ಅಸ್ಸಾಂ, ಮೇಘಾಲಯದಲ್ಲಿ ಮೇಘ ಸ್ಫೋಟ; ಪ್ರವಾಹ, ಭೂಕುಸಿತ-ಜನರ ಪರದಾಟ; 31 ಮಂದಿ ಸಾವು

ಕಳೆದ 60 ವರ್ಷಗಳಲ್ಲಿಯೇ ಅಗರ್ತಲದಲ್ಲಿ ಕಂಡು ಕೇಳರಿಯದ ವರ್ಷಧಾರೆಯಾಗಿದೆ

Team Udayavani, Jun 18, 2022, 12:37 PM IST

ಅಸ್ಸಾಂ, ಮೇಘಾಲಯದಲ್ಲಿ ಮೇಘ ಸ್ಫೋಟ; ಪ್ರವಾಹ, ಭೂಕುಸಿತ-ಜನರ ಪರದಾಟ; 31 ಮಂದಿ ಸಾವು

ಗುವಾಹಟಿ: ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಭೂ ಕುಸಿತ, ಪ್ರವಾಹದಿಂದಾಗಿ ಅಸ್ಸಾಂ ಮತ್ತು ಮೇಘಾಲಯದಲ್ಲಿ 31 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಬಾಲಿವುಡ್ ದಂತಕಥೆ ಬಿ.ಆರ್.ಛೋಪ್ರಾ ಜುಹು ಬಂಗ್ಲೆ 183 ಕೋಟಿ ರೂಪಾಯಿಗೆ ಮಾರಾಟ

ಅಸ್ಸಾಂನ 28 ಜಿಲ್ಲೆಯ 19 ಲಕ್ಷ ಜನರ ಮೇಲೆ ಪರಿಣಾಮ ಬೀರುವಂತಾಗಿದ್ದು, ಸುಮಾರು ಒಂದು ಲಕ್ಷ ಜನರು ನಿರಾಶ್ರಿತ ಶಿಬಿರದಲ್ಲಿದ್ದಾರೆ. ಪ್ರವಾಹ ಮತ್ತು ಭೂಕುಸಿತದಿಂದ ಅಸ್ಸಾಂನಲ್ಲಿ 12 ಮಂದಿ ಹಾಗೂ ಮೇಘಾಲಯದಲ್ಲಿ 19 ಜನರು ಸಾವನ್ನಪ್ಪಿದ್ದಾರೆ.

ತ್ರಿಪುರಾ ರಾಜಧಾನಿ ಅಗರ್ತಲದಲ್ಲಿ ಭಾರೀ ಪ್ರಮಾಣದ ಪ್ರವಾಹ ವರದಿಯಾಗಿದ್ದು, ಕೇವಲ ಆರು ಗಂಟೆಯ ಅವಧಿಯಲ್ಲಿ ದಾಖಲೆಯ 145 ಮಿಲಿ ಮೀಟರ್ ಮಳೆಯಾಗಿದೆ. ಇದರಿಂದಾಗಿ ತ್ರಿಪುರಾದ ಉಪಚುನಾವಣೆ ಪ್ರಚಾರಕ್ಕೂ ಅಡ್ಡಿಯುಂಟಾಗಿದೆ ಎಂದು ವರದಿ ತಿಳಿಸಿದೆ.

ಮೇಘಾಲಯದ ಮೌಸೈನ್ರಾಮ್ ಮತ್ತು ಚಿರಾಪುಂಜಿಯಲ್ಲಿ 1940ರ ಬಳಿಕದ ದಾಖಲೆಯ ಮಳೆ ಸುರಿದಿದೆ. ಕಳೆದ 60 ವರ್ಷಗಳಲ್ಲಿಯೇ ಅಗರ್ತಲದಲ್ಲಿ ಕಂಡು ಕೇಳರಿಯದ ವರ್ಷಧಾರೆಯಾಗಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಭಾರೀ ಪ್ರವಾಹದ ಪರಿಣಾಮ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರವಾಹದಲ್ಲಿ ಸಾವನ್ನಪ್ಪಿರುವ ಸಂತ್ರಸ್ತರ ಕುಟುಂಬಕ್ಕೆ ಮೇಘಾಲಯ ಮುಖ್ಯಮಂತ್ರಿ ಕೋನಾರ್ಡ್ ಸಂಗ್ಮಾ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಸ್ಸಾಂನ ಅಂದಾಜು 3,000 ಗ್ರಾಮಗಳು ಪ್ರವಾಹದಿಂದ ನಲುಗಿ ಹೋಗಿದೆ. 43,000 ಹೆಕ್ಟೇರ್ ಗಳಷ್ಟು ಬೆಳೆ ಪ್ರವಾಹದಿಂದ ನಾಶವಾಗಿದೆ.

ಪ್ರವಾಹ ಪರಿಸ್ಥಿತಿ ಮತ್ತು ಕೇಂದ್ರದ ನೆರವು ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.