ಇಟಲಿ ದೋಣಿ ದುರಂತ: ಕನಿಷ್ಟ 24 ಪಾಕ್ ಪ್ರಜೆಗಳು ಮೃತ್ಯು
Team Udayavani, Feb 27, 2023, 3:49 PM IST
ಇಸ್ಲಾಮಾಬಾದ್: ದಕ್ಷಿಣ ಇಟಲಿಯಲ್ಲಿ ಸೋಮವಾರ ನಡೆದ ದೋಣಿ ದುರಂತದಲ್ಲಿ 24 ಕ್ಕೂ ಹೆಚ್ಚು ಮಂದಿ ಪಾಕಿಸ್ತಾನಿಯರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಶೇಹಬಾಝ್ ಶರೀಫ್ ಮಾಹಿತಿ ನೀಡಿದ್ದಾರೆ.
ಸುಮಾರು 150 ಕ್ಕೂ ಹೆಚ್ಚು ಮಂದಿ ವಲಸಿಗರನ್ನು ಯೂರೋಪಿಗೆ ಕೊಂಡೊಯ್ಯುತ್ತಿದ್ದ ದೋಣಿ ದಕ್ಷಿಣ ಇಟಲಿ ಸಮುದ್ರ ದಂಡೆಯಲ್ಲಿ ಬಂಡೆಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಈವರೆಗೆ ಸುಮಾರು 80 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದ್ದು 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಕಿಸ್ತಾನ, ಇರಾನ್, ಅಫ್ಘಾನಿಸ್ತಾನ ಮೊದಲಾದ ದೇಶಗಳ ವಲಸಿಗರನ್ನು ತುಂಬಿದ್ದ ಮರದ ಹಲಗೆಗಳಿಂದ ತಯಾರಿಸಲ್ಪಟ್ಟಿದ್ದ ದೋಣಿ ಟರ್ಕಿಯಿಂದ ಹೊರಟು ಯೂರೋಪ್ ಕಡೆಗೆ ಪ್ರಯಾಣ ಬೆಳೆಸಿತ್ತು. ಈ ವೇಳೆ ಬಂಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಘಟನೆಯಲ್ಲಿ 51ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಅದರಲ್ಲಿ ಸುಮಾರು 24 ಮಂದಿ ಪಾಕಿಸ್ತಾನದ ಪ್ರಜೆಗಳು ಎಂದು ತಿಳಿದುಬಂದಿದೆ.
ಇಟಲಿಯಲ್ಲಿ ನಡೆದ ದೋಣಿ ದುರಂತದಲ್ಲಿ 24ಕ್ಕೂ ಹೆಚ್ಚು ಪಾಕಿಸ್ತಾನಿಯರು ಮೃತಪಟ್ಟಿದ್ದಾರೆ. ಇದು ಖಂಡಿತಾ ಭೀತಿಯುಂಟು ಮಾಡಿದೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಶೇಹಬಾಝ್ ಶರೀಫ್ ಹೇಳಿದ್ದಾರೆ. ಅಲ್ಲದೇ, ʻಈ ಬಗ್ಗೆ ವಿದೇಶಾಂಗ ಸಚಿವಾಲಯ ಆದಷ್ಟು ಬೇಗ ತನಿಖೆ ನಡೆಸಿ ದೇಶಕ್ಕೆ ಧೈರ್ಯ ತುಂಬಲಿʼ ಎಂದೂ ಹೇಳಿದ್ದಾರೆ.
ಯೂರೋಪ್ಗೆ ಮಾನವ ಕಳ್ಳಸಾಗಣಿಕೆ ಮಾಡಲು ಟರ್ಕಿ ಉತ್ತಮ ಮಾರ್ಗವಾಗಿದ್ದು ಪ್ರತಿ ವರ್ಷ ಈ ದಾರಿಯಲ್ಲಿ ಲಕ್ಷಾಂತರ ಮಂದಿಯನ್ನು ಕಳ್ಳಸಾಗಾಣಿಕೆ ಮಾಡಲಾಗುತ್ತದೆ. ಕಳ್ಳ ಸಾಗಾಣಿಕೆದಾರರಿಗೆ ಯೂರೋಪ್ನಲ್ಲಿ ಇಳಿಯಲು ಇಟಲಿ ಸಮುದ್ರ ದಂಡೆಗಳು ಸೂಕ್ತ ಪ್ರದೇಶವಾಗಿದ್ದು ಇದೇ ಪ್ರದೇಶದಲ್ಲಿ ದೋಣಿ ದುರಂತ ಸಂಭವಿಸಿದೆ.
ಇದನ್ನೂ ಓದಿ: ಪುಟಿನ್ ಆಪ್ತರೇ ಅವರ ಹತ್ಯೆ ಮಾಡಲಿದ್ದಾರೆ..: ಭವಿಷ್ಯ ನುಡಿದ ಉಕ್ರೇನ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.