ಯಲಬುರ್ಗಾ: ರೈತನಿಗೆ ಭರವಸೆ ಮೂಡಿಸಿದ ಡ್ರ್ಯಾಗನ್‌ ಫ್ರೂಟ್‌

ಮೊದಲ ವರ್ಷದ ಬೆಳೆಗೆ 1 ಲಕ್ಷ ರೂ. ಆದಾಯ ಪಡೆದಿದ್ದಾರೆ.

Team Udayavani, Jul 28, 2023, 6:35 PM IST

ಯಲಬುರ್ಗಾ: ರೈತನಿಗೆ ಭರವಸೆ ಮೂಡಿಸಿದ ಡ್ರ್ಯಾಗನ್‌ ಫ್ರೂಟ್‌

ಯಲಬುರ್ಗಾ: ಜೋಳ, ಸಜ್ಜೆ, ಮೆಕ್ಕೆಜೋಳ ದಂತಹ ಸಾಂಪ್ರದಾಯಿಕ ಬೆಳೆಗಳಿಂದ ಬೇಸತ್ತಿದ್ದ ರೈತರೊಬ್ಬರು ತೋಟಗಾರಿಕೆ
ಬೆಳೆಯಾದ ಡ್ರ್ಯಾಗನ್‌ ಫ್ರೂಟ್‌ ಬೆಳೆದು ಲಕ್ಷ, ಲಕ್ಷ ಆದಾಯದ ಜತೆಗೆ, ದಾರಿಹೋಕರ ಕಣ್ಮನ ಸೆಳೆಯುವಂತ ಬೆಳೆ ಬೆಳೆದು ಗಮನ
ಸೆಳೆದಿದ್ದಾರೆ.

ತಾಲೂಕಿನ ಬಳೂಟಗಿ ಗ್ರಾಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ರೈತ ಗೂಳನಗೌಡ ಮಲ್ಲನಗೌಡ ಪಾಟೀಲ್‌ ಅವರು ಎರಡು
ಎಕರೆ ಜಮೀನಿನಲ್ಲಿ 2022-23ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ನರೇಗಾ ಯೋಜನೆಯಡಿ 256 ಮಾನವ ದಿನಗಳ ಸೃಜಿಸಿ 75 ಸಾವಿರ ಕೂಲಿ ಮೊತ್ತ ಪಡೆದು, 2500 ಡ್ರ್ಯಾಗನ್‌ ಫ್ರೂಟ್‌ ಸಸಿಗಳನ್ನು ನಾಟಿ ಮಾಡಿದ್ದಾರೆ. ಈಗ ಸಮೃದ್ಧವಾಗಿ ಬೆಳೆದ ಡ್ರ್ಯಾಗನ್‌ ಫ್ರೂಟ್‌ ಮಾರಾಟ ಮಾಡಿದ್ದು, ಮೊದಲ ವರ್ಷದ ಬೆಳೆಗೆ 1 ಲಕ್ಷ ರೂ. ಆದಾಯ ಪಡೆದಿದ್ದಾರೆ.

ಗಿಡ ನೆಟ್ಟಗೆ ನಿಂತು ಹರಡಿಕೊಳ್ಳಲು ಕಲ್ಲಿನ ಕಂಬ ಹಾಕಿದ್ದು, ಹನಿ ನೀರಾವರಿ ವ್ಯವಸ್ಥೆ ಮಾಡಿದ್ದಾರೆ. ಸಂಪೂರ್ಣ ಸಾವಯವ
ಗೊಬ್ಬರ ಬಳಕೆ ಮಾಡಿದ್ದು, ಒಂದು ಗಿಡಕ್ಕೆ 600ಕ್ಕೂ ಅಧಿಕ ವೆಚ್ಚ ಮಾಡಿದ್ದು, ರೈತ ಒಟ್ಟು 5 ಲಕ್ಷ ರೂಪಾಯಿ ಬಂಡವಾಳ
ಹಾಕಿ, ಮೊದಲ ವರ್ಷದಲ್ಲಿ 1 ಲಕ್ಷ ರೂ. ಆದಾಯ ಗಳಿಸಿದ್ದಾರೆ.

ಒಣ ಭೂಮಿಗೆ ಸೂಕ್ತ: ಕಡಿಮೆ ತೇವಾಂಶ ಇರುವ ಬಯಲು ಸೀಮೆಯಲ್ಲೂ ಈ ಬೆಳೆ ಬೆಳೆಯಬಹುದು ಎಂಬುದನ್ನು
ಇವರು ಸಾಬೀತು ಮಾಡಿದ್ದಾರೆ. ಒಣ ಭೂಮಿಯಲ್ಲಿ ತೇವಾಂಶ ಕಡಿಮೆ ಇದ್ದರೂ  ಡ್ರ್ಯಾಗನ್‌ ಫ್ರೂಟ್‌ನ್ನು ಬೆಳೆದು ಹೆಚ್ಚು
ಆದಾಯ ಪಡೆಯಬಹುದಾಗಿದೆ. ಇನ್ನು ಹೆಚ್ಚು ಶೀತವಿದ್ದರೆ ಇಳುವರಿ ಕಡಿಮೆ ಆಗಲಿದ್ದು, ಕಡಿಮೆ ತೇವಾಂಶ ಇರುವ ಒಣ
ಭೂಮಿ ಈ ಬೆಳೆಗೆ ಸೂಕ್ತವಾಗಿದೆ.

