ಪರ್ಯಾಯ ಶ್ರೀಗಳ ಜತೆ ಸ್ಪೀಕರ್‌ ಪ್ರಶ್ನೋತ್ತರ; ರಾಜಕಾರಣಿಯೊಬ್ಬರ ಫಿಲಾಸಫಿಕಲ್‌ ಜಿಜ್ಞಾಸೆ


Team Udayavani, Apr 20, 2022, 6:50 AM IST

ಪರ್ಯಾಯ ಶ್ರೀಗಳ ಜತೆ ಸ್ಪೀಕರ್‌ ಪ್ರಶ್ನೋತ್ತರ; ರಾಜಕಾರಣಿಯೊಬ್ಬರ ಫಿಲಾಸಫಿಕಲ್‌ ಜಿಜ್ಞಾಸೆ

ಉಡುಪಿ: ಕಾರ್ಯನಿಮಿತ್ತ ಉಡುಪಿಗೆ ಮಂಗಳವಾರ ಬಂದಿದ್ದ ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಒಂದಷ್ಟು ಹೊತ್ತು
ಮಧ್ವಾಚಾರ್ಯರ ಸರ್ವಜ್ಞ ಪೀಠದೆ ದುರು ಒಂಟಿಯಾಗಿ ಕುಳಿತು ಧ್ಯಾನ ಮಾಡಿದರು. ಬಳಿಕ ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿ ಚುಟುಕಾಗಿ ದೇವರ ಅರಿವಿನ ಬಗೆಗೆ ಆತ್ಮೀಯ ಸಂವಾದ ನಡೆಸಿದರು.

ಕಾಗೇರಿ ಪ್ರಶ್ನೆಯಿಂದ ಒಂದು ಕ್ಷಣ ಅಚ್ಚರಿಗೊಂಡ ಶ್ರೀಗಳು ನಗುತ್ತಲೇ ಅವರ ಮೇಲೆ ದೃಷ್ಟಿ ಹರಿಸಿದರು. ಬಳಿಕ ಸಂತೋಷದಿಂದಲೇ ಉತ್ತರಿಸಿದರು. ಸಂವಾದ ಹೀಗೆ ಸಾಗಿತ್ತು:

ಕಾಗೇರಿ: ವಿಧಾನಸಭಾಧ್ಯಕ್ಷನಾಗಿ ನಾಡಿನ ಒಳಿತಿಗೆ ಕೆಲಸಮಾಡಲು ಹೆಚ್ಚು ಶಕ್ತಿ ಲಭಿಸುವಂತೆ ಆಶೀರ್ವದಿಸಬೇಕು.
ಸ್ವಾಮೀಜಿ: ಆಶೀರ್ವಾದ ಸದಾ ಇದೆ. ಧರ್ಮ ಮಾರ್ಗ ದಲ್ಲಿ ತಾವು ನಡೆಯುವಾಗ ಸಿಗುವ ಶ್ರೇಯಸ್ಸು ಯಾವಾ ಗಲೂ ರಕ್ಷೆಯಾಗಿರುತ್ತದೆ. ಆ ಮಾರ್ಗ ದಿಂದ ವಿಚಲಿತರಾಗಬೇಡಿ ಅಷ್ಟೆ.

ಕಾಗೇರಿ: ನಮ್ಮೊಳಗಿನ ಭಗವಂತನ ಅರಿಯುವುದೆಂತು?
ಸ್ವಾಮೀಜಿ: ಜಗತ್ತಿನ ಪ್ರತೀ ಕ್ಷಣದ ವಿದ್ಯಮಾನಗಳು ಮತ್ತು ಚರ್ಯೆ ಗಳಲ್ಲಿ ಕಾಣದ ಶಕ್ತಿಯೊಂದರ ಪಾತ್ರ ಇದೆ ಎನ್ನುವ ಪ್ರಜ್ಞೆ ಮತ್ತು ಅದೇ ಶಕ್ತಿನನ್ನೊಳಗೂ ಇದ್ದು ನಿಯಂತ್ರಿಸುತ್ತಿದೆ ಎನ್ನುವ ಅರಿವಿದ್ದರೆ ಒಳ್ಳೆಯದು.

