ಗೋವಾದಲ್ಲಿ ಅಖೀಲ ವಿಶ್ವ ಕೊಂಕಣಿ ಸಮ್ಮೇಳನ ಆಯೋಜನೆ: ಡಾ| ಪ್ರಮೋದ್‌ ಸಾವಂತ್‌


Team Udayavani, Feb 9, 2023, 7:00 AM IST

ಗೋವಾದಲ್ಲಿ ಅಖೀಲ ವಿಶ್ವ ಕೊಂಕಣಿ ಸಮ್ಮೇಳನ ಆಯೋಜನೆ: ಡಾ| ಪ್ರಮೋದ್‌ ಸಾವಂತ್‌

ಮಂಗಳೂರು: ಗೋವಾದಲ್ಲಿ ಈ ಬಾರಿ ಅಖೀಲ ವಿಶ್ವ ಕೊಂಕಣಿ ಸಮ್ಮೇಳನವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಇಲ್ಲಿನ ಕೊಂಕಣಿ ಭಾಷಿಕರು ಮುಂದಾಳತ್ವ ವಹಿಸಿಕೊಂಡರೆ ಸರಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ಹೇಳಿದರು.

ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಬುಧವಾರ ವಿಶ್ವ ಕೊಂಕಣಿ ಸರದಾರ, ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಬಸ್ತಿ ವಾಮನ ಶೆಣೈ ಅವರ ಹಿತ್ತಾಳೆಯ ಪ್ರತಿಮೆ ಅನಾವರಣ ಮತ್ತು ಇತರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ರಾಷ್ಟ್ರ ಮಟ್ಟದ ಕೊಂಕಣಿ ಸಮ್ಮೇಳನ ಈಗಾಗಲೇ ಕೇರಳದಲ್ಲಿ ನಡೆದಿದೆಯೇ ಹೊರತು ವಿಶ್ವ ಸಮ್ಮೇಳನ ನಡೆದಿಲ್ಲ. ಆದ್ದರಿಂದ ಕೊಂಕಣಿ ಭಾಷೆಯ ರಾಜಧಾನಿ ಯಾಗಿರುವ ಗೋವಾದಲ್ಲಿ ಸಮ್ಮೇಳನ ಆಯೋಜಿಸಲು ಚಿಂತಿಸಲಾಗಿದೆ. ಅ ಮೂಲಕ ಜಗತ್ತಿನಲ್ಲಿರುವ ಎಲ್ಲ ಕೊಂಕಣಿ ಸಮುದಾಯಗಳನ್ನು ಒಟ್ಟು ಸೇರಿಸಿ, ಸಂಸ್ಕೃತಿ, ಭಾಷೆ, ಕಲೆಯನ್ನು ಪರಿಚಯ ಮಾಡಿಕೊಂಡು ಸಂಬಂಧವನ್ನು ಮತ್ತಷ್ಟು ಬಲಪಡಿಸಬಹುದು ಎಂದರು.

ಕರ್ನಾಟಕದಲ್ಲಿ ಕೊಂಕಣಿ ಭಾಷೆಯ ಬೆಳವಣಿಗೆಗೆ ನೀಡುತ್ತಿರುವ ಪ್ರೋತ್ಸಾಹ ಉಲ್ಲೇಖನೀಯ. ಕೇಂದ್ರ ಸರಕಾರವೂ ಮಾತೃಭಾಷಾ ಶಿಕ್ಷಣಕ್ಕೆ ಒತ್ತು ನೀಡುವ ಎನ್‌ಇಪಿ ಜಾರಿಗೊಳಿಸಿದೆ. ಗೋವಾದಲ್ಲಿ ಕೊಂಕಣಿ ಅಕಾಡೆಮಿ ಸರಕಾರದ ಮಟ್ಟದಲ್ಲಿ ಭಾಷೆಯ ಬೆಳವಣಿಗೆಗೆ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ವಿಶ್ವಕೊಂಕಣಿ ಕೇಂದ್ರವನ್ನೂ ಜೋಡಿಸಿ ಕೊಂಡು ಕೆಲಸ ಮಾಡಲಾಗುವುದು ಎಂದರು.

