೆಹಿಡಿಯುತ್ತಿದ್ದ. ಆದರೆ ಈ ತಮಾಷೆ ಹೆಚ್ಚು ಹೊತ್ತು ಮುಂದುವರಿಯಲಿಲ್ಲ…ದಿಢೀರನೆ ವೇಗವಾಗಿ ಬಂದ ಚಿರತೆ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿಬಿಟ್ಟಿತ್ತು!

ಇಬ್ಬರು ಯುವಕರ ಮೇಲೆ ದಾಳಿ ನಡೆಸಿದ್ದ ಚಿರತೆ, ಮತ್ತೊಬ್ಬನನ್ನು ನೆಲದ ಮೇಲೆ ಹಾಕಿ ಕಚ್ಚಿ ಎಳೆದಾಡಿದ ದೃಶ್ಯ ವಿಡಿಯೋದಲ್ಲಿದೆ. ಚಿರತೆಯ ದಾಳಿಯಿಂದ ಕಂಗೆಟ್ಟ ಯುವಕರು ಬೊಬ್ಬೆ ಹೊಡೆಯುತ್ತ…ಓಡಿ, ಓಡಿ ಎಂದು ಹೇಳುತ್ತಿದ್ದು…ಚಿರತೆ ದಾಳಿ ನಡೆಸಿ ಓಡಿ ಹೋಗುವ ಮೊದಲು ವಿಡಿಯೋ ದೃಶ್ಯ ಕಟ್‌ ಆಫ್‌ ಆಗಿರುವುದಾಗಿ ವರದಿ ತಿಳಿಸಿದೆ.

ಕೆಲವು ದಿನಗಳ ಹಿಂದಷ್ಟೇ ಈ ಪ್ರದೇಶದಲ್ಲಿ ಹುಲಿಯೊಂದು ದಾಳಿ ನಡೆಸಿದ್ದ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಜನರು ಕಾಡಿನೊಳಗೆ ಸುತ್ತಾಟ ನಡೆಸಲು ಹೋಗಬಾರದು ಎಂದು ಉಪ ವಿಭಾಗೀಯ ಅರಣ್ಯಾಧಿಕಾರಿ ಬಾದ್‌ ಷಾ ರಾವತ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Viral: ರೊಮ್ಯಾನ್ಸ್‌ ಗೆ ಕ್ಯಾಬ್‌ ಸ್ಥಳ ಅಲ್ಲ: ಹೈದ್ರಾಬಾದ್‌ ಕ್ಯಾಬ್‌ ಚಾಲಕನ ನಿಯಮ ವೈರಲ್‌!

Viral: ಕ್ಯಾಬ್‌ನಲ್ಲಿ ರೊಮ್ಯಾನ್ಸ್‌ ಸಲ್ಲದು: ಹೈದರಾಬಾದ್‌ ಚಾಲಕನ ನೋಟಿಸ್‌!

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

11(1)

Thekkatte: ಸಂಪೂರ್ಣ ಹದಗೆಟ್ಟ ಬಿದ್ಕಲ್‌ಕಟ್ಟೆ-ಕಂಬಿಕಲ್ಲು ರಸ್ತೆ

Prithvi Shaw out of the Ranji team too; Is Mumbai player’s cricket life over

Prithvi Shaw: ರಣಜಿ ತಂಡದಿಂದಲೂ ಪೃಥ್ವಿ ಔಟ್;‌ ಮುಗಿಯಿತಾ ಮುಂಬೈ ಆಟಗಾರನ ಕ್ರಿಕೆಟ್‌ ಜೀವನ?

10

Kolluru: ವಂಡ್ಸೆ-ಹಾಲ್ಕಲ್‌ ರಸ್ತೆ ಹೊಂಡಕ್ಕೆ ಮುಕ್ತಿ ಎಂದು?

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

9

Karkala: ಆಗಾಗ ಸುರಿಯುತ್ತಿರುವ ಮಳೆ; ರಸ್ತೆ ದುರಸ್ತಿಗೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.