ಬ್ರಿಟನ್‌ ಆರೋಗ್ಯ ಇಲಾಖೆಗೆ ರಾಜ್ಯದಿಂದ 1,000 ನರ್ಸಿಂಗ್ ಸಿಬ್ಬಂದಿ : ಅಶ್ವತ್ಥನಾರಾಯಣ


Team Udayavani, May 30, 2021, 10:00 PM IST

ಬ್ರಿಟನ್‌ ಆರೋಗ್ಯ ಇಲಾಖೆಗೆ ರಾಜ್ಯದಿಂದ 1,000 ನರ್ಸಿಂಗ್ ಸಿಬ್ಬಂದಿ : ಅಶ್ವತ್ಥನಾರಾಯಣ

ಬೆಂಗಳೂರು: ಬ್ರಿಟನ್‌ ದೇಶದ ರಾಷ್ಟ್ರೀಯ ಆರೋಗ್ಯ ಇಲಾಖೆ ಯಿಂದ 1,000 ಶುಶ್ರೂಷಕರಿಗೆ ಬೇಡಿಕೆ ಬಂದಿದ್ದು, ಕೋವಿಡ್‌ ಸಂಕಷ್ಟ ಮುಗಿದ ನಂತರ ಅಷ್ಟೂ ನರ್ಶಿಂಗ್‌ ಸಿಬ್ಬಂದಿಯನ್ನು ಲಂಡನ್‌ಗೆ ಕಳಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ವರ್ಚುಯಲ್‌ ವೇದಿಕೆ ಮೂಲಕ ಭಾನುವಾರ ವಿಶ್ವ ಕನ್ನಡ ಶುಶ್ರೂಷಕರ ಸಂಘ’ದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, “ಈಗಾಗಲೇ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಎನ್‌ಎಚ್‌ಎಸ್‌ ಜತೆ ಒಪ್ಪಂದಕ್ಕೆ ಸಹಿ ಬಿದ್ದಿದೆ. 1,000 ಶುಶ್ರೂಷಕರನ್ನು ಕಳಿಸುವಂತೆ ಅವರು ಕೋರಿದ್ದಾರೆ. ಅದಕ್ಕೆ ಈಗಾಗಲೇ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಗೆ ಒಗ್ಗಿ ಕೆಲಸ ಮಾಡುವುದಕ್ಕೆ ಅಗತ್ಯವಾದ ಭಾಷೆ, ಸಂವಹನ ಕಲೆ, ಸೇವಾ ಮನೋಭಾವ ಇತ್ಯಾದಿಗಳ ಬಗ್ಗೆ ಎಲ್ಲರಿಗೂ ತರಬೇತಿ ನೀಡಲಾಗುವುದು ಎಂದರು.

ಇನ್ನೂ ಹೆಚ್ಚಿನ ನರ್ಶಿಂಗ್‌ ಸಿಬ್ಬಂದಿ ಅಗತ್ಯವಿದ್ದರೆ ಕಳಿಸಲಾಗುವುದು. ಅಲ್ಲದೆ ಬ್ರಿಟನ್‌ ಜತೆಗೆ ಇತರೆ ದೇಶಗಳಿಗೂ ನರ್ಶಂಗ್‌ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ :ಕೋವಿಡ್‌ ನೆರವಿನಲ್ಲಿ ರಾಜಕೀಯ ಬೇಡ : ಆರ್‌.ವಿ. ದೇಶಪಾಂಡೆ

ನರ್ಶಿಂಗ್‌ ಸಿಬ್ಬಂದಿಗೆ ಅಧಿಕಾರಿ ಮಟ್ಟದ ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ನಿರ್ಧಾರವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದೇಶವನ್ನೂ ಹೊರಡಿಸಿದ್ದಾರೆ. ಅಲ್ಲದೆ, ಅವರ ಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗಿದೆ. ಜತೆಗೆ, ಇದು ದೇಶಾದ್ಯಂತ ಸುಮಾರು 2 ಲಕ್ಷ ನರ್ಶಿಂಗ್‌ ಸಿಬ್ಬಂದಿಗೆ ಆರೋಗ್ಯ ಕೇಂದ್ರಗಳಲ್ಲಿ ಉದ್ಯೋಗವನ್ನು ಕೊಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ‘ವಿಶ್ವ ಕನ್ನಡ ಶುಶ್ರೂಷಕರ ಸಂಘ’ವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಎಂ.ಬಿ.ಪಾಟೀಲ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗೋಪಾಲ ಕುಲಕರ್ಣಿ, ಸಂಘದ ಅಧ್ಯಕ್ಷ ತಮ್ಮಣ್ಣ, ಕಾರ್ಯದರ್ಷಿ ನಾಗರಾಜ್‌, ಖಜಾಂಚಿ ಹೇಮೇಗೌಡ ಮುಂತಾದವರು ವಿಶ್ವದ ವಿವಿಧ ದೇಶಗಳಿಂದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.