ಉಡುಪಿ: ನ್ಯಾಯಕ್ಕಾಗಿ 29 ತಿಂಗಳಿಂದ ನ್ಯಾಯಮಂಡಳಿಗೆ ಅಲೆದಾಟ

 ತಂದೆಯನ್ನೇ ಹೊರದಬ್ಬಿದ ಮಕ್ಕಳು ; 29 ತಿಂಗಳಿಂದ ಸಿಗದ ನ್ಯಾಯ

Team Udayavani, Mar 8, 2022, 10:40 AM IST

ನ್ಯಾಯಕ್ಕಾಗಿ 29 ತಿಂಗಳಿಂದ ನ್ಯಾಯಮಂಡಳಿಗೆ ಅಲೆದಾಟ

ಉಡುಪಿ: ಲಕ್ಷಾಂತರ ರೂ. ಆದಾಯವಿರುವ ಕುಟುಂಬದ ಹಿರಿಯರಾಗಿ ದ್ದರೂ ದಿನದ ಊಟಕ್ಕಾಗಿ ದೇವಸ್ಥಾನ, ಭೂತ ಕೋಲ, ರಥೋತ್ಸವಗಳನ್ನು ಅವಲಂಬಿಸಿದೆ ಈ ಹಿರಿ ಜೀವ. ಮಕ್ಕಳಿಂದಲೇ ಮನೆಯಿಂದ ಹೊರದಬ್ಬಿಸಿಕೊಂಡ ಸಾಸ್ತಾನ ಮೂಲದ 72 ವರ್ಷದ ಹಿರಿಯ ನಾಗರಿಕ ಶ್ರೀನಿವಾಸ ತುಂಗರುನ್ಯಾಯಕ್ಕಾಗಿ ಕಳೆದ 29 ತಿಂಗಳಿಂದ ಎಸಿ, ಡಿಸಿ,ಹಿರಿಯ ನಾಗರಿಕರ ನ್ಯಾಯ ಮಂಡಳಿಗೆ ಅಲೆಯುತ್ತಿ ದ್ದಾರೆ ಎಂದು ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಅಧ್ಯಕ್ಷ ಡಾ| ರವೀಂದ್ರನಾಥ್‌ ಶಾನುಭಾಗ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಐರೋಡಿ ಗ್ರಾಮದ ತುಂಗ ಅವರಿಗೆ ಇಬ್ಬರು ಪುತ್ರರು, ಒರ್ವ ಪುತ್ರಿಯಿದ್ದಾಳೆ. ಇಬ್ಬರು ಎಂಜಿನಿ ಯರ್‌ಗಳಾಗಿದ್ದು, ಒಬ್ಬರು ಖಾಸಗಿ ವೃತ್ತಿಯಲ್ಲಿದ್ದು, ಲಕ್ಷಾಂತರ ರೂ. ಆದಾಯ ಪಡೆಯುತ್ತಿದ್ದಾರೆ. ಆದರೂ ತಂದೆಯನ್ನು ದೂರ ಇಟ್ಟಿದ್ದಾರೆ. ನ್ಯಾಯ ಮಂಡಳಿಯ ಮೊರೆ ಹೋಗಿದ್ದರೂ ನ್ಯಾಯ ಸಿಗಲಿಲ್ಲ ಎಂದು ಹೇಳಿದರು.

ಮಾಸಾಶನಕ್ಕೆ ಗೋಳಾಟ
2019ರಲ್ಲಿ ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿಯನ್ನು ಸಂಪರ್ಕಿಸಿ, ಹೆಂಡತಿ ಮಕ್ಕಳು ತಮ್ಮನ್ನು ಮನೆಗೆ ಸೇರಿಸಿಕೊಳ್ಳುವಂತೆ ಸಹಾಯವನ್ನು ಕೋರಿದ್ದರು. ಮಕ್ಕಳು ಇದಕ್ಕೆ ಒಪ್ಪಿಗೆ ನೀಡದಿದ್ದಾಗ ಮಾಸಾಶನಕ್ಕೆ ಬೇಡಿಕೆ ಇಟ್ಟಿದ್ದರು. ಸಹಾಯವಾಣಿ ಕೇಂದ್ರದಿಂದ ಪ್ರಯತ್ನಿಸಿದರೂ ಮನೆಯವರು ಪೂರಕವಾಗಿ ಸ್ಪಂದಿಸಿಲ್ಲ ಎಂದು ವಿವರ ನೀಡಿದರು.