ಕೊಂಕಣಿ ಸಂಸ್ಕೃತಿ
ಕೊಂಕಣಿಯಲ್ಲಿ ಹಲವು ಸಾಹಿತ್ಯ ಕೃತಿಗಳು ರಚನೆಯಾಗುತ್ತಿದ್ದು, ನಾಟಕ- ಸಿನೆಮಾಗಳು ಭಾಷೆಯ ಮೌಲ್ಯವನ್ನು ಹೆಚ್ಚಿಸಿದೆ. ಕೊಂಕಣಿ ಒಂದು ಭಾಷೆ ಮಾತ್ರ ಅಲ್ಲ ಅದೊಂದು ಸಂಸ್ಕೃತಿ. ನಮ್ಮ ಮುಂದಿನ ಪೀಳಿಗೆಗೂ ಭಾಷೆ ಮಾತನಾ ಡಲು, ಓದಲು-ಬರೆಯಲು ಕಲಿಸುವ ಅಗತ್ಯವಿದ್ದು, ಇದರಿಂದ ಭಾಷೆಯ ಭವಿಷ್ಯ ಉಜ್ವಲವಾಗಲಿದೆ. ಕೊಂಕಣಿ ಕಲಿತವರಿಗೂ ಉತ್ತಮವಾದ ಬೇಡಿಕೆ ಸೃಷ್ಟಿಯಾಗಿದೆ. ಮೈಸೂರಿನ ರಾಷ್ಟ್ರೀಯ ಗ್ರಂಥಾಲಯದ ಮೂಲಕ ಗೆಜೆಟೆಡ್‌, ಕೃತಿಗಳ ಕೊಂಕಣಿ ತರ್ಜುಮೆಗೆ ಬಹಳಷ್ಟು ಮಂದಿಗೆ ಅವಕಾಶವಿದೆ ಎಂದರು.

ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಚೇರ್ಮನ್ ಡಾ| ಪಿ. ದಯಾನಂದ ಪೈ ಮಾತನಾಡಿ, ವಿಶ್ವ ಕೊಂಕಣಿ ಕೇಂದ್ರ ಬಸ್ತಿ ವಾಮನ ಶೆಣೈ ಅವರ ಕನಸಾಗಿತ್ತು. ಅದನ್ನು ಅವರು ನನಸು ಮಾಡಿದ್ದಾರೆ. ಕೇಂದ್ರ ಪ್ರವೇಶಿಸುವಾಗ ದೇವಾಲಯಕ್ಕೆ ಬಂದ ಅನುಭವವಾಗುತ್ತದೆ. ಕೇವಲ 20 ಲಕ್ಷ ಜನಸಂಖ್ಯೆ ಹೊಂದಿರುವ ಕೊಂಕಣಿ ಭಾಷಿಕ ಸಮುದಾಯದವರು ಇಂದು ಎಲ್ಲ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ವಿಶ್ವದ ಯಾವುದೇ ಸಮಯದಾಯ ಮಾಡದಿರುವ ಸಾಧನೆ ಮಾಡಿದೆ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಡಿ. ವೇದವ್ಯಾಸ ಕಾಮತ್‌, ಉದ್ಯಮಿ ಉಲ್ಲಾಸ್‌ ಕಾಮತ್‌, ಉದ್ಯಮಿ ಮೈಕಲ್‌ ಡಿ’ಸೋಜಾ ಉಪಸ್ಥಿತರಿದ್ದರು.

ಸಮ್ಮಾನ
ದಾನಿಗಳಾದ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮತ್ತು ಉಷಾ ನಂದಗೋಪಾಲ ಶೆಣೈ, ಡಿ. ರಮೇಶ್‌ ನಾಯಕ್‌ ಮೈರಾ ಮತ್ತು ಸುಚಿತ್ರಾ ಆರ್‌. ನಾಯಕ್‌ ಅವರನ್ನು ಸಮ್ಮಾನಿಸಲಾಯಿತು. ವಾಸ್ತು ವಿನ್ಯಾಸಕಾರ ದಿನೇಶ್‌ ಶೇಟ್‌, ಗುತ್ತಿಗೆದಾರ ಸುಧೀರ್‌ ಶೆಣೈ, ಮತ್ತು ಒಳಾಂಗಣ ವಿನ್ಯಾಸಕ ಬಸ್ತಿ ಮಿಲಿಂದ್‌ ಶೆಣೈ ಅವರನ್ನು ಗೌರವಿಸಲಾಯಿತು.
ವಿಶ್ವ ಕೊಂಕಣಿ ಕೇಂದ್ರ ಅಧ್ಯಕ್ಷ ಸಿಎ ನಂದಗೋಪಾಲ ಶೆಣೈ ಅವರು ಸ್ವಾಗತಿಸಿ, ವಿಶ್ವ ಕೊಂಕಣಿ ಸ್ಕಾಲರ್‌ಶಿಪ್‌ ಫಂಡ್‌ ಕಾರ್ಯದರ್ಶಿ ಪ್ರದೀಪ್‌ ಜಿ. ಪೈ ವಂದಿಸಿದರು. ಶಕುಂತಳಾ ಆರ್‌. ಕಿಣಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.