![1-chali](https://www.udayavani.com/wp-content/uploads/2024/12/1-chali-415x279.jpg)
ಎತ್ತಿನಹೊಳೆ: 10 ಟಿಎಂಸಿ ಸಾಮರ್ಥ್ಯಕ್ಕೆ ಆಧುನಿಕ ತಂತ್ರಜ್ಞಾನ
Team Udayavani, Mar 8, 2022, 6:40 AM IST
![ಎತ್ತಿನಹೊಳೆ: 10 ಟಿಎಂಸಿ ಸಾಮರ್ಥ್ಯಕ್ಕೆ ಆಧುನಿಕ ತಂತ್ರಜ್ಞಾನ](https://www.udayavani.com/wp-content/uploads/2022/03/govinda-karajola-620x345.jpg)
ಬೆಂಗಳೂರು: ಎತ್ತಿನಹೊಳೆ ಯೋಜನೆ ಅಡಿ ನಿರ್ಮಿಸಲು ಉದ್ದೇಶಿಸಿರುವ ಬೈರಗೊಂಡ್ಲು ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 2 ಟಿಎಂಸಿ ಇದ್ದರೂ, 10 ಟಿಎಂಸಿ ನೀರನ್ನು ಉಪಯೋಗಿಸುವಂತಹ ಆಧುನಿಕ ತಂತ್ರಜ್ಞಾನವನ್ನು ಅಲ್ಲಿ ಪರಿಚಯಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಸೋಮವಾರ ಸದಸ್ಯ ರಾಜೇಂದ್ರ ರಾಜಣ್ಣ ನಿಯಮ 72ರ ಅಡಿ ಎತ್ತಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉದ್ದೇಶಿತ ಯೋಜನೆಯಿಂದ ರಾಮನಗರ, ಕೋಲಾರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹತ್ತು ಜಿಲ್ಲೆಗಳಿಗೆ ಅನುಕೂಲ ಆಗಲಿದೆ ಎಂದರು.
ನೀಲನಕಾಶೆ ಸಿದ್ಧ
ಈಗಾಗಲೇ ಎಂಜಿನಿಯರ್ಗಳು, ತಂತ್ರಜ್ಞರು ಈ ಕುರಿತು ನೀಲನಕಾಶೆ ಸಿದ್ಧಪಡಿಸಿ, ಅದಕ್ಕೆ ತಕ್ಕಂತೆ ಯೋಜನೆ ರೂಪಿಸುತ್ತಿದ್ದಾರೆ. ಹಾಗಾಗಿ, ಆತಂಕಪಡುವ ಅಗತ್ಯವಿಲ್ಲ ಎಂದ ಅವರು, ಎತ್ತಿನಹೊಳೆ ಯೋಜನೆ ಜಾರಿಗೆ ಸರಕಾರ ಬದ್ಧವಾಗಿದೆ. ಆ ಬದ್ಧತೆ ಇರುವುದರಿಂದಲೇ ಬಜೆಟ್ನಲ್ಲಿ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದರು.
ಗೊಂದಲ ಬಗೆಹರಿಯುತ್ತಿದೆ
ಯೋಜನೆಗಾಗಿ ಸುಮಾರು 12,857 ಎಕರೆ ಭೂಮಿಯ ಆವಶ್ಯಕತೆ ಇದ್ದು, ಇದರಲ್ಲಿ 11,745 ಎಕರೆ ರೈತರದ್ದಾಗಿದ್ದು, 992 ಎಕರೆ ಮಾತ್ರ ಸರಕಾರದ್ದಾಗಿದೆ. ಉಳಿದ 118 ಎಕರೆ ಅರಣ್ಯ ಪ್ರದೇಶ. ಈ ಮಧ್ಯೆ 2013ರಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿ ಹೊಸ ಕಾಯ್ದೆ ಬಂತು. ಅದರಂತೆ ಮಾರ್ಗಸೂಚಿ ದರದ 4 ಪಟ್ಟು ಪರಿಹಾರ ಒದಗಿಸಬೇಕು. ಒಂದು ಊರಿಂದಮತ್ತೊಂದು ಊರಿಗೆ ಮಾರ್ಗಸೂಚಿ ದರ ಬೇರೆ ಆಗುತ್ತದೆ. ಆದರೆ, ರೈತರು ಒಂದೇ ರೀತಿಯ ಪರಿಹಾರ ಕೇಳುತ್ತಿರುವುದು ಕಗ್ಗಂಟಾಗಿದ್ದು, ಈಗ ಗೊಂದಲ ಬಗೆಹರಿಯುತ್ತಿದೆ. ಕಾಮಗಾರಿಯೂ ಸಾಕಷ್ಟು ಪ್ರಗತಿ ಕಂಡಿದೆ ಎಂದರು.