2019ರಲ್ಲಿ ಕುಂದಾಪುರ ಹಿರಿಯ ನಾಗರಿಕರ ನ್ಯಾಯಮಂಡಳಿ ಅಧ್ಯಕ್ಷರಾದ ಎಸಿ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ 29 ತಿಂಗಳಲ್ಲಿ ನ್ಯಾಯಮಂಡಳಿ ವಿಚಾರಣೆ ನಡೆಸುತ್ತಲೇ ಇದ್ದು ಮಕ್ಕಳು ಹಾಜರಾಗದೇ
ತಪ್ಪಿಸಿಕೊಳ್ಳುತ್ತಿದ್ದಾರೆ ಎಂದರು.

ಇದೆಂತ ನ್ಯಾಯ ವ್ಯವಸ್ಥೆ ?
ನೋಟಿಸ್‌ ನೀಡಿದ ಮೂರು ತಿಂಗಳೊಳಗೆ ಪ್ರಕರಣದ ವಿಚಾರಣೆ ನಡೆಸಿ ಆದೇಶ ನೀಡಬೇಕು ಎಂದು ಹಿರಿಯ ನಾಗರಿಕರ ಸಂರಕ್ಷಣ ಕಾಯ್ದೆಯ ಸೆಕ್ಷನ್‌ 5(4)ರ‌ಲ್ಲಿ ಸ್ಪಷ್ಟವಿದೆ. ಪ್ರಕರಣದಲ್ಲಿ 29 ತಿಂಗಳು ಕಳೆದರೂ ಆದೇಶ ನೀಡುವುದು ಬಿಡಿ, ಆಪಾದಿತರನ್ನು ಕರೆತರಲೂ ನ್ಯಾಯ ಮಂಡಳಿಗೆ ಸಾಧ್ಯವಾಗಿಲ್ಲ. ಇಂತಹ ನ್ಯಾಯ ವ್ಯವಸ್ಥೆಯಿಂದ ಏನನ್ನು ನಿರೀಕ್ಷೆ ಮಾಡಬಹುದು ಎಂದು ಪ್ರಶ್ನಿಸಿದರು.

ಪಿಐಎಲ್‌ ಹೂಡಲು ನಿರ್ಧಾರ
ತುಂಗರು 2021ರಲ್ಲಿ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಪತ್ರಕ್ಕೂ ಸ್ಪಂದನೆ ಇಲ್ಲ. ಈ ಬಗ್ಗೆ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಲು ನಿರ್ಧರಿಸಿದೆ ಡಾ| ರವೀಂದ್ರನಾಥ್‌ ತಿಳಿಸಿದ್ದಾರೆ.

ಶ್ರೀನಿವಾಸರ ಅಳಲು
20 ವರ್ಷಗಳ ಹಿಂದೆ ಕುಟುಂಬದ ಕೆಲ ಸದಸ್ಯರೊಂದಿಗೆ ಮಂಡ್ಯದಲ್ಲಿ ಹೊಟೇಲ್‌ ನಡೆಸುತ್ತಿದ್ದೆ.ಭಿನ್ನಾಭಿಪ್ರಾಯವು ಕೌಟುಂಬಿಕ ಕಲಹವಾಗಿ ಪರಿಣಮಿಸಿ, ಮಕ್ಕಳು ಮನೆಯಿಂದ ಹೊರ ಹಾಕಿದರು. ಅನಂತರ ಬೆಂಗಳೂರಿನಲ್ಲಿ ಕೆಲವರ್ಷ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಪ್ರಸ್ತುತ ವೃದ್ಧಾಪ್ಯದಿಂದ ಬಳಲುತ್ತಿದ್ದೇನೆ. 2018ರಲ್ಲಿ ಸ್ವಗ್ರಾಮ ಸಾಸ್ತಾನಕ್ಕೆ ಹಿಂದಿರುಗಿದ್ದೇನೆ. ಈ ಮಧ್ಯೆ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡು ನಡೆದಾಡಲೂ ಅಸಾಧ್ಯವಾಗಿದೆ ಎಂದು ಶ್ರೀನಿವಾಸ್‌ ತುಂಗರು ಸಂಕಷ್ಟ ತೋಡಿಕೊಂಡರು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.