![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 9, 2021, 11:15 PM IST
ಕೋಲ್ಕತಾ/ನವದೆಹಲಿ: ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವ ಉದ್ದೇಶದಿಂದಲೇ ಲಸಿಕೆಗಳಿಗೆ ಶೇ.5, ಆಕ್ಸಿಜನ್ ಕಾನ್ಸಂಟ್ರೇಷನ್ಗಳಿಗೆ, ಔಷಧಗಳಿಗೆ ಶೇ.12 ತೆರಿಗೆ ವಿಧಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೊರೊನಾ ಔಷಧಗಳಿಗೆ, ಆಕ್ಸಿಜನ್ ಕಾನ್ಸಂಟ್ರೇಷನ್ಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಅದಕ್ಕೆ ಉತ್ತರವಾಗಿ ಕೇಂದ್ರ ವಿತ್ತ ಸಚಿವರು 16 ಟ್ವೀಟ್ಗಳ ಮೂಲಕ ತೆರಿಗೆ ವಿಧಿಸಿದ ಉದ್ದೇಶವನ್ನು ವಿವರಿಸಿದ್ದಾರೆ. ಪೂರ್ಣ ಪ್ರಮಾಣದಲ್ಲಿ ಜಿಎಸ್ಟಿಯಿಂದ ವಿನಾಯಿತಿ ನೀಡಿದರೆ, ಸ್ಥಳೀಯವಾಗಿ ಇರುವ ಉತ್ಪಾದಕರಿಗೆ ಅನಾನುಕೂಲವಾಗುತ್ತದೆ. ಜತೆಗೆ ಗ್ರಾಹಕರಿಗೆ ಕೂಡ ಹೆಚ್ಚಿನ ದರ ಪಾವತಿ ಮಾಡುವಂತಾಗುತ್ತದೆ ಎಂದು ವಿವರಿಸಿದ್ದಾರೆ.
ಕೊರೊನಾಕ್ಕೆ ನೀಡಲಾಗುತ್ತಿರುವ ಔಷಧಗಳಿಗೆ ಆಮದು ತೆರಿಗೆ ವಿನಾಯಿತಿ ನೀಡಲಾಗಿದೆ ಎಂದಿದ್ದಾರೆ. ಇನ್ನು ಅವುಗಳ ಮೇಲೆ ವಿಧಿಸಲಾಗುತ್ತಿರುವ ಶೇ.70ರಷ್ಟು ಏಕೀಕೃತ ಜಿಎಸ್ಟಿ ರಾಜ್ಯಗಳಿಗೇ ಸಂದಾಯವಾಗುತ್ತದೆ ಎಂದಿದ್ದಾರೆ ವಿತ್ತ ಸಚಿವೆ.
ಇದನ್ನೂ ಓದಿ :ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.