![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 21, 2021, 1:19 PM IST
ನವದೆಹಲಿ: ಭಾರತದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 200ಕ್ಕೆ ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ. ಇದರಲ್ಲಿ ಈವರೆಗೆ 77 ಮಂದಿ ಸೋಂಕಿನಿಂದ ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಡಿಸೆಂಬರ್ 21) ಮಾಹಿತಿ ನೀಡಿದೆ.
ಇದನ್ನೂ ಓದಿ:ಮೇಕದಾಟು ಯೋಜನೆ: ಜ.9ರಿಂದ ಕಾಂಗ್ರೆಸ್ ನಿಂದ 169 ಕಿ.ಮೀ ಪಾದಯಾತ್ರೆ
ಮಹಾರಾಷ್ಟ್ರದಲ್ಲಿ 54 ಹಾಗೂ ದೆಹಲಿಯಲ್ಲಿ 54 ಒಮಿಕ್ರಾನ್ ಪ್ರಕರಣ ವರದಿಯಾಗಿದೆ. ಇನ್ನುಳಿದಂತೆ ತೆಲಂಗಾಣದಲ್ಲಿ 20, ಕರ್ನಾಟಕದಲ್ಲಿ 19, ರಾಜಸ್ಥಾನದಲ್ಲಿ 18, ಕೇರಳದಲ್ಲಿ 15, ಗುಜರಾತ್ ನಲ್ಲಿ 14, ಉತ್ತರಪ್ರದೇಶದಲ್ಲಿ 02, ಆಂಧ್ರಪ್ರದೇಶದಲ್ಲಿ 1, ಚಂಡೀಗಢದಲ್ಲಿ 01, ತಮಿಳುನಾಡಿನಲ್ಲಿ 01, ಪಶ್ಚಿಮಬಂಗಾಳದಲ್ಲಿ 01 ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.
ಆರೋಗ್ಯ ಸಚಿವಾಲಯದ ಅಂಕಿಅಂಶದ ಪ್ರಕಾರ, ಭಾರತದಲ್ಲಿ 5,326 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದ್ದು, ಇದು ಕಳೆದ 581 ದಿನಗಳ ಕನಿಷ್ಠದ್ದಾಗಿದೆ ಎಂದು ತಿಳಿಸಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 79,097ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ 24 ಗಂಟೆಯಲ್ಲಿ ಕೋವಿಡ್ ನಿಂದ 453 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,78,007ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದೇ ದಿನದಲ್ಲಿ 3,170 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.