IT ದಾಳಿ: ಉದ್ಯಮಿ ಮನೆಯಲ್ಲಿ ಪತ್ತೆಯಾದ ನಗದು 284 ಕೋಟಿಗೆ ಏರಿಕೆ, ಇನ್ನೂ ಮುಗಿದಿಲ್ಲ ಎಣಿಕೆ!
ಜೈನ್ ಮನೆಯಲ್ಲಿ 107 ಕೋಟಿ ರೂಪಾಯಿ ನಗದು ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ದಾಖಲೆಗಳ ವಶ
Team Udayavani, Dec 27, 2021, 12:49 PM IST
ಲಕ್ನೋ: ಉತ್ತರಪ್ರದೇಶದ ಸುಗಂಧದ್ರವ್ಯ ಉದ್ಯಮಿ ಪಿಯೂಷ್ ಜೈನ್ ನಿವಾಸದ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಈವರೆಗೆ 284 ಕೋಟಿ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಚಿನ್ನ, ಬೆಳ್ಳಿಯನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದು, ಇನ್ನೂ ಕೂಡಾ ಶೋಧ ಕಾರ್ಯ ಮತ್ತು ಲೆಕ್ಕಾಚಾರ ಮುಂದುವರಿದಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ:365 ಕೋಟಿ ದೇವತೆಗಳಲ್ಲಿ ಕ್ರೈಸ್ತಕೂಡ ಒಬ್ಬನಾಗುವ ಕಾಲ ಸನ್ನಿಹಿತ: ಸೂಲಿಬೆಲೆ
ಇಂದು ಬೆಳಗ್ಗೆ ಉತ್ತರಪ್ರದೇಶದ ಕನ್ನೌಜ್ ನಲ್ಲಿರುವ ಪಿಯೂಷ್ ಜೈನ್ ಮನೆಯಲ್ಲಿ 107 ಕೋಟಿ ರೂಪಾಯಿ ನಗದು ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಎಸ್ ಟಿ (ಸರಕು ಮತ್ತು ಸೇವೆಗೆಳ ತೆರಿಗೆ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶ ಕನ್ನೌಜ್ ನ ಛುಪ್ಪಾಟ್ಟಿ ಪ್ರದೇಶದ ನಿವಾಸಿಯಾಗಿರುವ ಪಿಯೂಷ್ ಜೈನ್, ತನ್ನ ಉದ್ಯಮಕ್ಕಾಗಿ ಹಿರಿಯರ ಚಿನ್ನವನ್ನು ಮಾರಾಟ ಮಾಡಿ ಹಣವನ್ನು ಸಂಗ್ರಹಿಸಿರುವುದಾಗಿ ಮೂಲಗಳು ಹೇಳಿವೆ. ಆದರೆ ಈವರೆಗೂ ಜೈನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತನಿಖೆಯ ವೇಳೆ ಅಧಿಕಾರಿಗಳಿಗೆ ಚಿನ್ನವನ್ನು ಮಾರಾಟ ಮಾಡಿ ಹಣ ಸಂಗ್ರಹಿಸಿರುವುದಾಗಿ ಜೈನ್ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಸಂದರ್ಭದಲ್ಲಿ ಪಿಯೂಷ್ ಜೈನ್ ನಾಪತ್ತೆಯಾಗಿದ್ದು, ಐಟಿ ಅಧಿಕಾರಿಗಳು ನಿರಂತರವಾಗಿ ಮೊಬೈಲ್ ಗೆ ಕರೆ ಮಾಡಿದ್ದ ನಂತರ ಜೈನ್ ಮನೆಗೆ ವಾಪಸ್ಸಾಗಿದ್ದು, ಭಾನುವಾರ ಬಂಧಿಸಲಾಗಿತ್ತು ಎಂದು ಜಿಎಸ್ ಟಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಎಎನ್ ಐ ವರದಿ ಮಾಡಿದೆ.
ಜೈನ್ ಮನೆಯಿಂದ ವಶಪಡಿಸಿಕೊಂಡ ನಗದು ಕುರಿತು ವಿವರಣೆ ನೀಡಲು ಸಮಯಾವಕಾಶ ಬೇಕು ಎಂದು ಜೈನ್ ಅಧಿಕಾರಿಗಳಿಗೆ ತಿಳಿಸಿರುವುದಾಗಿ ವರದಿ ಹೇಳಿದ್ದು, ಇದು ಸಂಬಂಧಿಕರ ಹಣ ಎಂದು ಜೈನ್ ತಿಳಿಸಿದ್ದರೂ ಕೂಡಾ ಈವರೆಗೂ ಯಾರೊಬ್ಬರು ಹೇಳಿಕೆ ನೀಡಲು ಮುಂದೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.