ವನಿತಾ ಟಿ20 ವಿಶ್ವಕಪ್‌: ಭಾರತ-ಪಾಕಿಸ್ಥಾನ ಕದನ ಕೌತುಕ

 ಸ್ಮತಿ ಮಂಧನಾ ಗೈರು, ಹರ್ಮನ್‌ಪ್ರೀತ್‌ ಕೌರ್‌ ಫಿಟ್‌

Team Udayavani, Feb 12, 2023, 7:25 AM IST

ವನಿತಾ ಟಿ20 ವಿಶ್ವಕಪ್‌: ಭಾರತ-ಪಾಕಿಸ್ಥಾನ ಕದನ ಕೌತುಕ

ಕೇಪ್‌ ಟೌನ್‌: ಅದೆಷ್ಟೋ ಕಾಲದಿಂದ ಐಸಿಸಿ ಟ್ರೋಫಿಯೊಂದರ ಹುಡುಕಾಟದಲ್ಲಿ ನಿರತವಾಗಿರುವ ಭಾರತದ ವನಿತಾ ಸೀನಿಯರ್ ತಂಡಕ್ಕೆ ಈ ಸಲವಾದರೂ ಕಪ್‌ ಒಲಿದೀತೇ ಎಂಬ ಪ್ರಶ್ನೆಗೆ ರವಿವಾರದಿಂದ ಉತ್ತರ ಲಭಿಸಲಾರಂಭಿಸುತ್ತದೆ. ಹರ್ಮನ್‌ಪ್ರೀತ್‌ ಕೌರ್‌ ಪಡೆ ವನಿತಾ ಟಿ20 ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು ಎದುರಿಸಲಿದೆ.

ಭಾರತ-ಪಾಕಿಸ್ಥಾನ ನಡುವಿನ ಯಾವುದೇ ಪಂದ್ಯವಾಗಿರಲಿ, ಅದರ ಜೋಶ್‌ ಬೇರೆಯೇ ಆಗಿರುತ್ತದೆ. ಈ ಸೆಣಸಾಟ ಕ್ಕಾಗಿ ಅಭಿಮಾನಿಗಳು ತುದಿಗಾಲಲ್ಲಿ ಕಾದಿರು ತ್ತಾರೆ. ಇಂಥದೇ ಒಂದು ಸನ್ನಿವೇಶಕ್ಕೆ ರವಿವಾರದ ಕೇಪ್‌ ಟೌನ್‌ ಮುಖಾಮುಖಿ ಸಾಕ್ಷಿಯಾಗುವುದರಲ್ಲಿ ಅನುಮಾನವಿಲ್ಲ.

ಭಾರತ ಕಳೆದ ಅನೇಕ ವರ್ಷಗಳಿಂದ ಉತ್ತಮ ಸಾಧನೆಯನ್ನು ಕಾಯ್ದುಕೊಂಡು ಬಂದಿದೆ. ಆಸ್ಟ್ರೇಲಿಯ, ಇಂಗ್ಲೆಂಡ್‌ನ‌ಂಥ ಬಲಿಷ್ಠ ತಂಡಗಳಿಗೆ ಸಡ್ಡು ಹೊಡೆಯು ವಷ್ಟರ ಮಟ್ಟಿಗೆ ಬೆಳೆದಿದೆ. ಆದರೆ ಕೊನೆಯ ಹಂತದಲ್ಲಿ ಮುಗ್ಗರಿಸುವ ಪರಿಪಾಠವನ್ನು ಮಾತ್ರ ಉಳಿಸಿಕೊಂಡು ಬಂದಿದೆ. ಇಲ್ಲವಾ ದರೆ ಕಳೆದ ವಿಶ್ವಕಪ್‌ನಲ್ಲೇ ಭಾರತ ಚಾಂಪಿ ಯನ್‌ ಆಗಿ ಹೊರಹೊಮ್ಮಬೇಕಿತ್ತು. ಮೆಲ್ಬರ್ನ್ ಫೈನಲ್‌ನಲ್ಲಿ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿ ಆಸ್ಟ್ರೇಲಿಯಕ್ಕೆ ಶರಣಾಯಿತು.

