![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 25, 2020, 5:59 PM IST
ಶಿಲ್ಲಾಂಗ್ : ಭಾರಿ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ ಪರಿಣಾಮ ರಾಷ್ಟ್ರೀಯ ಮಟ್ಟದ ಮಹಿಳಾ ಕ್ರಿಕೆಟ್ ಆಟಗಾರ್ತಿ ಸಾವನ್ನಪ್ಪಿದ್ದು ಜೊತೆಗೆ ಐದು ಮಂದಿ ಮಣ್ಣಿನಡಿ ಸಿಲುಕಿದ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ.
ಮೇಘಾಲಯದ ಮಾವ್ನಿಯಲ್ಲಿರುವ ಪರ್ವತ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಆರು ಗಂಟೆಯ ಸುಮಾರಿಗೆ ಭೂ ಕುಸಿತ ಸಂಭವಿಸಿದೆ ಪರಿಣಾಮ ಗುಡ್ಡದ ತಳ ಭಾಗದಲ್ಲಿ ವಾಸಿಸುತ್ತಿರುವ ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ ಸಂದರ್ಭ ಕ್ರಿಕೆಟ್ ಆಟಗಾರ್ತಿ ರಜಿಯಾ ಅಹ್ಮದ್ (30) ಅವರ ಮೃತ ದೇಹ ಪತ್ತೆಯಾಗಿದೆ. ಉಳಿದವರ ಪತ್ತೆಗಾಗಿ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ಮೇಘಾಲಯದ ಪರ್ವತ ಸಾಲುಗಳಲ್ಲಿ ಹಲವು ಕಡೆ ಬೆಟ್ಟ ಕುಸಿತಗೊಂಡಿದ್ದು ಹಲವರು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಕೂಡಾ ಇದೆ ರೀತಿ ಭೂ ಕುಸಿತ ಸಂಭವಿಸಿದ್ದು ಪರಿಣಾಮ ಕ್ರಿಕೆಟ್ ಆಟಗಾರ್ತಿಯೊಬ್ಬರು ಜೀವಕಳೆದುಕೊಂಡಿದ್ದಾರೆ.
ಇದನ್ನೂ ಓದಿ :ಭಾರತದ ಹೊಸ ಕ್ರಶ್: ಕ್ರಿಕೆಟ್ ತಾರೆ ಪ್ರಿಯಾ ಪೂನಿಯಾ ಪಯಣದ ಹಿಂದಿದೆ ರೋಚಕ ಕಹಾನಿ
ಮೇಘಾಲಯ ಕ್ರಿಕೆಟ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಗಿಡಿಯಾನ್ ಖಾರ್ಕೊಂಗೋರ್ ಮಾತನಾಡಿ, ರಜಿಯಾ ಅವರು 2011-12 ರಿಂದ ಹಲವಾರು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾರೆ ಎಂದ ಅವರು ಕಳೆದ ವರ್ಷ ಬಿಸಿಸಿಐ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ ರಜಿಯಾ ಮೇಘಾಲಯ ಪರ ಆಡಿದ್ದರು ಎಂದು ಖಾರ್ಕೊಂಗೋರ್ ಹೇಳಿದ್ದಾರೆ.
ನೈಸರ್ಗಿಕ ವಿಕೋಪದಿಂದ ಆದ ರಜಿಯಾ ಅವರ ನಿಧನಕ್ಕೆ ತಂಡದ ಸಹ ಆಟಗಾರರು ಸಂತಾಪ ಸೂಚಿಸಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.