Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

ವಕ್ಫ್‌ ಆಸ್ತಿ ರಾಷ್ಟ್ರೀಕರಣವೇ ಎಲ್ಲ ಸಮಸ್ಯೆಗೂ ಪರಿಹಾರ ಎಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌

Team Udayavani, Nov 5, 2024, 9:53 PM IST

Yathnal-eshwarappa

ವಿಜಯಪುರ: ರಾಜ್ಯದಲ್ಲಿ ವಕ್ಫ್ ಆಸ್ತಿ ಕುರಿತು ಅನ್ವರ್‌ ಮಾಣಿಪ್ಪಾಡಿ ವರದಿ ಪ್ರಕಾರ ಕಾಂಗ್ರೆಸ್‌ ನಾಯಕರು ಸುಮಾರು 2.70 ಲಕ್ಷ ಕೋಟಿ ಮೌಲ್ಯದಷ್ಟು ವಕ್ಫ್ ಆಸ್ತಿ ಕಬಳಿಸಿದ್ದಾರೆ. ಈ ವರದಿಯಲ್ಲಿ ಈಗಿನ ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಖಮರುಲ್‌ ಇಸ್ಲಾಂ, ರೆಹಮಾನ್‌ ಖಾನ್‌, ಸಿ.ಎಂ.ಇಬ್ರಾಹಿಂ, ಬೆಂಗಳೂರಿನ ಶಾಸಕ ಹ್ಯಾರಿಸ್‌ ಹೆಸರುಗಳಿವೆ. ವಕ್ಫ್ ನಿಂದ ಯಾವುದೇ ಮುಸ್ಲಿಮರಿಗೆ ಅನುಕೂಲವಾಗಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು.

ಸೋಮವಾರದಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಯ 2ನೇ ದಿನವಾದ ಮಂಗಳವಾರ ಮಾತನಾಡಿ, ವಕ್ಫ್ ಆಸ್ತಿ ರಕ್ಷಣೆ ಮಾಡಿ ಕ್ರೋಡೀಕರಣ ಮಾಡುತ್ತೇವೆಂದು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಾಕಿದ್ದು ನಿಜ. ಇದರರ್ಥ ಬೇಕಾಬಿಟ್ಟಿಯಾಗಿ ಕಾಂಗ್ರೆಸ್‌ ನಾಯಕರು ನುಂಗಿರುವ ಆಸ್ತಿಯ ವಾಪಸ್‌ ಪಡೆದು ರಕ್ಷಣೆ ಮಾಡುವುದಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ವಕ್ಫ್  ಕಾಯ್ದೆಗೆ ತಿದ್ದುಪಡಿ ತರುತ್ತಿದೆ. ಅದನ್ನು ತಡೆಯಲು ಜಗತ್ತಿನ ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಈ ಕಾಯ್ದೆಗೆ ಅಂಗೀಕಾರ ಪಡೆಯುವುದರೊಳಗೆ ವಕ್ಫ್ ಸಚಿವ ಜಮೀರ್‌ ಅಹ್ಮದ್‌ ರಾತ್ರೋರಾತ್ರಿ ವಿಜಯಪುರ, ಬೀದರ, ಕಲಬುರಗಿ, ಯಾದಗಿರಿಗೆ ಧಾವಿಸಿ ರಾಜ್ಯದಲ್ಲಿ ಲಕ್ಷಾಂತರ ಎಕರೆ ವಕ್ಫ್ ಮಾಡುವ ಹುನ್ನಾರ ಮಾಡುತ್ತಿದ್ದಾರೆ ಎಂದರು.

