Vijayapura: ಲಿಂಗಾಯತ-ಹಿಂದೂ ಧರ್ಮ ಎರಡೂ ಒಂದೇ : ವಚನಾನಂದ ಸ್ವಾಮೀಜಿ
ಒಂದು ಧರ್ಮದ ಆಚರಣೆಗಳ ಕೀಳಾಗಿ, ಮತ್ತೊಂದು ತತ್ವಗಳ ತುಚ್ಛವಾಗಿ ಕಾಣಬಾರದು
Team Udayavani, Aug 12, 2024, 8:49 PM IST
ವಿಜಯಪುರ: ಲಿಂಗಾಯತ ಹಾಗೂ ಹಿಂದೂ ಧರ್ಮ ಒಂದೇ. ನಾವೆಲ್ಲಾ ಹಿಂದೂಗಳೇ, ಹಿಂದೂ ಎಂಬುದು ಮಹಾಸಾಗರ ಮಹಾಸಾಗರದಲ್ಲಿ ಅನೇಕ ನದಿಗಳು ವಿಲೀನವಾಗಿವೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಪ್ರತಿಪಾದಿಸಿದರು.
ಸೋಮವಾರ ನಗರದಲ್ಲಿ ಜ್ಞಾನಯೋಗಾಶ್ರಮದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ವಚನಾನಂದ ಸ್ವಾಮೀಜಿ, ಹಿಂದೂ ಧರ್ಮದಲ್ಲಿ ಬೌದ್ಧ , ಜೈನ, ಸಿಖ್, ವೀರಶೈವ, ಲಿಂಗಾಯತ, ವೈಷ್ಣವ ಎಂಬ ನದಿಗಳು ಮಹಾಸಾಗರ ಸೇರುತ್ತವೆ ಎಂದರು.
ಶಂಕರಾಚಾರ್ಯರು, ಮಧ್ವಾಚಾರ್ಯರು, ರಾಮಾನುಜಾಚಾರ್ಯ, ಗುರುನಾನಕರು, ಜ್ಞಾನೇಶ್ವರ, ಬಸವೇಶ್ವರರು ಆಯಾ ಕಾಲ ಘಟ್ಟದಲ್ಲಿ ಅವರ ವಿಚಾರಧಾರೆ ಹೇಳಿದ್ದು, ಅವೇ ಧರ್ಮಗಳಾದವು. ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ಬಸವಣ್ಣ ಜಗತ್ತಿಗೆ ಹೊಸದನ್ನು ಕೊಟ್ಟರು ಎಂದರು.
ಬಸವೇಶ್ವರರ ಉದಾತ್ತ ವಿಚಾರಗಳ ಸೀಮಿತ ಮಾಡಬಾರದು. ಯಾವುದೇ ಮಹಾನ್ ವ್ಯಕ್ತಿಗಳ ಅನುಕರಣೆ ಮಾಡುವವರನ್ನು ನಾವೇ ಶ್ರೇಷ್ಠವೆಂದು ಟೀಕಿಸಬಾರದು. ಒಂದು ಧರ್ಮದ ಆಚರಣೆಗಳ ಕೀಳಾಗಿ ಕಾಣುವುದು ಹಾಗೂ ಮತ್ತೊಂದು ತತ್ವಗಳನ್ನು ತುಚ್ಛವಾಗಿ ಕಾಣಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.