ಹೆಚ್ಚು ವಿಟಮಿನ್‌: ಇದು ಉಷ್ಣವಲಯದ ಹಣ್ಣಾಗಿದ್ದು, ರೋಮಾಂಚಕ ಕೆಂಪು ಚರ್ಮ ಮತ್ತು ವಿಶಿಷ್ಠವಾದ ಹಣ್ಣುಗಳಲ್ಲಿ
ಒಂದಾಗಿದೆ. ತೋಟಗಾರಿಕೆ ಬೆಳೆಯಾದ ಡ್ರ್ಯಾಗನ್‌ ಫ್ರೂಟ್‌ ಈಗ ಬೇಡಿಕೆಯ ಹಣ್ಣಾಗಿದ್ದು, ಕೆ.ಜಿಗೆ 110 ರೂ. ಮಾರಾಟವಾಗುತ್ತದೆ. ಇದು ಕಡಿಮೆ ಕ್ಯಾಲೋರಿ ಹಣ್ಣಾಗಿದ್ದು, ಸುಮಾರು 60 ಕ್ಯಾಲೋರಿಗಳನ್ನು ಹೊಂದಿರುತ್ತವೆ. ಅಲ್ಲದೇ ಇದರಲ್ಲಿ ವಿಟಮಿನ್‌ ಸಿ, ಬಿ1, ಬಿ2, ಬಿ3 ಮತ್ತು ಕಬ್ಬಿಣ ಕ್ಯಾಲ್ಸಿಯಂ ಹಾಗೂ ರಂಜಕದಂತಹ ಖನಿಜಗಳನ್ನು ಹೊಂದಿದೆ.

ತಾಲೂಕಿನಲ್ಲಿ ರೈತರು ತೋಟಗಾರಿಕೆ ಬೆಳೆ ಬೆಳೆಯುತ್ತ ತಮ್ಮ ಆದಾಯ ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು.
ಸಂತೋರ್‌, ತಾಪಂ ಇಒಷ ಪಾಟೀಲ್‌ ಬಿರಾದಾ

ತಾಲೂಕಿನ ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಡ್ರ್ಯಾಗನ್‌ ಫ್ರುಟ್‌ ಬೆಳೆ ಬೆಳೆದಿದ್ದು, ಸಮೃದ್ಧವಾಗಿದೆ. ರೈತನ ಕೈ ಹಿಡಿದಿದ್ದು, ಫಸಲು ಚನ್ನಾಗಿ ಬಂದಿದೆ. ಮೊದಲ ವರ್ಷ ಕಡಿಮೆ ಆದಾಯ ಬಂದರೂ ಪ್ರತಿವರ್ಷ ಆದಾಯ ಹೆಚ್ಚಾಗಲಿದೆ. ನಮ್ಮ ಇಲಾಖೆಯಿಂದ ಸೌಲಭ್ಯ ಪಡೆದ ರೈತರು ಇತರರಿಗೆ ಮಾದರಿಯಾಗಿದ್ದಾರೆ.
*ಶಿವಕುಮಾರ, ಸಹಾಯಕ ತೋಟಗಾರಿಕೆ ಅಧಿಕಾರಿ

ತೋಟಗಾರಿಕೆ ಇಲಾಖೆಯಿಂದ ಸಹಾಯ ಪಡೆದು ಕಳೆದ ವರ್ಷ ಎರಡು ಎಕರೆ ಜಮೀನಿನಲ್ಲಿ ಡ್ರ್ಯಾಗನ್‌ ಫ್ರೂಟ್‌ ಬೆಳೆ ಬೆಳೆದಿದ್ದೇನೆ. ಮೊದಲ ವರ್ಷವೇ 1 ಲಕ್ಷ ರೂಪಾಯಿ ಆದಾಯ ಬಂದಿದೆ. ಮುಂಬರುವ ಮೂರ್ನಾಲ್ಕು ತಿಂಗಳಲ್ಲಿ ಮತ್ತೊಂದು ಲಕ್ಷ ಆದಾಯ ಬರುವ ನಿರೀಕ್ಷೆ ಇದೆ. ಮೊದಲಿಗೆ ಇದರ ಬಗ್ಗೆ ನಂಬಿಕೆ ಇರಲಿಲ್ಲ. ಆದರೆ, ಈಗ ಭರವಸೆ ತಂದಿದೆ. ತೋಟ ರಸ್ತೆ ಪಕ್ಕ
ಇರುವುದರಿಂದ ಇಲ್ಲೇ ಜಾಸ್ತಿ ಮಾರಾಟವಾಗಿದೆ. ಕೆ.ಜಿ ಗೆ 110 ರೂ. ಗೆ ಮಾರಾಟವಾಗಿದೆ
ಗೂಳನಗೌಡ ಮಲ್ಲನಗೌಡ ಪಾಟೀಲ್‌, ರೈತ

*ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.