ಯಾವುದೇ ನೋಟಿಸ್‌ ಕೊಡದೇ ರೈತರ ಜಮೀನು, ಮಠಗಳು, ಸಂಘ-ಸಂಸ್ಥೆಗಳ ದಾಖಲೆಗಳಲ್ಲಿ ವಕ್ಫ್ ಎಂದು ಸೇರಿಸುತ್ತಿದ್ದಾರೆ. ಹೀಗಾಗಿ ಜನರು ಹೊರಗಡೆ ಬಂದು ಹೋರಾಟ ಮಾಡಿ ನಮ್ಮ ದೇಶ, ಧರ್ಮ, ಭೂಮಿ ರಕ್ಷಣೆ ಮಾಡಿಕೊಳ್ಳಬೇಕು. ವಕ್ಫ್ ಆಸ್ತಿ ಒತ್ತುವರಿಯಾಗಿದ್ದನ್ನು ತೆರವು ಮಾಡಿ ಮೂಲ ಮಾಲೀಕರಿಗೆ ನೀಡಬೇಕು. ಎಲ್ಲ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಮಾಡಬೇಕು. ವಕ್ಫ್ ಆಸ್ತಿ ರಾಷ್ಟ್ರೀಕರಣವೇ ಎಲ್ಲ ಸಮಸ್ಯೆಗೂ ಪರಿಹಾರ ಎಂದರು.

ಧರಣಿ ಸ್ಥಳಕ್ಕೆ ಕೆ.ಎಸ್‌.ಈಶ್ವರಪ್ಪ ಭೇಟಿ:
ವಕ್ಫ್‌ ನೋಟಿಸ್‌ ವಿರುದ್ಧದ  2ನೇ ದಿನವಾದ ಮಂಗಳವಾರದಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಿ ಅಹೋರಾತ್ರಿ ಧರಣಿ ಬೆಂಬಲಿಸಿದರು.  ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರೊಂದಿಗೆ ಕೆಲಹೊತ್ತು ಸಮಾಲೋಚಿಸಿದರು.

ಹೆಬ್ಬಾಳ್ಕರ್ ರಾಜೀನಾಮೆ ನೀಡಲಿ; ಆಪ್ತ ಸಹಾಯಕನ ವಶಕ್ಕೆ ಪಡೆಯಲಿ:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ  ಸಹಾಯಕ ಸೋಮು  ನಿರಂತರ ಮಾನಸಿಕ ಕಿರುಕುಳ ನೀಡಿ ಹಿಂಸೆ ನೀಡಿದ ಪರಿಣಾಮ ಬೆಳಗಾವಿಯಲ್ಲಿ ಸರ್ಕಾರಿ ನೌಕರರೊಬ್ಬರು ತಹಶೀಲ್ದಾರ್‌ ಕಚೇರಿಯಲ್ಲಿ  ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕಾಂಗ್ರೆಸ್‌ ಸರ್ಕಾರದಲ್ಲಿ ಇದು ಮೊದಲನೇ ಆತ್ಮಹತ್ಯೆ ಏನಲ್ಲ. ವಾಲ್ಮೀಕಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರನ್ ಕೂಡ ಸಚಿವ ನಾಗೇಂದ್ರ ಮಾನಸಿಕ ಹಿಂಸೆ ತಾಳಲಾಗದೆ ಆತ್ಮಹತ್ಯೆಗೆ ಶರಣಾಗಿದ್ದರು. ಸಚಿವೆ ಹೆಬ್ಬಾಳ್ಕರ್ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆಪ್ತ ಸಹಾಯಕ ಸೋಮುರನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ನಡೆಸಿದರೆ ಮಾತ್ರ ಸತ್ಯ ಹೊರಬರಲಿದೆ ಎಂದು ಶಾಸಕ ಯತ್ನಾಳ್‌ ಹೇಳಿದರು.

ಟಾಪ್ ನ್ಯೂಸ್

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

13-uv-fusion

UV Fusion: ತೆರೆಯಲು ಬಯಸದ ಮನದ ಪುಟ!

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

15-yellapur

Yellapur: ಕಂದಕಕ್ಕೆ ಬಿದ್ದ ಸರಕು ತುಂಬಿದ ಲಾರಿ; ಚಾಲಕ ಹಾಗೂ ನಿರ್ವಾಹಕ ಪಾರು

Manipal: ಫೆ.21, 22ರಂದು 6 ನೇ ರಾಷ್ಟ್ರೀಯ ಸಮ್ಮೇಳನ

Manipal: ಮಾಹೆ; ಆಧುನಿಕ ಗ್ರಂಥಾಲಯಗಳ ನಿರ್ವಹಣೆ: ಫೆ. 21, 22: 6ನೇ ರಾಷ್ಟ್ರೀಯ ಸಮ್ಮೇಳನ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.