Violence against women: ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಸಮಾಜಕ್ಕೆ ಕಪ್ಪುಚುಕ್ಕೆ


Team Udayavani, Aug 20, 2024, 6:00 AM IST

Symoblic

ರಾಜ್ಯ ಮತ್ತು ದೇಶದಲ್ಲಿ ಮಹಿಳೆಯರ ಸುರಕ್ಷೆಯನ್ನು ಖಾತರಿಪಡಿಸುವ ಹಲವಾರು ಕಾನೂನುಗಳು, ಕಾರ್ಯಕ್ರಮಗಳು ಇದ್ದರೂ ಸ್ತ್ರೀಯರ ಮೇಲಿನ ದೌರ್ಜನ್ಯ ಎಲ್ಲೆ ಮೀರಿ ನಡೆಯುತ್ತಿರುವುದು ನಮ್ಮ ನಾಗರಿಕ ಸಮಾಜಕ್ಕೊಂದು ಕಪ್ಪುಚುಕ್ಕೆಯೇ ಸರಿ. ಕೆಲವು ದೌರ್ಜನ್ಯ ಪ್ರಕರಣಗಳಂತೂ “ಮನುಷ್ಯನೊಬ್ಬ ಹೀಗೂ ವರ್ತಿಸುತ್ತಾನೆಯೇ’ ಎಂದು ನಮ್ಮನ್ನು ನಾವು ಪ್ರಶ್ನಿಸುವಂತಿದೆ. ಜತೆಗೆ ಕಾನೂನು, ಕಾರ್ಯಕ್ರಮಗಳಿಂದ ಮಾತ್ರ ಇದನ್ನು ತಡೆಯುವುದು ಅಸಾಧ್ಯ, ಸ್ತ್ರೀ ಘನತೆಯನ್ನು ಗೌರವಿಸುವ ಪ್ರಜ್ಞೆಯನ್ನು ಶಿಕ್ಷಣದ ಮೂಲಕ ಸಮಾಜದಲ್ಲಿ ಮೂಡಿಸುವ ಕೆಲಸ ವ್ಯಾಪಕವಾಗಿ ಆಗಬೇಕಿದೆ ಎಂಬ ತಿಳಿವಳಿಕೆಯನ್ನು ಹೊಂದಿ ಆ ನಿಟ್ಟಿನಲ್ಲಿ ಮುಂದಡಿ ಇರಿಸಬೇಕಾಗಿದೆ.

ಕೆಲವು ಅಂಕಿ-ಅಂಶಗಳನ್ನು ಗಮನಿಸುವುದಾದರೆ 2020-21ರಿಂದ ಈ ವರ್ಷದ ಜುಲೈವರೆಗೆ ಅಂದರೆ ಕಳೆದ 5 ವರ್ಷಗಳಲ್ಲಿ ನಮ್ಮ ರಾಜ್ಯದಲ್ಲಿಯೇ ಸುಮಾರು 10 ಸಾವಿರಕ್ಕೂ ಹೆಚ್ಚು ಸ್ತ್ರೀ ದೌರ್ಜನ್ಯ ಸಂಬಂಧಿ ದೂರುಗಳು ರಾಜ್ಯ ಮಹಿಳಾ ಆಯೋಗದ ಕದತಟ್ಟಿವೆ. ಇವುಗಳಲ್ಲಿ ಕೌಟುಂಬಿಕ ದೌರ್ಜನ್ಯ. ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ- ಹೀಗೆ ನಾನಾ ವಿಧ. ರಕ್ಷಣೆ ಕೋರಿ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ದೂರುಗಳು ಅತೀ ಹೆಚ್ಚು ಸಂಖ್ಯೆಯಲ್ಲಿವೆ ಎಂಬುದಾಗಿ ಅಂಕಿಅಂಶಗಳು ಹೇಳುತ್ತಿವೆ. ಪಶ್ಚಿಮ ಬಂಗಾಲದಲ್ಲಿ ಇತ್ತೀಚೆಗೆ ನಡೆದ ತರಬೇತಿ ನಿರತ ವೈದ್ಯೆಯ ಮೇಲಿನ ನಿಕೃಷ್ಟ ಕೃತ್ಯ ದೇಶದಲ್ಲಿ ಹೋರಾಟದ ಕಿಚ್ಚನ್ನೇ ಹೊತ್ತಿಸಿದೆ. ದಿನಂಪ್ರತಿ ದಿನಪತ್ರಿಕೆ ತೆರೆದರೆ ಯಾವುದಾದರೂ ಒಂದು ಸ್ವರೂಪದ ಮಹಿಳಾ ದೌರ್ಜನ್ಯ ಪ್ರಕರಣದ ವರದಿ ಓದಿ ತಲೆತಗ್ಗಿಸುವಂತೆ ಮಾಡುತ್ತದೆ.

