ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಗೋಲ್ಡಿ ಬ್ರಾರ್‌ ಹಾಗೂ ರೋಹಿತ್‌ ಗೋದಾರ್‌ ಪಾತಕ ಚಟುವಟಿಕೆಯ ರೂವಾರಿಗಳು..

ನಾಗೇಂದ್ರ ತ್ರಾಸಿ, Oct 14, 2024, 1:24 PM IST

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಡಿಸಿಎಂ ಅಜಿತ್‌ ಪವಾರ್‌ ಬಣದ ಎನ್‌ ಸಿಪಿ ನಾಯಕ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ಹೊತ್ತುಕೊಂಡಿದೆ. ಇದರ ಹೊರತಾಗಿಯೂ ಹೈ ಪ್ರೊಫೈಲ್‌ ಪ್ರಕರಣಗಳಲ್ಲೂ ಲಾರೆನ್ಸ್‌ ಹೆಸರು ಹರಿದಾಡುತ್ತಿದ್ದರೂ ಕೂಡಾ ಗುಜರಾತ್‌ ನ ಸಬರ್‌ ಮತಿ ಜೈಲಿನಲ್ಲಿರುವ ಪಾತಕಿಯನ್ನು ತಮ್ಮ ಕಸ್ಟಡಿಗೆ ಪಡೆದುಕೊಳ್ಳಲು ಮುಂಬೈ ಕ್ರೈಂ ಬ್ರ್ಯಾಂಚ್‌ ಭಾರೀ ಸವಾಲನ್ನು ಎದುರಿಸುತ್ತಿದೆ!

ಏಪ್ರಿಲ್‌ ತಿಂಗಳಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣದ ಹೊಣೆ ಕೂಡಾ ಬಿಷ್ಣೋಯಿ ಗ್ಯಾಂಗ್‌ ಹೊತ್ತುಕೊಂಡಿತ್ತು. ಆ ಬಳಿಕ ಸಲ್ಮಾನ್‌ ಖಾನ್‌ ಹಾಗೂ ನಿವಾಸದ ಭದ್ರತೆಯನ್ನು ಬಿಗಿಗೊಳಿಸಿದೆ.

ಲಾರೆನ್ಸ್‌ ಬಿಷ್ಣೋಯಿ ವಶಕ್ಕೆ ಪಡೆಯಲು ಮುಂಬೈ ಪೊಲೀಸರಿಗೆ ಅಡ್ಡಿಯಾಗಿದ್ದೇನು?

ಗುಜರಾತ್‌ ನ ಸಬರಮತಿ ಜೈಲಿನಲ್ಲಿರುವ ನಟೋರಿಯಸ್‌ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯಿಯನ್ನು ತಮ್ಮ ಕಸ್ಟಡಿಗೆ ಒಪ್ಪಿಸಿ ಎಂದು ಮುಂಬೈ ಪೊಲೀಸರು ಹಲವು ಮನವಿಯನ್ನು ಸಲ್ಲಿಸಿದ್ದರು ಕೂಡಾ ಅದು ನಿಷ್ಪ್ರಯೋಜಕವಾಗಿತ್ತು ಎಂದು ವರದಿ ತಿಳಿಸಿದೆ.

ಅಂದ ಹಾಗೆ ಗುಜರಾತ್‌ ಜೈಲಿನಲ್ಲಿರುವ ಬಿಷ್ಣೋಯಿಯನ್ನು‌ ಮಹಾರಾಷ್ಟ್ರ ಪೊಲೀಸರಿಗೆ ಒಪ್ಪಿಸುತ್ತಿಲ್ಲ ಯಾಕೆ ಎಂಬ ಪ್ರಶ್ನೆ ಸಹಜ. ಇದಕ್ಕೆ ಕಾರಣ ಕೇಂದ್ರ ಗೃಹ ಸಚಿವಾಲಯ! ಅಹಮದಾಬಾದ್‌ ನ ಸಬರಮತಿ ಜೈಲಿನಲ್ಲಿರುವ ಬಿಷ್ಣೋಯಿ ಟ್ರಾನ್ಸ್‌ ಫರ್‌ (ಒಂದು ಜೈಲಿನಿಂದ ಮತ್ತೊಂದು ರಾಜ್ಯಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ)ಗೆ ಸಚಿವಾಲಯ ನಿರ್ಬಂಧ ವಿಧಿಸಿರುವುದಾಗಿ ವರದಿ ವಿವರಿಸಿದೆ.