ಕಾಗೇರಿ: ಅದನ್ನೇ ಕೇಳುವುದು ಅದು ಹೇಗೆ ಸಾಧ್ಯ?
ಸ್ವಾಮೀಜಿ: ಯಾವಾಗಲೂ ಅಂತರಂಗದ ಜಾಗೃತಿ ಇದ್ದಾಗ ಆ ಅರಿವಾಗುತ್ತದೆ. ಆಗ ನಮ್ಮ ನಡೆಗಳ ಬಗ್ಗೆಯೂ ಎಚ್ಚರದಿಂದ ಇರುತ್ತೇವೆ. ಆದರೆ ಬಹಿರಂಗದ ಆಕರ್ಷಣೆಗಳಲ್ಲಿ ಹೆಚ್ಚು ವ್ಯಸ್ತರಾಗುತ್ತೇವೆ. ಅಂತರಂಗದ ಜಾಗೃತಿ ನಮ್ಮಲ್ಲಿ ಕ್ಷೀಣವಾದಾಗ ಒಳಗಿರುವ ದೇವರ ಅರಿವು ಅಸಾಧ್ಯ.

ಕಾಗೇರಿ: ಅದಕ್ಕೇನು ಮಾಡಬೇಕು ?
ಸ್ವಾಮೀಜಿ: ಸಂಸ್ಕಾರ ಮತ್ತು ಪ್ರಾರಬ್ಧ ಕರ್ಮಗಳು ಜೀವನವನ್ನು ನಿರ್ಧರಿಸುತ್ತವೆ. ಅಂತರಂಗದ ಬಗೆಗಿನ ಅರಿವಿಗೂ ಇದೇ ಕಾರಣ. ಒಳ್ಳೆಯ ಸಂಸ್ಕಾರ, ಒಳ್ಳೆಯ ಪ್ರಾರಬ್ಧ ಕರ್ಮದ ಫ‌ಲ ಇದ್ದಾಗ ದೇವರನ್ನು ಅರಿಯುವುದಕ್ಕೆ ಬೇಕಾದ ಮನಸ್ಥಿತಿ, ಶ್ರದ್ಧೆ ಮತ್ತು ದೇವರ ಅರಿವಿನೆಡೆಗೆ ನಡೆಯುವ ಸಮಯವನ್ನೂ ಹೊಂದಿಸಿಕೊಳ್ಳಬಹುದು.

ಕಾಗೇರಿ: ವರ್ತಮಾನದ ಪರಿಸ್ಥಿತಿ ಇದಕ್ಕೆ ಕಾರಣವೇ ಸ್ವಾಮೀಜಿ?
ಸ್ವಾಮೀಜಿ: ಖಂಡಿತ ಕಾಲಧರ್ಮ, ಯುಗಧರ್ಮಗಳು ಸಮಾಜವನ್ನು ಆ ಒಳಿತಿನ ಮಾರ್ಗದಲ್ಲಿ ನಮ್ಮನ್ನು ಮನ್ನಡೆಸಲು ಅಡ್ಡಿಯಾಗುತ್ತವೆ. ಆದೆರೆ ಆ ಸವಾಲುಗಳ ನಡುವೆಯೂ ನಾವು ಅಂತರಂಗಶುದ್ಧಿಗೆ ಬೇಕಾದ ಸಾಧನೆಯನ್ನು ಮಾಡಲು ಪ್ರಯತ್ನಿಸ ಬೇಕು. ಆಗ ದೇವರ ಅನುಗ್ರಹವೂ ಸಿದ್ಧಿಸುತ್ತದೆ. ಒಂದಷ್ಟು ವಿಪರೀತಗಳು ಕಣ್ಣಮುಂದೆ ನಡೆಯುತ್ತಿರುವಾಗ ಬೇಸರ ಆಗುತ್ತದೆ. ದೇವರ ದಯೆಯಿಂದ ಎಲ್ಲವೂ ಒಳ್ಳೆಯದಾಗಲಿ.
ಬಳಿಕ ಕಾಗೇರಿಯವರು ಭೋಜನ ಪ್ರಸಾದ ಸ್ವೀಕರಿಸಿ ತೆರಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಸುರೇಶ್‌ ನಾಯಕ್‌, ಕೆ. ಉದಯ್‌ ಕುಮಾರ ಶೆಟ್ಟಿ, ವಿಷ್ಣು ಪಾಡಿಗಾರ್‌, ಶಾಸಕ ಲಾಲಾಜಿ ಆರ್‌. ಮೆಂಡನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.