Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

ಮಹಿಳೆಯರ ಸುರಕ್ಷೆಗಾಗಿ 2020ರ ಡಿಸೆಂಬರ್‌ನಲ್ಲಿ ಆರಂಭವಾಗಿದ್ದ ಯೋಜನೆ

Team Udayavani, Oct 20, 2024, 7:35 AM IST

nirbhaya-bike

ಸುಳ್ಯ: ಮಹಿಳೆ ಮತ್ತು ಮಕ್ಕಳ ಸುರಕ್ಷೆ ಉದ್ದೇಶದಿಂದ ತರಲಾಗಿದ್ದ ನಿರ್ಭಯ ಪೊಲೀಸ್‌ ಬೈಕ್‌ಗಳು ಗ್ರಾಮೀಣ ಭಾಗದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಜತೆಗೆ ಬಳಕೆಯಾಗುತ್ತಿರುವ ಕೆಲವು ನೈಜ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ.

2020ರ ಡಿಸೆಂಬರ್‌ನಲ್ಲಿ ನಿರ್ಭಯ ಪೊಲೀಸ್‌ ಬೈಕನ್ನು ರಾಜ್ಯದಲ್ಲಿ ಆರಂಭಿಸಲಾಗಿತ್ತು. ಮಾನವ ಕಳ್ಳ ಸಾಗಣೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಮಾಡುವ, ಕಾನೂನು ಸುವ್ಯವಸ್ಥೆ ಕರ್ತವ್ಯ ನಿರ್ವಹಿಸಲು, ಅಪಘಾತ ಸಂದರ್ಭದಲ್ಲಿ ಸ್ಥಳಕ್ಕೆ ಕ್ಷಿಪ್ರಗತಿಯಲ್ಲಿ ತಲುಪಲು ಮುಂತಾದ ಹಲವು ಉದ್ದೇಶಗಳಿಗಾಗಿ ಬೈಕನ್ನು ನೀಡಲಾಗಿತ್ತು. ಯೋಜನೆ ಹಲವೆಡೆ ಉತ್ತಮವಾಗಿದ್ದರೆ, ಗ್ರಾಮೀಣ ಭಾಗದಲ್ಲಿ ಹಳಿ ತಪ್ಪಿದೆ ಎನ್ನಲಾಗುತ್ತಿದೆ.

36 ನಿರ್ಭಯ ಬೈಕ್‌
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಒಟ್ಟು 36 ನಿರ್ಭಯ ಬೈಕ್‌ಗಳಿವೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 14 ಠಾಣೆಗಳಿಗೆ ನಿರ್ಭಯ ಬೈಕ್‌ಗಳನ್ನು ನೀಡಲಾಗಿದೆ. ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ವೇಣೂರು, ಬೆಳ್ತಂಗಡಿ ನಗರ, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ, ಸುಳ್ಯ, ಪುತ್ತೂರು ಗ್ರಾಮಾಂತರ, ಪುತ್ತೂರು ನಗರ, ಧರ್ಮಸ್ಥಳ ಪೊಲೀಸ್‌ ಠಾಣೆಗಳಿಗೆ ಒಂದೊಂದು ಬೈಕ್‌ ಒದಗಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ 22 ಬೈಕ್‌ಗಳನ್ನು ನೀಡಲಾಗಿದೆ. ಉಡುಪಿ ನಗರ ಠಾಣೆ, ಮಲ್ಪೆ, ಮಣಿಪಾಲ, ಮಹಿಳಾ ಠಾಣೆ, ಬ್ರಹ್ಮಾವರ, ಹಿರಿಯಡಕ, ಕೋಟ, ಕುಂದಾಪುರ, ಕುಂದಾಪುರ ಗ್ರಾಮಾಂತರ, ಅಮಾಸೆಬೈಲು, ಶಂಕರನಾರಾಯಣ, ಬೈಂದೂರು, ಗಂಗೊಳ್ಳಿ, ಕೊಲ್ಲೂರು, ಕಾಪು, ಶಿರ್ವ, ಪಡುಬಿದ್ರಿ, ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಅಜೆಕಾರು, ಹೆಬ್ರಿ ಠಾಣೆಗಳಿಗೆ ತಲಾ ಒಂದೊಂದು ಬೈಕ್‌ ಒದಗಿಸಲಾಗಿತ್ತು. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಗೂ ನಿರ್ಭಯ ಬೈಕ್‌ಗಳನ್ನು ಒದಗಿಸಲಾಗಿತ್ತು.