ವಿಶ್ವಕಪ್‌ ತಯಾರಿಗೆಂದು ನಡೆದ ತ್ರಿಕೋನ ಸರಣಿಯ ಲೀಗ್‌ ಹಂತದಲ್ಲಿ ಅಜೇಯವಾಗಿ ಉಳಿದರೂ ಫೈನಲ್‌ನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ ಶರಣಾದದ್ದು ತಾಜಾ ಉದಾಹರಣೆ. ಬಳಿಕ ವಿಶ್ವಕಪ್‌ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಕ್ಕೆ ಶರಣಾಯಿತು. ಬಾಂಗ್ಲಾದೇಶ ವಿರುದ್ಧ ಕಷ್ಟದಿಂದ ಗೆದ್ದಿತು.

ಬೇಕಿದೆ ಫಿನಿಶಿಂಗ್‌ ಟಚ್‌
“ಫಿನಿಶಿಂಗ್‌ ಟಚ್‌ ಟೆಕ್ನಿಕ್‌’ ಎನ್ನುವುದು ಭಾರತದ ಪಾಲಿಗೆ ಶಾಪವಾಗಿ ಕಾಡು ತ್ತಿದೆ. ಈ ಸಲವಾದರೂ ಇದರಿಂದ ಮುಕ್ತವಾಗ ಬೇಕಿದೆ. ಆದರೆ ಆರಂಭಿಕ ಪಂದ್ಯಕ್ಕೂ ಮೊದಲೇ ಭಾರತಕ್ಕೆ ದೊಡ್ಡದೊಂದು ಸಂಕಟ ಎದುರಾಗಿದೆ. ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಕೈಬೆರಳಿನ ಗಾಯದಿಂದ ಪಾಕ್‌ ವಿರುದ್ಧ ಆಡುವುದು ಅನುಮಾನ ಎಂಬುದಾಗಿ ಕೋಚ್‌ ಹೃಷಿಕೇಶ್‌ ಕಾನಿಟ್ಕರ್‌ ತಿಳಿಸಿದ್ದಾರೆ. ಆದರೆ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಭುಜದ ನೋವಿನಿಂದ ಚೇತರಿಸಿಕೊಂಡಿದ್ದು, ಆಡಲು ಲಭ್ಯರಿರುವುದು ಸಮಾಧಾನಕರ ಸಂಗತಿ.

ಭಾರತದ ಗುಂಪಿನಲ್ಲಿರುವ ಮತ್ತೊಂದು ಪ್ರಬಲ ತಂಡ ಇಂಗ್ಲೆಂಡ್‌. ಆದರೂ ಕೌರ್‌ ಬಳಗದ ಸೆಮಿಫೈನಲ್‌ ಪ್ರವೇಶವನ್ನು ನಿರೀಕ್ಷಿಸಲಡ್ಡಿಯಿಲ್ಲ. ಆದರೆ ನಾಕೌಟ್‌ನ ಒಂದು ಹಂತದಲ್ಲಿ ಪ್ರಬಲ ಆಸ್ಟ್ರೇಲಿಯ ಎದುರಾಗುವುದು ನಿಶ್ವಿ‌ತ. ಆಸ್ಟ್ರೇಲಿಯವನ್ನು ಸೋಲಿಸಿದವರಿಗೆ ವಿಶ್ವಕಪ್‌ ಎಂಬುದು ಎಲ್ಲರ ಲೆಕ್ಕಾಚಾರ.

ಪಾಕಿಸ್ಥಾನವನ್ನು ಮಣಿಸಿ ಶುಭಾರಂಭ ಮಾಡುವುದು ಭಾರತದ ಪಾಲಿನ ಮೊದಲ ಆದ್ಯತೆ. ಇದರಿಂದ ಕಳೆದ ವರ್ಷದ ಏಷ್ಯಾ ಕಪ್‌ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿದಂತೆಯೂ ಆಗುತ್ತದೆ. ಶಫಾಲಿ, ರಿಚಾ, ಕೌರ್‌, ದೀಪ್ತಿ, ರೇಣುಕಾ, ಯಾಸ್ತಿಕಾ, ಜೆಮಿಮಾ ಮೊದಲಾದವರ ಸಾಧನೆ ಭಾರತದ ಪಾಲಿಗೆ ನಿರ್ಣಾಯಕವಾಗಿದೆ.

