![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 7, 2021, 7:05 AM IST
ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯ ಗಡಿಗಳಲ್ಲಿ ಅನ್ನದಾತರು ನಡೆಸುತ್ತಿರುವ ಪ್ರತಿಭಟನೆ ಶನಿವಾರ 100 ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರೈತರು, ಕುಂಡಲಿ-ಮಾನೇಸರ್ ಪಲ್ವಾಲ್ ಎಕ್ಸ್ಪ್ರಸ್ವೇ ತಡೆ ನಡೆಸಿ ಕರಾಳ ದಿನ ಆಚರಿಸಿದ್ದಾರೆ.
ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ರೈತರು ಬೆ.11ರಿಂದ ಸಂಜೆ 4ರವರೆಗೆ ಹೆದ್ದಾರಿ ತಡೆದು, ಟ್ರ್ಯಾಕ್ಟರ್ ರ್ಯಾಲಿಯನ್ನೂ ನಡೆಸಿದ್ದಾರೆ. 136 ಕಿ.ಮೀ.ನ ಎಕ್ಸ್ಪ್ರಸ್ ವೇನಲ್ಲಿ ತ್ರಿವರ್ಣ ಧ್ವಜ ಹಾಗೂ ರೈತ ಧ್ವಜಗಳನ್ನು ಹಿಡಿದು ಮೆರವಣಿಗೆಯನ್ನೂ ನಡೆಸಿದ್ದು, ನಮ್ಮ ಹೋರಾಟ ಇಲ್ಲಿಗೇ ಮುಗಿದಿಲ್ಲ. ನಾವು ಮತ್ತಷ್ಟು ಬಲಿಷ್ಠರಾಗಿದ್ದೇವೆ ಎಂದು ಸಾರಿ ಹೇಳಿದ್ದಾರೆ.
ರೈತ ಪ್ರತಿಭಟನೆಗೆ 100 ದಿನಗಳು ತುಂಬಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಬಿಜೆಪಿಯ ದುರಹಂಕಾರಕ್ಕೆ 100 ದಿನಗಳು ಸಂದವು. ಇದು ಭಾರತದ ಪ್ರಜಾಪ್ರಭುತ್ವದ ಪುಟಗಳಲ್ಲಿನ ಕರಾಳ ಅಧ್ಯಾಯ’ ಎಂದು ಹೇಳಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, “ಯಾರ ಮಕ್ಕಳು ದೇಶದ ಗಡಿಗಳಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೋ, ಅಂಥವರಿಗೆ ಸರಕಾರ ಮೊಳೆಗಳನ್ನು ಬಡಿಯುತ್ತಿದೆ. ಅನ್ನದಾತರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ, ಸರಕಾರ ಅವರ ವಿರುದ್ಧ ದೌರ್ಜನ್ಯ ಎಸಗುತ್ತಿದೆ’ ಎಂದು ಕಿಡಿಕಾರಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.