2024ರ ಆಗಸ್ಟ್‌ ವರೆಗೆ ಈ ಆದೇಶ ಅನ್ವಯ ಎಂದು ಸಚಿವಾಲಯ ತಿಳಿಸಿತ್ತು. ಆದರೆ ಇದೀಗ ಆ ಅವಧಿಯನ್ನು‌ ವಿಸ್ತರಿಸಲಾಗಿದೆ ಎಂದು ವರದಿ ತಿಳಿಸಿದೆ. ಗಡಿಭಾಗದ ಡ್ರಗ್ಸ್‌ ಕಳ್ಳಸಾಗಣೆ ಪ್ರಕರಣದ ಸಂಬಂಧ 2023ರ ಆಗಸ್ಟ್‌ ನಲ್ಲಿ ಗ್ಯಾಂಗ್‌ ಸ್ಟರ್‌ ಬಿಷ್ಣೋಯಿಯನ್ನು ದೆಹಲಿಯ ತಿಹಾರ್‌ ಜೈಲಿನಿಂದ ಸಬರಮತಿ ಸೆಂಟ್ರಲ್‌ ಜೈಲ್‌ ಗೆ ಸ್ಥಳಾಂತರಿಸಲಾಗಿತ್ತು.

ಕುಖ್ಯಾತ ಪಾತಕಿ ಲಾರೆನ್ಸ್‌ ಬಿಷ್ಣೋಯಿ ವಿರುದ್ಧ 12ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಅಷ್ಟೇ ಅಲ್ಲ‌ ಪಂಜಾಬ್‌ ನ ಖ್ಯಾತ ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯ ಹೊಣೆಯನ್ನು ಬಿಷ್ಣೋಯಿ ಗ್ಯಾಂಗ್‌ ಹೊತ್ತುಕೊಂಡಿತ್ತು.

ಬಿಷ್ಣೋಯಿ ಜೈಲಿನಲ್ಲಿದ್ದಾಗ ಈತನ ಗ್ಯಾಂಗ್‌ ನ ಕಾರ್ಯಾಚರಣೆಗಳನ್ನು ಲಾರೆನ್ಸ್‌ ಗ್ಯಾಂಗ್‌ ನ ವಿದೇಶದಲ್ಲಿ ನೆಲೆಸಿರುವ ಮೂವರು ನಟೋರಿಯಸ್‌ ಗ್ಯಾಂಗ್‌ ಸ್ಟರ್ಸ್‌ ಗಳು ನೋಡಿಕೊಳ್ಳುತ್ತಾರೆ. ಲಾರೆನ್ಸ್‌ ಸಹೋದರ ಅನ್ಮೋಲ್‌ ಬಿಷ್ಣೋಯಿ, ಗೋಲ್ಡಿ ಬ್ರಾರ್‌ ಹಾಗೂ ರೋಹಿತ್‌ ಗೋದಾರ್‌ ಪಾತಕ ಚಟುವಟಿಕೆಯ ರೂವಾರಿಗಳಾಗಿದ್ದಾರೆ. ಆರಂಭದಲ್ಲಿ‌ ಸಣ್ಣ-ಪುಟ್ಟ ಅಪರಾಧ ಮಾಡುತ್ತಿದ್ದ ದಾವೂದ್‌ ಇಬ್ರಾಹಿಂ 1990ರ ದಶಕದಲ್ಲಿ ಹೇಗೆ ಬೃಹತ್‌ ಭಯೋತ್ಪಾದಕ ಗ್ಯಾಂಗ್‌ ಅನ್ನು ಸಂಘಟಿಸಿದ್ದನೋ ಅದೇ ರೀತಿ ಈ ಬಿಷ್ಣೋಯಿ ಸಂಘಟನೆ ಕೂಡಾ ದೊಡ್ಡ ಪ್ರಮಾಣದಲ್ಲಿ ಬೆಳೆದು ಬಿಟ್ಟಿರುವುದಾಗಿ ಎನ್‌ ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ.