ಕೆಲವು ವಾರಗಳ ಹಿಂದೆ ಉತ್ತರ ಭಾರತದಲ್ಲಿ ಅಶ್ಲೀಲ ಲೈಂಗಿಕ ವೀಡಿಯೋಗಳನ್ನು ವೀಕ್ಷಿಸುವ ಚಟವಿದ್ದ ಬಾಲಕನೊಬ್ಬ ತನ್ನ ಸಹೋದರಿಯ ಮೇಲೆಯೇ ಅತ್ಯಾಚಾರ ಎಸಗಿದ ಪ್ರಕರಣ ವರದಿಯಾಗಿತ್ತು. ಕಾನೂನು, ಯೋಜನೆಗಳ ಮೂಲಕ ಸ್ತ್ರೀದೌರ್ಜನ್ಯವನ್ನು ತಡೆಯಲು ಪ್ರಯತ್ನಿಸುವುದರ ಜತೆಗೆ ಬಾಲ್ಯದಿಂದಲೇ ಈ ವಿಷಯವಾಗಿ ಶಿಕ್ಷಣ ಒದಗಿಸುವುದು, ಸ್ತ್ರೀ ಘನತೆ ಯನ್ನು ಗೌರವಿಸುವ ಮೌಲ್ಯವನ್ನು ಕಲಿಸಿಕೊಡುವುದು ಅಗತ್ಯವಾಗಿ ಆಗಬೇಕು ಎಂಬುದಕ್ಕೆ ಈ ಪ್ರಕರಣ ಪುಷ್ಟಿ ಒದಗಿಸುತ್ತದೆ. ನಾಗರಿಕ ನಡವಳಿಕೆ ಯಾವುದು, ಅನಾಗರಿಕ ವರ್ತನೆ ಯಾವುದು ಎಂಬ ಎಚ್ಚರವನ್ನು ಮಕ್ಕಳಿಗೆ ಬಾಲ್ಯದಿಂದಲೇ ತಿಳಿಸುವ ಕೆಲಸವಾಗಬೇಕಾಗಿದೆ.

ವಿಚಿತ್ರ ಮತ್ತು ವಿಪರ್ಯಾಸದ ವಿಷಯ ಎಂದರೆ ಮಹಿಳಾ ಆಯೋಗದ ಅಂಕಿಅಂಶಗಳು ಒದಗಿಸುವ ವಿವರಗಳ ಪ್ರಕಾರ ವಿದ್ಯಾವಂತರು ಮತ್ತು ಉದ್ಯೋ ಗಸ್ಥರು ಹೆಚ್ಚಿರುವ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಇತರ ನಗರ ಪ್ರದೇಶ ಗಳಲ್ಲಿಯೇ ದೌರ್ಜನ್ಯ ಪ್ರಕರಣಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ನಡೆಯುತ್ತಿವೆ. ಸ್ತ್ರೀಯ ಘನತೆಯನ್ನು ಗೌರವಿಸುವ ಮೌಲ್ಯವನ್ನು ಎಳೆಯ ವಯಸ್ಸಿನಿಂದಲೇ ಮಕ್ಕಳಲ್ಲಿ ಬೆಳೆಸುವುದರ ಅಗತ್ಯವನ್ನು ಇದು ಸಾರಿಹೇಳುತ್ತದೆ.

ಸ್ತ್ರೀಯರು ಕೂಡ ಸ್ವಾತಂತ್ರ್ಯದ ಹೆಸರಿನಲ್ಲಿ ಸ್ವೇಚ್ಛಾಚಾರಕ್ಕೆ ಮುಂದಾಗುವುದು ಸಲ್ಲದು, ಅದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎನ್ನುವುದನ್ನು ಮರೆಯಕೂಡದು. ಒಂದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದಕ್ಕೆ ಪೂರಕವಾಗಿದೆ. ಈ ಪ್ರಕರಣದಲ್ಲಿ ನಡುರಾತ್ರಿ ಪಾರ್ಟಿ ಮುಗಿಸಿ ಬಂದ ಯುವತಿ ಅಪರಿಚಿತ ಬೈಕ್‌ ಚಾಲಕನ ಬಳಿ ಡ್ರಾಪ್‌ ಕೇಳಿ ದೌರ್ಜನ್ಯಕ್ಕೆ ಒಳಗಾಗಿದ್ದಳು. ಇಂತಹ ಅಪಾಯಕ್ಕೆ ಆಹ್ವಾನ ನೀಡುವ ವರ್ತನೆಯಿಂದ ಸ್ತ್ರೀಯರು ದೂರವಿರುವುದು ಯೋಗ್ಯ.

ಕಾನೂನು, ಯೋಗ್ಯವಾದ ಮೌಲ್ಯಗಳನ್ನು ಬೆಳೆಸುವುದು ಮತ್ತು ಸ್ತ್ರೀಯರ ಘನತೆಯುಕ್ತ ನಡವಳಿಕೆಯ ಮೂಲಕ ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆ ಆಗಿರುವ ಮಹಿಳಾ ದೌರ್ಜನ್ಯ ಕೊನೆಗೊಳ್ಳಲಿ.

ಟಾಪ್ ನ್ಯೂಸ್

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.