Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

ರಾಜಕೀಯ ವ್ಯಕ್ತಿಗಳು ಹಿಂದೂ ಮಠ, ಮಂದಿರಗಳಲ್ಲಿ ಹಸ್ತಕ್ಷೇಪ ಮಾಡಬಾರದು, ವಿಹಿಂಪ ಷಷ್ಠಿಪೂರ್ತಿ ಸಮ್ಮೇಳನದಲ್ಲಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಪ್ರತಿಪಾದನೆ

Team Udayavani, Sep 23, 2024, 12:35 AM IST

Udupi-Shashti

ಉಡುಪಿ: ಹಿಂದೂಗಳು ಸಿಂಧುವಾಗಬೇಕು; ಬಿಂದುವಾಗಬಾರದು. ಧರ್ಮ ಪರಿಪಾಲನೆ ವಿಷಯದಲ್ಲಿ ಎಲ್ಲರೂ ಒಂದಾಗಬೇಕು. ಅಪ ಪ್ರಚಾರ ಹಾಗೂ ರಾಜಕೀಯ ಹಸ್ತಕ್ಷೇಪದಿಂದಾಗಿ ಬಹಳಷ್ಟು ಅನ್ಯಾಯಗಳು ನಡೆಯುತ್ತಿವೆ. ತಿರುಪತಿ ತಿಮ್ಮಪ್ಪನ ಪ್ರಸಾದದಲ್ಲಿ ನಡೆದಿರುವ ಅನ್ಯಾಯ ಸರಿಯಲ್ಲ. ಮಠ-ಮಂದಿರದಲ್ಲಿ ಸರಕಾರದ ಹಸ್ತಕ್ಷೇಪ ಸಲ್ಲದು. ಇದಕ್ಕಾಗಿ ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಬೇಕು ಎಂದು ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಹೇಳಿದರು.

ವಿಶ್ವ ಹಿಂದೂ ಪರಿಷತ್‌ ಉಡುಪಿ ವತಿಯಿಂದ ಬನ್ನಂಜೆಯ ನಾರಾಯಣ ಗುರು ಆಡಿಟೋರಿಯಂನಲ್ಲಿ ರವಿವಾರ ಜರಗಿದ ಷಷ್ಠಿಪೂರ್ತಿ ಸಮ್ಮೇಳನದಲ್ಲಿ ಅವರು ಆಶೀರ್ವಚನ ನೀಡಿದರು. ರಾಜಕೀಯ ವ್ಯಕ್ತಿಗಳು ಹಿಂದೂ ಮಠ- ಮಂದಿರಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಆಚರಣೆಗಳಿಂದ ಹಿಂಸೆಯಾಗಬಾರದು. ಹಿಂದುತ್ವ ಉಳಿಸುವ ಕೆಲಸದ ಜತೆಗೆ ವಿಶ್ವ ಹಿಂದೂ ಸಿಂಧುವಾಗಬೇಕು ಎಂದರು.

ಧರ್ಮ ಉಳಿಸಲು ಒಂದಾಗಿ: ಕಾಣಿಯೂರು ಶ್ರೀ
ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಾತನಾಡಿ, ವಿವಿಧ ಕಾರಣಗಳಿಂದಾಗಿ ಹಿಂದೂ ಧರ್ಮದ ಮೇಲೆ ಆಕ್ರಮಣ, ದಬ್ಟಾಳಿಕೆ ನಡೆಯುತ್ತಿದೆ. ಈ ಆಕ್ರಮಣ ತಿರುಪತಿ ತಿಮ್ಮಪ್ಪನನ್ನೂ ಬಿಡಲಿಲ್ಲ. ಅಲ್ಲಿನ ಪ್ರಸಾದದಲ್ಲೂ ಕೊಬ್ಬು, ಎಣ್ಣೆಯನ್ನು ಹಾಕಿ ಅಪವಿತ್ರಗೊಳಿಸಲಾಗಿದೆ. ಈ ಮೂಲಕ ಹಿಂದೂ ಧರ್ಮವನ್ನು ನಾನಾ ರೀತಿಯಲ್ಲಿ ನಾಶ ಮಾಡುವ ಪ್ರವೃತ್ತಿ ನಡೆಯುತ್ತಿದೆ.

ಹಿಂದೂಗಳೇ ಬಹುಸಂಖ್ಯೆಯಲ್ಲಿರುವ ನಮ್ಮ ದೇಶದಲ್ಲಿ ಗಣೇಶೋತ್ಸವ ಮೆರವಣಿಗೆಯನ್ನೂ ಪೊಲೀಸ್‌ ಭದ್ರತೆಯಲ್ಲೇ ಮಾಡುವ ಶೋಚನೀಯ ಸ್ಥಿತಿ ಎದುರಾಗಿದೆ. ಹಿಂದೂ ಧರ್ಮದ ಉಳಿವಿಗೆ ಎಲ್ಲರೂ ಒಗ್ಗಟ್ಟಾಗಬೇಕು. ಜಾತಿ-ಜಾತಿಗಳೆಂಬ ಚಿಂತನೆ ಬಿಟ್ಟು ಹಿಂದೂಗಳೆಂಬ ಭಾವನೆ ಇರಬೇಕು ಎಂದರು.

ದೇಹಕ್ಕಿಂತ ದೇಶ ಮುಖ್ಯ: ಶೀರೂರು ಶ್ರೀ
ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಮಾತನಾಡಿ, ನಮ್ಮ ದೇಶ, ಧರ್ಮದ ಮೇಲೆ ಪ್ರೇಮ ಇರಬೇಕು. ಈ ಸಂಘಟನೆಗೆ 60 ವರ್ಷ ತುಂಬಿರುವುದು ಹೆಮ್ಮೆಯ ಸಂಗತಿ. 60ಕ್ಕೆ ನಿವೃತ್ತಿ ಎಂಬಂತಾಗದೆ ಉದಾಸೀನತೆ ಬಿಟ್ಟು ದೇಶದ ರಕ್ಷಣೆಗೆ ಮುಂದಾಗಬೇಕು. ದೇಹಕ್ಕೂ ಮುನ್ನ ದೇಶ ಮುಖ್ಯವಾದುದು. ಸೂರ್ಯ-ಚಂದ್ರರು ಇದ್ದಷ್ಟು ಕಾಲ ಈ ಸಂಘಟನೆ ಉಳಿಯಬೇಕು ಎಂದರು.

ಕರ್ನಾಟಕ ವಿಹಿಂಪ ಮಂದಿರ ಅರ್ಚಕ ಪುರೋಹಿತ್‌ ಪ್ರಮುಖರಾದ ಬಸವರಾಜ್‌, ಉದ್ಯಮಿ ಸಾಧು ಸಾಲ್ಯಾನ್‌, ಕೊಳಲು ವಾದಕ ಪಾಂಡು ಪಾಣಾರ, ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್‌ ಶೆಟ್ಟಿ, ನಗರ ಅಧ್ಯಕ್ಷ ರಾಕೇಶ್‌ ಮಲ್ಪೆ, ನಗರ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿಗಾರ್‌ ಉಪಸ್ಥಿತರಿದ್ದರು.
ವಿಹಿಂಪ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ ಸ್ವಾಗತಿಸಿದರು. ಪೂರ್ಣಿಮಾ ಸುರೇಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Yashpal1

Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್‌ಪಾಲ್‌

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Kabbinale

Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

theft-temple

Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.