ಹಲವರ ಪಾಲಿಗೆ ಕಾಮಧೇನು!
ಎತ್ತಿನಹೊಳೆ ಯೋಜನೆ ಎನ್ನುವುದು ಕೆಲವರ ಪಾಲಿಗೆ ಕಾಮಧೇನು. ಹಾಗಾಗಿ, ಅದಕ್ಕೆ 50 ಸಾವಿರ ಕೋಟಿ ರೂ. ಮೀಸಲಿಟ್ಟರೂ ಯಾವತ್ತೂ ಪೂರ್ಣಗೊಳ್ಳುವುದಿಲ್ಲ’ ಎಂದು ಜೆಡಿಎಸ್ ಸದಸ್ಯ ಭೋಜೇಗೌಡ ಆರೋಪಿಸಿದರು. ಪೂರಕವಾಗಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಕೆಲವರಿಗೆ ಕಾಮಧೇನು ಇದ್ದಂತೆ. ಎಲ್ಲರೂ ಅಧಿಕಾರಿಗಳು ಹಣ ತಿನ್ನುತ್ತಿದ್ದಾರೆ. 50 ಸಾವಿರ ಕೋಟಿ ರೂ. ವೆಚ್ಚ ಮಾಡಿದರೂ ಇದು ಪೂರ್ಣಗೊಳ್ಳುವುದಿಲ್ಲ. ಅಲ್ಲದೆ, ಯೋಜನೆ ಜಾರಿ ಮಾಡುತ್ತಿರುವ ಭಾಗಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ. 10ರಷ್ಟು ಕಡಿಮೆ ಆಗುತ್ತಿದೆ. ಆದ್ದರಿಂದ ಯೋಜನೆ ಫಲ ನೀಡುವುದಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಟಾಪ್ ನ್ಯೂಸ್
![1-chali](https://www.udayavani.com/wp-content/uploads/2024/12/1-chali-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![rain-dk](https://www.udayavani.com/wp-content/uploads/2024/12/rain-dk-150x84.jpg)
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
![Mandya-Sahitya](https://www.udayavani.com/wp-content/uploads/2024/12/Mandya-Sahitya-150x90.jpg)
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
![Joshi](https://www.udayavani.com/wp-content/uploads/2024/12/Joshi-2-150x90.jpg)
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
![Chalavadi2](https://www.udayavani.com/wp-content/uploads/2024/12/Chalavadi2-96x115.jpg)
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
![Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್](https://www.udayavani.com/wp-content/uploads/2024/12/hari-150x87.jpg)
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-chali](https://www.udayavani.com/wp-content/uploads/2024/12/1-chali-150x101.jpg)
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
![Hemmadi-Sevantige](https://www.udayavani.com/wp-content/uploads/2024/12/Hemmadi-Sevantige-150x90.jpg)
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
![rain-dk](https://www.udayavani.com/wp-content/uploads/2024/12/rain-dk-150x84.jpg)
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
![Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?](https://www.udayavani.com/wp-content/uploads/2024/12/Forest_1-150x80.jpg)
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
![1-puri](https://www.udayavani.com/wp-content/uploads/2024/12/1-puri-1-150x102.jpg)
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.