ಪಾಕಿಸ್ಥಾನ ಕೂಡ ಆಭ್ಯಾಸ ಪಂದ್ಯದಲ್ಲಿ 1-1 ಫ‌ಲಿತಾಂಶ ದಾಖಲಿಸಿದೆ. ಬಾಂಗ್ಲಾವನ್ನು ಮಣಿಸಿದ ಬಳಿಕ ದಕ್ಷಿಣ ಆಫ್ರಿಕಾಕ್ಕೆ ಶರಣಾಗಿತ್ತು. ನಿದಾ ದಾರ್‌, ನಾಯಕಿ ಬಿಸ್ಮಾ ಮರೂಫ್ ಅವರನ್ನು ಪಾಕ್‌ ಹೆಚ್ಚು ಅವಲಂಬಿಸಿದೆ.

ಲಂಕಾ, ಇಂಗ್ಲೆಂಡ್‌ ಗೆಲುವು
ವಿಶ್ವಕಪ್‌ ಉದ್ಘಾಟನ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಆಘಾತ ಅನುಭವಿಸಿದೆ. ಶ್ರೀಲಂಕಾ ವಿರುದ್ಧದ ಪಂದ್ಯವನ್ನು 3 ರನ್ನುಗಳಿಂದ ಕಳೆದುಕೊಂಡಿದೆ.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಶ್ರೀಲಂಕಾ 4 ವಿಕೆಟಿಗೆ 129 ರನ್‌ ಗಳಿಸಿದರೆ, ದಕ್ಷಿಣ ಆಫ್ರಿಕಾ 9 ವಿಕೆಟಿಗೆ 126 ರನ್‌ ಗಳಿಸಿ ನಂಬಲಾಗದ ಸೋಲನುಭವಿಸಿತು. ಇನೋಕಾ ರಣವೀರ (18ಕ್ಕೆ 3), ಒಶಾದಿ ರಣಸಿಂಘೆ (20ಕ್ಕೆ 2), ಸುಗಂಧಿಕಾ ಕುಮಾರಿ (28ಕ್ಕೆ 2) ಸೇರಿಕೊಂಡು ಆತಿಥೇಯರಿಗೆ ಕಡಿವಾಣ ಹಾಕಿದರು.

3 ಓವರ್‌ಗಳಲ್ಲಿ 33 ರನ್‌, 2 ಓವರ್‌ಗಳಲ್ಲಿ 20 ರನ್‌, ಅಂತಿಮ ಓವರ್‌ನಲ್ಲಿ 13 ರನ್‌ ತೆಗೆಯುವ ಸವಾಲನ್ನು ಸ್ವೀಕರಿಸಲು ಆತಿಥೇಯರಿಂದ ಸಾಧ್ಯವಾಗಲಿಲ್ಲ. ನಾಯಕಿ ಸುನೆ ಲುಸ್‌ ಸರ್ವಾಧಿಕ 28 ರನ್‌ ಮಾಡಿದರು. ಲಂಕೆಯ ಬ್ಯಾಟಿಂಗ್‌ ಸರದಿಯಲ್ಲಿ ಮಿಂಚಿದವರು ನಾಯಕಿ ಚಾಮರಿ ಅತಪಟ್ಟು (68) ಮತ್ತು ವಿಶ್ಮಿ ಗುಣರತ್ನೆ (35).

ಇಂಗ್ಲೆಂಡ್‌ ಜಯಭೇರಿ
ಶನಿವಾರದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ 7 ವಿಕೆಟ್‌ಗಳಿಂದ ವೆಸ್ಟ್‌ ಇಂಡೀಸ್‌ಗೆ ಸೋಲುಣಿಸಿತು. ವಿಂಡೀಸ್‌ 7 ವಿಕೆಟಿಗೆ 135 ರನ್‌ ಹೊಡೆದರೆ, ಇಂಗ್ಲೆಂಡ್‌ ಕೇವಲ 14.3 ಓವರ್‌ಗಳಲ್ಲಿ 3 ವಿಕೆಟಿಗೆ 138 ರನ್‌ ಬಾರಿಸಿತು.

ಆರಂಭ: ಸಂ. 6.30
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.