ಸಂಸತ್ಗೆ ಕಾಲಿಟ್ಟ 25ರ ಕಿರಿಯರು; ಹಾಲಿ ಸಂಸದರಿಗೆ ಸೋಲುಣಿಸಿ ಗೆದ್ದ ಪುಷ್ಪೇಂದ್ರ
Team Udayavani, Jun 6, 2024, 11:50 AM IST
ನವದೆಹಲಿ: ದೇಶದಲ್ಲಿ 25 ವರ್ಷದ ನಾಲ್ವರು ಅಭ್ಯರ್ಥಿಗಳು ಸಂಸದರಾಗಿ ಚುನಾಯಿತರಾಗುವ ಮೂಲಕ ಹೊಸ ವಿಶೇಷತೆಗೆ ಈ ಬಾರಿಯ ಲೋಕಸಭೆ ಚುನಾವಣೆ ಸಾಕ್ಷಿಯಾಗಿದೆ. ಅತ್ಯಂತ ಕಿರಿಯ ಸಂಸದರಾಗಿ ಪುಷ್ಪೇಂದ್ರ ಸರೋಜ್, ಪ್ರಿಯಾ ಸರೋಜ್, ಶಾಂಭವಿ ಚೌಧರಿ, ಸಂಜನಾ ಜಾತವ್ ಚುನಾಯಿತರಾಗಿದ್ದಾರೆ.
ಇದನ್ನೂ ಓದಿ:Narendra Modi ಪ್ರಮಾಣ ವಚನ ಕಾರ್ಯಕ್ರಮಕ್ಕೆ ಬಾಂಗ್ಲಾ, ನೇಪಾಳ ಪ್ರಧಾನಿ, ಲಂಕಾ ಅಧ್ಯಕ್ಷರು
ಉತ್ತರ ಪ್ರದೇಶದ ಕೌಶಂಬಿ ಕ್ಷೇತ್ರದಿಂದ ಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪುಷ್ಪೇಂದ್ರ, ಉ.ಪ್ರ.ದ ಮಚ್ಲಿ ಶೆಹರ್ನಿಂದ
ಎಸ್ಪಿ ಟಿಕೆಟ್ನಲ್ಲಿ ಸ್ಪರ್ಧಿಸಿದ್ದ ಪ್ರಿಯಾ ಜಯ ಸಾಧಿಸಿದ್ದಾರೆ. ಬಿಹಾರದಲ್ಲಿ ಎಲ್ಜೆಪಿ ಟಿಕೆಟ್ನಿಂದ ಸಮಸ್ಟಿಪುರದಲ್ಲಿ ಸ್ಪರ್ಧಿಸಿದ್ದ ಶಾಂಭವಿ ಹಾಗೂ ರಾಜಸ್ಥಾನದ ಭರತ್ ಪುರದಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ಸಂಜನಾ ಜಾತವ್ ಗೆಲುವು ಸಾಧಿಸಿದ ಅತ್ಯಂತ ಕಿರಿಯ ಅಭ್ಯರ್ಥಿಗಳಾಗಿದ್ದಾರೆ.
ಕರುನಾಡ ಕಿರಿಯ ಸಂಸದ ಸಾಗರ್ ಲೋಕಸಭೆಗೆ
ಕರ್ನಾಟಕದ ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 26 ವರ್ಷದ ಸಾಗರ್ ಈಶ್ವರ್ ಖಂಡ್ರೆ ವಿಜಯ ಸಾಧಿಸಿ ಸಂಸತ್ ಪ್ರವೇಶಿಸಿದ್ದಾರೆ. ಈ ಮೂಲಕ ಕರ್ನಾಟಕದಿಂದ ಲೋಕಸಭೆ ಪ್ರವೇಶಿಸಿದ ಅತ್ಯಂತ ಕಿರಿಯ ಸಂಸದನೆಂಬ ಖ್ಯಾತಿಗೂ ಸಾಗರ್ ಪಾತ್ರರಾಗಿದ್ದಾರೆ.
ಕೇಂದ್ರ ಖಾತೆ ರಾಜ್ಯ ಸಚಿವರಾಗಿದ್ದ ಭಗವಂತ್ ಖೂಬಾ ಅವರನ್ನು ಸಾಗರ್ ಬರೋಬ್ಬರಿ 1.29 ಲಕ್ಷ ಮತಗಳ ಅಂತರದಲ್ಲಿ ಮಣಿಸಿ ವಿಜಯ ಪತಾಕೆ ಹಾರಿಸಿದ್ದಾರೆ. ಸಾಗರ್ ಅವರು ಕರ್ನಾಟಕ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.