ಭಾನುವಾರ(ಅ.13) ಬಿಷ್ಣೋಯಿ ಗ್ಯಾಂಗ್‌ ಎನ್‌ ಸಿಪಿ ಮುಖಂಡ ಬಾಬಾ ಸಿದ್ದಿಖಿಯನ್ನು ಹ*ತ್ಯೆಗೈದಿರುವುದಾಗಿ ಹೊಣೆ ಹೊತ್ತುಕೊಂಡಿತ್ತು. ಈ ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಶಾರ್ಪ್‌ ಶೂಟರ್ಸ್‌ ಗಳನ್ನು ಬಂಧಿಸಿದ್ದು, ಆರೋಪಿಗಳು ಬಿಷ್ಣೋಯಿ ಗ್ಯಾಂಗ್‌ ಹೆಸರು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಬಿಷ್ಣೋಯಿ ಸಮುದಾಯ ದೇವರು ಎಂದೇ ಪೂಜಿಸುವ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದ ಪ್ರಕರಣದ ನಂತರ ಬಿಷ್ಣೋಯಿ ಗ್ಯಾಂಗ್‌ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮೇಲೆ ತಿರುಗಿಬಿದ್ದಿದ್ದು, ದಾಳಿ ನಡೆಸಲು ಸಂಚು ರೂಪಿಸಿತ್ತು. ಇದೀಗ ಸಿದ್ದಿಖಿ ಕೂಡಾ ಸಲ್ಮಾನ್‌ ಜೊತೆ ತುಂಬಾ ನಿಕಟ ಸಂಬಂಧ ಹೊಂದಿದ್ದರ ಪರಿಣಾಮ ಹ*ತ್ಯೆಗೈದಿರುವುದಾಗಿ ಬಿಷ್ಣೋಯಿ ಗ್ಯಾಂಗ್‌ ಸಾಮಾಜಿಕ ಜಾಲತಾಣದ ಪೋಸ್ಟ್‌ ನಲ್ಲಿ ಉಲ್ಲೇಖಿಸಿತ್ತು. ಅಷ್ಟೇ ಅಲ್ಲ ಯಾರೇ ಆಗಲಿ ಸಲ್ಮಾನ್‌ ಖಾನ್‌ ಅಥವಾ ದಾವೂದ್‌ ಗ್ಯಾಂಗ್‌ ಗೆ ನೆರವು ನೀಡಿದರೆ ಅವರನ್ನು ಬಿಡುವುದಿಲ್ಲ ಎಂಬ ಬೆದರಿಕೆ ಕೂಡಾ ಹಾಕಿತ್ತು.

ಕಳೆದ ಕೆಲವು ವರ್ಷಗಳಿಂದ ಲಾರೆನ್ಸ್‌ ಗ್ಯಾಂಗ್‌ ಸಲ್ಮಾನ್‌ ಖಾನ್‌ ಮೇಲೆ ದಾಳಿ ನಡೆಸಲು ಸಂಚು ರೂಪಿಸಿತ್ತು. ಏಪ್ರಿಲ್‌ ತಿಂಗಳಿನಲ್ಲಿ ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಆಗಮಿಸಿ, ನಿವಾಸದ ಹೊರಭಾಗದಲ್ಲಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿತ್ತು. 2022ರಲ್ಲಿ ಸಿಧು ಮೂಸೆವಾಲನಿಗೆ ಆದ ಗತಿ ನಿನಗೂ (ಸಲ್ಮಾನ್‌ ಖಾನ್)‌ ಆಗಲಿದೆ ಎಂದು ಎಚ್ಚರಿಕೆಯ ಪತ್ರ ಕಳುಹಿಸಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Actor Darshan Bail: ನಟ ದರ್ಶನ್‌ಗೆ ಬಳ್ಳಾರಿ ಜೈಲಲ್ಲೇ ದಸರಾ ಹಬ್ಬ?

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

Nagpur: 6 ವರ್ಷಗಳಿಂದ ನಕಲಿ ವೈದ್ಯನ ದರ್ಬಾರ್:‌ ದೂರು ದಾಖಲು, ಆರೋಪಿ ಪರಾರಿ!

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

ವೈದ್ಯೆಯ ಮೇಲೆ ಅತ್ಯಾ*ಚಾರ ಎಸಗಿ ಕೊಂದಿದ್ದು ಸಂಜಯ್‌ ರಾಯ್:‌ ಸಿಬಿಐ ಚಾರ್ಜ್‌ ಶೀಟ್‌ ಸಲ್ಲಿಕೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7

Shutter Box: ಈಶಾನ್ಯದಲ್ಲಿ ಕರಾವಳಿ ಪ್ರವಾಸೋದ್ಯಮ ಪ್ರಚಾರ

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

6

Karkala: ಪರಪಾಡಿ ಸೇತುವೆ ಬಳಿ ನಿತ್ಯವೂ ಪರದಾಟ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.