ಮುಂಬಯಿ ಡ್ಯಾನ್ಸ್ ಬಾರ್ ಮೇಲೆ ದಾಳಿ; ರಹಸ್ಯ ನೆಲಮಾಳಿಗೆಯಲ್ಲಿದ್ದ 17 ಯುವತಿಯರ ರಕ್ಷಣೆ
ಮೇಕಪ್ ರೂಂನಲ್ಲಿದ್ದ ದೊಡ್ಡ ಗಾತ್ರದ ಕನ್ನಡಿಯೊಂದು ಅಧಿಕಾರಿಗಳ ಗಮನಕ್ಕೆ ಬಂದಿತ್ತು.
Team Udayavani, Dec 13, 2021, 3:59 PM IST
ಮುಂಬಯಿ: ಮುಂಬಯಿಯ ಅಂಧೇರಿಯಲ್ಲಿ ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿರುವ ಪೊಲೀಸರು ಈ ಸಂದರ್ಭದಲ್ಲಿ ಕನಿಷ್ಠ 17 ಯುವತಿಯರನ್ನು ರಕ್ಷಿಸಿರುವುದಾಗಿ ಸೋಮವಾರ (ಡಿಸೆಂಬರ್ 13) ತಿಳಿಸಿದ್ದಾರೆ.
ಇದನ್ನೂ ಓದಿ:ಮಕ್ಕಳಾಯ್ತು, ಈಗ ಶಾಲೆಗೆ ಮರಳಿ ಬಾ ಶಿಕ್ಷಕ! ಶಿಕ್ಷಕರನ್ನು ಕರೆತರಲು ಶಿಕ್ಷಣ ಇಲಾಖೆ ಹೆಜ್ಜೆ
ದಾಳಿ ನಡೆಯಲಿದೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಡ್ಯಾನ್ಸ್ ಬಾರ್ ನ ಮಾಲೀಕರು ಯುವತಿಯರನ್ನು ರಹಸ್ಯ ನೆಲಮಾಳಿಗೆಯಲ್ಲಿ ಅಡಗಿಸಿ ಇಟ್ಟಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಮಹಿಳೆಯೊಬ್ಬಳು ನೀಡಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ಅಂಧೇರಿಯಲ್ಲಿರುವ ದೀಪಾ ಬಾರ್ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಸ್ಟೋರ್ ರೂಂ, ಕಿಚನ್ ರೂಂ ಹಾಗೂ ಬಾತ್ ರೂಂನಲ್ಲೆಲ್ಲಾ ಶೋಧ ಕಾರ್ಯ ನಡೆಸಿದ್ದರು, ಯಾವ ಯುವತಿಯೂ ಪತ್ತೆಯಾಗಿರಲಿಲ್ಲವಾಗಿತ್ತು.
ಬಾರ್ ಮ್ಯಾನೇಜರ್, ಕ್ಯಾಶಿಯರ್ ನನ್ನು ಈ ಸಂದರ್ಭದಲ್ಲಿ ಪೊಲೀಸರು ಪ್ರಶ್ನಿಸಿದ್ದರು, ಆದರೂ ಕೂಡಾ ತಮ್ಮ ಬಾರ್ ನಲ್ಲಿ ಯಾವುದೇ ಯುವತಿಯರು ಇಲ್ಲ ಎಂದು ತಿಳಿಸಿದ್ದರು. ಈ ವೇಳೆ ಮೇಕಪ್ ರೂಂನಲ್ಲಿದ್ದ ದೊಡ್ಡ ಗಾತ್ರದ ಕನ್ನಡಿಯೊಂದು ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಗಾಜನ್ನು ಸರಿಸಲು ಪ್ರಯತ್ನಿಸಿದರೂ ಕೂಡಾ ಸಾಧ್ಯವಾಗಿರಲಿಲ್ಲ. ನಂತರ ಸುತ್ತಿಗೆಯಿಂದ ಕನ್ನಡಿಯನ್ನು ಒಡೆದಾಗ, ರಹಸ್ಯ ನೆಲಮಾಳಿಗೆ ಪತ್ತೆಯಾಗಿತ್ತು. ಅಲ್ಲಿ ಸುಮಾರು 17 ಯುವತಿಯರನ್ನು ಅಡಗಿಸಿ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಹಸ್ಯ ನೆಲಮಾಳಿಗೆಯಲ್ಲಿ ಎ.ಸಿ, ಬೆಡ್ ಗಳು ಹಾಗೂ ಇನ್ನಿತರ ಐಶಾರಾಮಿ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದು, ಬಾರ್ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಸಿಬಂದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.