Lok Sabha: 10 ವರ್ಷದ ಬಳಿಕ ಕಾಂಗ್ರೆಸ್ಗೆ ಸಂಸತ್ನಲ್ಲಿ ಪ್ರತಿಪಕ್ಷ ಸ್ಥಾನ!
ಲೋಕಸಭೆ ಕಲಾಪ ನಡೆಸಲು ಶೇ.10ರಷ್ಟು ಸದಸ್ಯರು ಸದನದಲ್ಲಿ ಇರಬೇಕು.
Team Udayavani, Jun 6, 2024, 11:35 AM IST
ನವದೆಹಲಿ: ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ 99 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಖಾಲಿ ಇದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ಸ್ಥಾನವನ್ನು ಅಧಿಕೃತವಾಗಿ ಪಡೆದುಕೊಂಡಿದೆ.
ಇದನ್ನೂ ಓದಿ:ಜೂನ್ನಲ್ಲಿ ಕಾಲಿವುಡ್/ಟಾಲಿವುಡ್ ಫುಲ್ ಬ್ಯುಸಿ: ರಿಲೀಸ್ ಆಗಲಿದೆ ಸಾಲು ಸಾಲು ಚಿತ್ರಗಳು
2014ರಲ್ಲಿ 44 ಹಾಗೂ 2019ರಲ್ಲಿ 52 ಸ್ಥಾನ ಪಡೆದುಕೊಂಡಿದ್ದ ಕಾಂಗ್ರೆಸ್, ವಿಪಕ್ಷ ನಾಯಕನ ಸ್ಥಾನ ಪಡೆಯಲು ವಿಫಲಗೊಂಡಿತ್ತು. ಲೋಕಸಭೆಯ ಮೊದಲ ಅಧ್ಯಕ್ಷ ಜಿ.ವಿ. ಮಾಳವಂಕರ್ ಅವರು ವಿಧಿಸಿದ ನಿಯಮದಂತೆ, ಯಾವ ಪಕ್ಷ ಲೋಕಸಭೆಯ ಶೇ.10ರಷ್ಟು ಸದಸ್ಯರು ಅಂದರೆ 55 ಸ್ಥಾನ ಹೊಂದಿರುತ್ತಾರೋ ಆ ಪಕ್ಷದವರು ವಿಪಕ್ಷ ನಾಯಕನ ಹುದ್ದೆ ಅಲಂಕರಿಸಬಹುದು. ಲೋಕಸಭೆಯ ಕೋರಮ್ ಸಹ ಇದೇ ಪ್ರಮಾಣದಲ್ಲಿದೆ. ಅಂದರೆ, ಲೋಕಸಭೆ ಕಲಾಪ ನಡೆಸಲು ಶೇ.10ರಷ್ಟು ಸದಸ್ಯರು ಸದನದಲ್ಲಿ ಇರಬೇಕು.
2019ರ ಚುನಾವಣೆಯಲ್ಲಿ ಕೇವಲ 3 ಸ್ಥಾನಗಳ ಕೊರತೆಯಿಂದ ಕಾಂಗ್ರೆಸ್ ವಿಪಕ್ಷ ನಾಯಕ ಹುದ್ದೆ ಅಲಂಕರಿಸಿರಲಿಲ್ಲ. ಬದಲಾಗಿ, ಅಧಿರ್ ರಂಜನ್ ಚೌಧರಿ ಅವರನ್ನು ಲೋಕಸಭೆಯ ಕಾಂಗ್ರೆಸ್ ನಾಯಕನನ್ನಾಗಿ ಮಾಡಲಾಗಿತ್ತು. ಆದರೆ, ಈ ಬಾರಿ ಮತದಾರರು ಕಾಂಗ್ರೆಸ್ಗೆ ಸಂಪೂರ್ಣ ಅಧಿಕಾರವಲ್ಲವಾದರೂ, ವಿಪಕ್ಷ ನಾಯಕ ಹುದ್ದೆಯನ್ನು ದೊರಕಿಸಿಕೊಟ್ಟಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷ ನಾಯಕ ಸ್ಥಾನಕ್ಕೂ ಮಹತ್ವ ಹಾಗೂ ಪ್ರಮುಖ ಜವಾಬ್ದಾರಿಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.