ಹೊಲದಲ್ಲಿ ಬೆಳೆಗಳ ಮಧ್ಯೆ ಬೆಳೆದಿದ್ದ 1.80 ಲಕ್ಷ ಮೌಲ್ಯದ ಹಸಿ ಗಾಂಜಾ ವಶಕ್ಕೆ
Team Udayavani, Apr 14, 2023, 7:08 PM IST
ಮುದ್ದೇಬಿಹಾಳ: ತಾಲೂಕಿನ ಮಲಗಲದಿನ್ನಿ ಗ್ರಾಮ ವ್ಯಾಪ್ತಿಯ ಬಸವರಾಜ ಮಲ್ಲೇಶಪ್ಪ ಬಿರಾದಾರ ಎಂಬಾತನ ಹೊಲದಲ್ಲಿ ಬೆಳೆಗಳ ಮಧ್ಯೆ ಕಾನೂನು ಬಾಹಿರವಾಗಿ ಬೆಳೆದಿದ್ದ ಅಂದಾಜು 1.80 ಲಕ್ಷ ಮೌಲ್ಯದ 36.820 ಕೆಜಿಯಷ್ಟು ಹಸಿ ಗಾಂಜಾ ಬೆಳೆಯನ್ನು ಮುದ್ದೇಬಿಹಾಳ ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಗಾಂಜಾ ಗಿಡ ಬೆಳೆದಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಆಧರಿಸಿ ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ ನೇತೃತ್ವದಲ್ಲಿ ಪಿಎಸೈ ಆರೀಫ ಮುಷಾಪುರಿ ಮತ್ತು ಪೊಲೀಸ್ ಸಿಬ್ಬಂದಿ ಹೊಲದ ಮೇಲೆ ದಾಳಿ ನಡೆಸಿ ಅಲ್ಲಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಸಂಗ್ರಹಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಗಳಾದ ಗೋವಿಂದ ಗೆಣ್ಣೂರ, ವಿರೇಶ ಹಾಲಗಂಗಾಧರಮಠ, ಮಲ್ಲನಗೌಡ ಬೋಳರೆಡ್ಡಿ, ಚಿದಾನಂದ್ ಸುರುಗಿಹಳ್ಳಿ, ಶ್ರೀಕಾಂತ ಬಿರಾದಾರ, ನರಸಿಂಹ ಚೌಧರಿ, ಶಿವರಾಜ ನಾಗರೆಡ್ಡಿ, ಮಂಜುನಾಥ ಬುಳ್ಳ, ಮಾಳಪ್ಪ ನಾಲತವಾಡ, ರವಿ ಲಮಾಣಿ ಭಾಗವಹಿದ್ದರು. ಗೆಜೆಟೆಡ್ ಅಧಿಕಾರಿಯಾಗಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ, ನಾಗರಬೆಟ್ಟ ಗ್ರಾಪಂ ಸಿಬ್ಬಂದಿ ನೇತೃತ್ವದಲ್ಲಿ ವಶಪಡಿಸಿಕೊಂಡ ಗಾಂಜಾ ಗಿಡಗಳ ಪಂಚನಾಮೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.