ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

ವಸಾಹತುಶಾಹಿ ಬ್ರಿಟಿಷ್‌ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ತಿಲಾಂಜಲಿ

Team Udayavani, Jul 1, 2024, 6:47 AM IST

ಇಂದಿನಿಂದ 3 ದೇಸಿ ಕಾನೂನು ಜಾರಿ

ಹೊಸದಿಲ್ಲಿ: ವಸಹಾತುಶಾಹಿಯ ಪಳೆಯುಳಿಕೆಯಂತಿದ್ದ ಮೂರು ಕ್ರಿಮಿನಲ್‌ ಕಾಯ್ದೆಗಳಿಗೆ ಬದಲಾವಣೆ ತಂದು ಪರಿಚಯಿಸ ಲಾದ ಹೊಸ ಕಾನೂನುಗಳು ಸೋಮವಾರದಿಂದ ದೇಶಾದ್ಯಂತ ಜಾರಿಯಾಗಲಿವೆ.

ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಬದಲಿಗೆ ಭಾರ ತೀಯ ನ್ಯಾಯ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಬದಲಿಗೆ ಭಾರ ತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಸಾಕ್ಷ್ಯ ಕಾಯ್ದೆಯ ಬದಲಿಗೆ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ಬರಲಿವೆ.

ಈ ಮೊದಲು ಜಾರಿಯಲ್ಲಿದ್ದ ಕ್ರಿಮಿನಲ್‌ ಕಾನೂನುಗಳು ಬ್ರಿಟಿಷ್‌ ಕಾಲದವುಗಳಾಗಿದ್ದವು. ಇವುಗಳಲ್ಲಿ ವಸಾಹಾತುಶಾಹಿ ಮನಃಸ್ಥಿತಿ ತುಂಬಿತ್ತು ಎಂಬ ಕಾರಣಕ್ಕೆ ಹಾಗೂ ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಬೇಕು ಎಂಬ ಉದ್ದೇಶ ದಿಂದ ಹೊಸ ಕಾನೂನುಗಳನ್ನು ರಚನೆ ಮಾಡ ಲಾಗಿತ್ತು. ಯಾವುದೇ ಠಾಣೆಯಲ್ಲಿ ಎಫ್ಐಆರ್‌ ರಚನೆ ಮಾಡಬಹುದಾದ ಅವಕಾಶ (ಜೀರೋ ಎಫ್ಐಆರ್‌), ಅಪರಾಧ ಪ್ರಕರಣಗಳಲ್ಲಿ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ, ಆನ್‌ಲೈನ್‌ನಲ್ಲಿ ದೂರು ದಾಖಲು, ಎಸ್‌ಎಂಎಸ್‌ ಮೂಲಕ ಎಲೆಕ್ಟ್ರಾನಿಕ್‌ ಸಮನ್ಸ್‌ ಮುಂತಾದ ಅವಕಾಶಗಳನ್ನು ಈ ಹೊಸ ಕಾನೂನುಗಳು ನೀಡುತ್ತವೆ.

45 ದಿನಗಳಲ್ಲಿ ಶಿಕ್ಷೆ ಘೋಷಣೆ
ವಿಚಾರಣೆ ಮುಗಿದ 45 ದಿನಗಳ ಒಳಗೆ ಅಪರಾಧಿಗಳಿಗೆ ಶಿಕ್ಷೆ ಘೋಷಣೆ ಮಾಡಬೇಕು. ಅಲ್ಲದೆ ಮೊದಲ ವಿಚಾರಣೆ ನಡೆದ 60 ದಿನಗಳ ಒಳಗೆ ಆರೋಪಗಳನ್ನು ಪಟ್ಟಿ ಮಾಡಬೇಕು ಎಂಬುದನ್ನು ಹೊಸ ಕಾನೂನುಗಳಲ್ಲಿ ಸೇರ್ಪಡೆ ಮಾಡಲಾಗಿದೆ. ಇದು ತ್ವರಿತ ನ್ಯಾಯದಾನಕ್ಕೆ ಸಹಾಯಕವಾಗಲಿದೆ. ಜತೆಗೆ ಅತ್ಯಾಚಾರಕ್ಕೆ ತುತ್ತಾದ ಮಹಿಳೆಯ ಹೇಳಿಕೆಯನ್ನು ಮಹಿಳಾ ಪೊಲೀಸರೇ ದಾಖಲಿಸಬೇಕು ಎಂಬುದನ್ನು ಇದರಲ್ಲಿ ಸೇರಿಸಲಾಗಿದೆ. ಐಪಿಸಿಯಲ್ಲಿ ದಾಖಲಾದ ಅಪರಾಧಗಳಾದ ಮದುವೆಯಾಗುವುದಾಗಿ ಸುಳ್ಳು ಭರವಸೆ, ಅಪ್ರಾಪ್ತ ವಯಸ್ಸಿನವರ ಮೇಲೆ ಸಾಮೂಹಿಕ ಅತ್ಯಾಚಾರ, ಗುಂಪುಹಲ್ಲೆ ಮತ್ತು ಸರಗಳ್ಳತನಗಳನ್ನು ಅಪರಾಧಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ಮೂರು ಹೊಸ ಕಾನೂನುಗಳನ್ನು ಜಾರಿ ಮಾಡಲು ಕೇಂದ್ರ ಸರಕಾರ ಭರದ ಸಿದ್ಧತೆಗಳನ್ನು ಕೈಗೊಂಡಿದೆ. ಎನ್‌ಸಿಆರ್‌ಬಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತರಬೇತಿಯನ್ನು ನೀಡಲಾಗಿದೆ. ಸಹಾಯಕ ತಂಡಗಳು ಮತ್ತು ಕಾಲ್‌ ಸೆಂಟರ್‌ಗಳನ್ನು ತೆರೆಯಲಾಗಿದೆ. ದೇಶದ 17,500ಕ್ಕೂ ಹೆಚ್ಚು ಪೊಲೀಸ್‌ ಠಾಣೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಏನಿತ್ತು? ಏನಾಯಿತು?
-ಭಾರತೀಯ ದಂಡ ಸಂಹಿತೆ – ಭಾರತೀಯ ನ್ಯಾಯ ಸಂಹಿತೆ
-ಅಪರಾಧ ಪ್ರಕ್ರಿಯಾ ಸಂಹಿತೆ – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ
-ಸಾಕ್ಷ್ಯ ಕಾಯ್ದೆ – ಭಾರತೀಯ ಸಾಕ್ಷ್ಯ ಅಧಿನಿಯಮ

ಏನೆಲ್ಲ ಹೊಸತು?
-ಶೂನ್ಯ ಎಫ್ಐಆರ್‌
-ಕಡ್ಡಾಯ ವೀಡಿಯೋ ಚಿತ್ರೀಕರಣ
-ಆನ್‌ಲೈನ್‌ ಮೂಲಕ ದೂರು ದಾಖಲು
-ಎಸ್‌ಎಂಎಸ್‌ ಮೂಲಕ ಸಮನ್ಸ್‌
-45 ದಿನಗಳ ಒಳಗೆ ಶಿಕ್ಷೆ ಘೋಷಣೆ
-60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಕೆ

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.