![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 9, 2020, 6:15 AM IST
ಹೊಸದಿಲ್ಲಿ: ವಿಶಾಖಪಟ್ಟಣದಲ್ಲಿ ಸಾವುನೋವಿಗೆ ಕಾರಣವಾದ ಎಲ್ಜಿ ಪಾಲಿಮರ್ಸ್ ಕಂಪೆನಿಗೆ ರಾಷ್ಟ್ರೀಯ ಹಸುರು ನ್ಯಾಯಮಂಡಳಿ (ಎನ್ಜಿಟಿ) 50 ಕೋಟಿ ರೂ. ದಂಡ ವಿಧಿಸಿದೆ. ಇದು ಮಧ್ಯಾಂತರ ಆದೇಶವಾಗಿದ್ದು, ಕೇಂದ್ರ ಸರಕಾರ ಹಾಗೂ ಆಂಧ್ರಪ್ರದೇಶ ಸರಕಾರಗಳಿಗೆ ನೋಟಿಸ್ ಜಾರಿಗೊಳಿಸಿರುವ ಎನ್ಜಿಟಿ, ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಆಗ್ರಹಿಸಿದೆ.
ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಎನ್ಜಿಟಿ ಮುಖ್ಯಸ್ಥ ನ್ಯಾ| ಆದರ್ಶ್ ಕುಮಾರ್ ಗೋಯೆಲ್, ಕಂಪೆನಿಯಲ್ಲಿ ಸುರಕ್ಷಾ ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈಗ ಮಧ್ಯಾಂತರವಾಗಿ ವಿಧಿಸಲಾಗಿರುವ ದಂಡವನ್ನು, ಕಂಪೆನಿಯ ಮಾರುಕಟ್ಟೆ ಮೌಲ್ಯವನ್ನು ಪರಿಗಣಿಸಿ ವಿಧಿಸ ಲಾಗಿದೆ. ಈ ದಂಡವನ್ನು ಕಂಪೆನಿಯು ವಿಶಾಖಪಟ್ಟಣ ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಪಾವತಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿ ದಂತೆ ಎನ್ಜಿಟಿಯ ಮುಂದಿನ ಆದೇಶಗಳಿಗೆ ಕಂಪೆನಿ ಬದ್ಧವಾಗಿರಬೇಕು’ ಎಂದು ಸೂಚಿಸಿದರು.
ಇಲಾಖೆಗಳಿಗೆ ನೋಟಿಸ್
ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ, ಎಲ್ಜಿ ಪಾಲಿಮರ್ಸ್ ಇಂಡಿಯಾ, ಆಂಧ್ರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ವಿಶಾಖ ಪಟ್ಟಣ ಜಿಲ್ಲಾಧಿಕಾರಿಯವರಿಗೂ ನೋಟಿಸ್ ಜಾರಿ ಗೊಳಿಸಿರುವ ಎನ್ಜಿಟಿ, ಮೇ 18ರಂದು ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದ್ದು ಅಂದು ತಾನು ನೀಡಿ ರುವ ನೋಟಿಸ್ಗೆ ಪ್ರತ್ಯುತ್ತರ ನೀಡಬೇಕೆಂದು ಸೂಚಿಸಿದೆ.
ಸಮಿತಿ ರಚನೆ
ಅನಿಲ ಸೋರಿಕೆಯ ಹಿಂದಿನ ಲೋಪದೋಷಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಐವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ನ್ಯಾ| ಆದರ್ಶ್ ಕುಮಾರ್ ರಚಿಸಿದ್ದಾರೆ. ಎನ್ಜಿಟಿಯಲ್ಲಿ ಈ ಪ್ರಕರಣದ ಮುಂದಿನ ವಿಚಾರಣೆ ಮೇ 18ರಂದು ಜರಗಲಿದ್ದು ಅಷ್ಟರೊಳಗೆ ಈ ಸಮಿತಿ ತನ್ನ ವರದಿ ಸಲ್ಲಿಸಬಹುದು ಎಂದು ನಿರೀಕ್ಷಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.