![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 18, 2019, 12:28 PM IST
ಬೆಂಗಳೂರು: ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಅನರ್ಹ ಶಾಸಕ ಆನಂದ್ ಸಿಂಗ್ ಹಾಗೂ ಉಜ್ಜಯಿನಿ ಜಗದ್ಗುರುಗಳು ಮುಖ್ಯಮಂತ್ರಿ ಯಡಿಯೂರಪ್ಪರಲ್ಲಿ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಯನ್ನು ಗೃಹ ಕಚೇರಿ ಕೃಷ್ಣಾ ದಲ್ಲಿ ಭೇಟಿ ಮಾಡಿ ಮಾತನಾಡಿದ ಆನಂದ್ ಸಿಂಗ್, ಜನಪ್ರತಿನಿಧಿಗಳು ಹಾಗೂ ಜನರು ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ವಿಶ್ವದಲ್ಲಿ ಹೆಸರುವಾಸಿಯಾಗಿರೋ ನಗರವೆಂದು ವಿಜಯನಗರವನ್ನು ಯುನೆಸ್ಕೋ ಪರಿಗಣಿಸಿದೆ. ವಿಜಯನಗರ ಸಾಮ್ರಾಜ್ಯ ಎಂದಿಗೂ ಮರೆಯಲು ಸಾಧ್ಯವಾಗಲಾರದು. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಿದರೆ ಆಡಳಿತಾತ್ಮಕವಾಗಿ ತುಂಬ ಅನುಕೂಲವಾಗುತ್ತೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಜ್ಜಯಿನಿ ಸದ್ಗುರುಗಳು ಮಾತನಾಡಿ ವಿಜಯನಗರದ ಗತ ವೈಭವ ಮರುಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತಿನ ಮೈಸೂರು ದಸರಾಕ್ಕೆ ಪ್ರೇರಣೆಯೇ ಆಗಿನ ವಿಜಯನಗರ ಸಾಮ್ರಾಜ್ಯ. ಹಾಗಾಗಿ ಈ ನೆಲಕ್ಕೆ ಅದರದ್ದೇ ಆದ ವಿಶೇಷ ಗುಣಗಳು ಇದೆ.ಅದ್ದರಿಂದ ಇದನ್ನು ಜಿಲ್ಲೆಯ ನ್ನಾಗಿ ಮಾಡಬೇಕು ಅಂತ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪಕ್ಷಾತೀತವಾಗಿ ವಿಜಯನಗರ ವನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಒತ್ತಾಯಿಸಿದ್ದರಿಂದ , ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗೊಳೊಂದಿಗೆ ಚರ್ಚೆ ನಡೆಸಿ ಮುಂದಿನ ಸಚಿವ ಸಂಪುಟದಲ್ಲಿ ಇದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.