Opinion: ಹರ್ಯಾಣ ಚುನಾವಣ ದಿನಾಂಕ ಬದಲಿಸಲು ಬಿಜೆಪಿ ಆಯೋಗಕ್ಕೆ ಮನವಿ ಸಲ್ಲಿಸಿದ್ದೇಕೆ?
ಅಕ್ಟೋಬರ್ 1ರಂದು ಹರ್ಯಾಣ ವಿಧಾನಸಭಾ ಚುನಾವಣೆ ನಿಗದಿಯಾಗಿತ್ತು.
Team Udayavani, Aug 27, 2024, 4:21 PM IST
ನವದೆಹಲಿ: ಹರ್ಯಾಣ ವಿಧಾನಸಭಾ ಚುನಾವಣ ದಿನಾಂಕವನ್ನು ಬದಲಾಯಿಸಬೇಕೆಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕ (Bhatatiya Janata Party’s) ಕೇಂದ್ರ ಚುನಾವಣ ಆಯೋಗ (ECI)ಕ್ಕೆ ಮನವಿ ಮಾಡಿಕೊಂಡಿದೆ.
ವಾರಾಂತ್ಯದ ದೀರ್ಘ ರಜೆಯಿಂದಾಗಿ ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿ ಚುನಾವಣೆ ವಿಳಂಬ ಮಾಡಲು ಮನವಿ ಮಾಡಿಕೊಂಡಿರುವುದಾಗಿ ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಭಯದಿಂದ ಚುನಾವಣ ದಿನಾಂಕ ಮುಂದೂಡಲು ಮನವಿ ಮಾಡಿಲ್ಲ. ಚುನಾವಣೆ ಯಾವ ದಿನಾಂಕದಂದು ನಡೆದರು ನಾವು ಅದಕ್ಕೆ ಸಿದ್ದರಾಗಿದ್ದೇವೆ ಎಂದು ತಿಳಿಸಿದೆ.
ರಾಜಸ್ಥಾನ ವಿಧಾನಸಭಾ ಚುನಾವಣ ದಿನಾಂಕ ಬದಲಾವಣೆ ಮಾಡಬೇಕೆಂಬ ಬಿಜೆಪಿ ಬೇಡಿಕೆಗೆ ಇಂಡಿಯನ್ ನ್ಯಾಷನಲ್ ಲೋಕ್ ದಳ (INLD) ಬೆಂಬಲ ವ್ಯಕ್ತಪಡಿಸಿದೆ.
ರಾಜ್ಯ ಚುನಾವಣ ಘಟಕ ಬಿಜೆಪಿ ಮನವಿಯನ್ನು ದೆಹಲಿಯಲ್ಲಿರುವ ಕೇಂದ್ರ ಚುನಾವಣ ಆಯೋಗಕ್ಕೆ ರವಾನಿಸಿದ್ದು, ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ತಿಳಿಸಿದೆ. ಅಕ್ಟೋಬರ್ 1ರಂದು ಹರ್ಯಾಣ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಅಕ್ಟೋಬರ್ 4ಕ್ಕೆ ಫಲಿತಾಂಶ ಘೋಷಣೆ ಎಂದು ಆಯೋಗ ಘೋಷಣೆ ಮಾಡಿತ್ತು.
Long Weekends:
ಸೆಪ್ಟೆಂಬರ್ 28-29 ವಾರಾಂತ್ಯದ ರಜೆ, ಆಕ್ಟೋಬರ್ 2, 3 ಕೂಡಾ ರಜೆ, ಸರ್ಕಾರಿ/ಅಥವಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ವ್ಯಕ್ತಿ ಸೆಪ್ಟೆಂಬರ್ 30ರಂದು ರಜೆ ತೆಗೆದುಕೊಂಡರೆ ಅಕ್ಟೋಬರ್ 1ರ ಚುನಾವಣೆ ದಿನಾಂಕ ಸೇರಿದಂತೆ ಆರು ದಿನಗಳ ದೀರ್ಘ ರಜೆ ಸಿಗಲಿದೆ.
ಗುರುಗ್ರಾಮ್, ಫರಿದಾಬಾದ್, ರೋಹ್ಟಕ್, ಸೋನಿಪತ್ ಮತ್ತು ಭಿವಾನಿ ಸೇರಿದಂತೆ ನ್ಯಾಷನಲ್ ಕ್ಯಾಪಿಟಲ್ ಪ್ರದೇಶದ 14 ಜಿಲ್ಲೆಗಳು ನಗರ ಪ್ರದೇಶವನ್ನು ಹೊಂದಿದ್ದು, ವಾರಾಂತ್ಯದ ದೀರ್ಘ ರಜೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂಬುದು ಬಿಜೆಪಿ ವಾದವಾಗಿದೆ.
ಇದನ್ನೂ ಓದಿ:Kadaba: ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ; ತಪ್ಪಿದ ಭಾರಿ ಅನಾಹುತ
2024ರ ಲೋಕಸಭಾ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೇ.67.9ರಷ್ಟು ಮತದಾನವಾಗಿದ್ದು, ನಗರ ಪ್ರದೇಶದಲ್ಲಿ ಶೇ.57.9ರಷ್ಟು ಮತದಾನವಾಗಿತ್ತು.
ಅಕ್ಟೋಬರ್ 6ರೊಳಗೆ ಜಮ್ಮು-ಕಾಶ್ಮೀರ ಮತ್ತು ಹರ್ಯಾಣದ ಮತದಾನ ಪ್ರಕ್ರಿಯೆ, ಫಲಿತಾಂಶ ಸೇರಿದಂತೆ ಎಲ್ಲವನ್ನೂ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಕೇಂದ್ರ ಚುನಾವಣ ಆಯೋಗ ಮತದಾನ ದಿನಾಂಕ ಮುಂದೂಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.