![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 10, 2022, 11:56 AM IST
ಬೆಂಗಳೂರು : ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ.40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ಮಾಡಿರುವ ಟ್ವೀಟ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ತೀವ್ರ ವಿಚಲಿತಗೊಳಿಸಿದೆ.
ಕಾಂಗ್ರೆಸ್ ಮಾಡಿರುವ ಈ ಮೂರು ಟ್ವೀಟ್ ಗೆ ಬೊಮ್ಮಾಯಿ ಅವರು ಈ ಮಟ್ಟದಲ್ಲಿ ಕಳವಳಗೊಳ್ಳುವ ಅಗತ್ಯವಿತ್ತೇ ? ಅಷ್ಟಕ್ಕೂ ಅವರು ಆತಂಕಗೊಳ್ಳುವಂಥ ವಿದ್ಯಮಾನಗಳು ಬಿಜೆಪಿಯಲ್ಲಿ ನಡೆಯುತ್ತಿವೆಯೇ ? ಎಂಬ ಪ್ರಶ್ನೆಗಳಿಗೆ ಉತ್ತರ ಕೆದಕುವುದಕ್ಕೆ ಅವರೇ ಈಗ ದಾರಿ ಮಾಡಿಕೊಟ್ಟಂತಾಗಿದೆ.
ಕಾಂಗ್ರೆಸ್ ಮಾಡಿದ ಟ್ವೀಟ್ ಎಲ್ಲ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಬೇಸರಗೊಂಡ ಅವರು ತಮ್ಮ ಆಪ್ತ ಸಚಿವರೆಲ್ಲರಿಗೂ ದೂರವಾಣಿ ಕರೆ ಮಾಡಿ ಕಾಂಗ್ರೆಸ್ ಆರೋಪಕ್ಕೆ ಕೌಂಟರ್ ಮಾಡುವಂತೆ ಸೂಚಿಸಿದ್ದಾರೆಂಬುದು ಮೂಲಗಳು ಹೇಳುತ್ತಿವೆ.
ಹೀಗಾಗಿ ಸಚಿವರಾದ ಆರ್.ಅಶೋಕ, ಸಿ.ಸಿ.ಪಾಟೀಲ್, ಡಾ.ಸುಧಾಕರ್, ಸುನೀಲ್ ಕುಮಾರ್, ಬೈರತಿ ಬಸವರಾಜ್ ಸೇರಿದಂತೆ ಒಬ್ಬರಾದ ಮೇಲೆ ಒಬ್ಬರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದರು. ಸಾಲದಕ್ಕೆ ಅವಧಿ ಪೂರೈಕೆ ಹೊಸ್ತಿಲಲ್ಲಿ ಇರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೂಡಾ ಬೊಮ್ಮಾಯಿ ಪರ ಬ್ಯಾಟ್ ಬೀಸಿದರು. ಇಷ್ಟಾದ ಮೇಲೂ ಬೊಮ್ಮಾಯಿ ನಾಯಕತ್ವ ಅಭಾದಿತವೇ ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.
ಕಾಂಗ್ರೆಸ್ ಆರೋಪ ಏನು ? :
ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ.ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡುತ್ತಿಲ್ಲ. ಯಾರಲ್ಲೂ ಸಂಭ್ರಮ ಇಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಟ್ವೀಟ್ ಮೂಲಕ ಸಿಎಂ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿತ್ತು.
ಬಿಜೆಪಿಯಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಇದೆ, ಸಂಘಟನಾತ್ಮಕವಾಗಿ ಬದಲಾವಣೆಯಾಗುತ್ತದೆ ಎಂಬ ಬಿಸಿ ಬಿಸಿ ಚರ್ಚೆ ಮಧ್ಯೆಯೇ ಕಾಂಗ್ರೆಸ್ ಈ ರೀತಿಯ ವ್ಯಂಗ್ಯಬರಿತ ಟ್ವೀಟ್ ಮಾಡಿ, ಬೊಮ್ಮಾಯಿ ಅವರನ್ನು “ಕೈಗೊಂಬೆ ಸಿಎಂ” ಎಂದು ಟೀಕಿಸಿತ್ತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.