ಕಾರ್ಯಾಚರಿಸುತ್ತಿಲ್ಲ ನಿರ್ಭಯ ಬೈಕ್‌?
ಶಾಲಾ-ಕಾಲೇಜು ಆರಂಭ ಹಾಗೂ ಮನೆಗೆ ಬಿಡುವ ಸಂದರ್ಭದಲ್ಲಿ ವಿದ್ಯಾಸಂಸ್ಥೆ ವ್ಯಾಪ್ತಿಯಲ್ಲಿ, ಬಸ್‌ ನಿಲ್ದಾಣಗಳಲ್ಲಿ ನಿರ್ಭಯ ಬೈಕ್‌ ಮೂಲಕ ಗಸ್ತು ಕೈಗೊಳ್ಳಬೇಕಿದೆ. ಇವುಗಳ ಬಗ್ಗೆ ಜನರಲ್ಲಿ ಮಾಹಿತಿಯೇ ಇಲ್ಲ. ಹಾಗಾಗಿ ಬಹುತೇಕ ಬೈಕ್‌ಗಳು ಠಾಣೆಯ ಶೆಡ್‌ಗಳಲ್ಲೇ ಇವೆ. ಹಾಗಾಗಿ ನೈಜ ಉದ್ದೇಶಕ್ಕೆ ಬೈಕ್‌ಗಳನ್ನು ಬಳಸುವಂತೆ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ.

“ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ದೂರುಗಳು ಬಂದಾಗ ಅಲ್ಲಿಗೆ ತೆರಳಲು, ಶಾಲಾ-ಕಾಲೇಜು ಸಮಯದಲ್ಲಿ ಗಸ್ತು ತಿರುಗಲು ನಿರ್ಭಯ ಬೈಕ್‌ಗಳನ್ನು ಬಳಸಬಹುದು. ನಗರ ಭಾಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಶಾಲಾ-ಕಾಲೇಜುಗಳು ದೂರದಲ್ಲಿರುವುದರಿಂದ ಒಂದು ಠಾಣೆಯ ಒಂದು ಬೈಕ್‌ನಲ್ಲಿ ಗಸ್ತು ಕಷ್ಟವಾಗಬಹುದು. ಆ ಬಗ್ಗೆ ಯೋಚಿಸಿ ನಿರ್ಭಯ ಬೈಕ್‌ ಪರಿಣಾಮಕಾರಿ ಬಳಕೆಗೆ ಆದೇಶಿಸಲಾಗುವುದು.”
– ಯತೀಶ್‌ ಎನ್‌., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ದ. ಕ. ಜಿಲ್ಲೆ

“ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ 22 ನಿರ್ಭಯ ಬೈಕ್‌ಗಳನ್ನು ನೀಡಲಾಗಿದೆ. ಮಹಿಳೆ, ಮಕ್ಕಳ ರಕ್ಷಣೆ ಜತೆಗೆ ಕಾನೂನು ಸುವ್ಯವಸ್ಥೆ ಸಂದರ್ಭ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಇನ್ನಷ್ಟು ಪರಿಣಾಮಕಾರಿ ಜಾರಿಗೆ ನಿರ್ದೇಶನ ನೀಡಲಾಗುವುದು.”
– ಡಾ| ಅರುಣ್‌ ಕೆ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Servey-Road

Highway Problem: ಕುಂದಾಪುರ -ತಲಪಾಡಿ ಹೆದ್ದಾರಿಯಲ್ಲಿ ನೀರು ನಿಲ್ಲುವ 40 ಸ್ಥಳಗಳ ಗುರುತು

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

Krishna-Mata-Udupi

Udupi: ಅ.24-26: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ 23 ಗೋಷ್ಠಿಗಳು

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.