ಸ್ವಾಬ್ ಟೆಸ್ಟ್ ಇಲ್ಲದೆ ನಕಲಿ ಕೋವಿಡ್ ವರದಿ: ನಾಲ್ವರ ಬಂಧನ
Team Udayavani, Apr 30, 2021, 8:10 PM IST
ಬೆಂಗಳೂರು: ಸ್ವಾಬ್ ಟೆಸ್ಟ್ ಮಾಡದೇ ಆಧಾರ್ ಕಾರ್ಡ್ ಪಡೆದುಕೊಂಡು ನೆಗೆಟಿವ್ ಆರ್ಟಿಪಿಎಸ್ ಆರ್ ಟೆಸ್ಟ್ ವರದಿ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಚೋಡದೇವನಹಳ್ಳಿಯ ಮುಖೇಶ್ ಸಿಂಗ್ (25) ಹೊಸಹಳ್ಳಿಯ ನಾಗರಾಜ್ ಅಲಿಯಾಸ್ ಓಂ ಶಕ್ತಿ (39) ಮತ್ತು ಲ್ಯಾಬ್ ಟೆಕ್ನಿಷಿಯನ್ ಗಳಾದ ಭಾಗ್ಯ(53) ಮತ್ತು ಅನಿಲ್ ಕುಮಾರ್(44) ಬಂಧಿತರು. ಆರೋಪಿಗಳಿಂದ ಐದು ನೆಗೆಟಿವ್ ವರದಿಗಳು ಮತ್ತು ಎರಡು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಬೊಮ್ಮಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದೆ, ನೆಗೆಟಿವ್ ವರದಿ ಬೇಕಾದವರಿಗೆ ಯಾವುದೇ ಸ್ವಾಬ್ ಗಳನ್ನು ಪಡೆಯದೇ ಅವರಿಂದ ಹಣ ಮತ್ತು ಆಧಾರ್ ಕಾರ್ಡ್ ಪಡೆದು ನೆಗೆಟಿವ್ ಎಂದು ಆರ್ ಟಿಪಿಸಿಆರ್ ಪರೀಕ್ಷಾ ವರದಿಗಳನ್ನು ನೀಡುತ್ತಿದ್ದರು. ಆರೋಪಿಗಳ ವಿರುದ್ಧ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ :ಸಕ್ಕರೆ ನಾಡಿಗೆ ಕೊರೊನಾಘಾತ: 1348 ಮಂದಿಗೆ ಸೋಂಕು, 5 ಮಂದಿ ಸಾವು, 814 ಮಂದಿ ಗುಣಮುಖ
ಆರೋಪಿಗಳು ಮಧ್ಯವರ್ತಿಗಳ ಮೂಲಕ ನೆರೆ ರಾಜ್ಯ ಮತ್ತು ಜಿಲ್ಲೆಗಳಿಗೆ ತೆರಳುವ ಸಾರ್ವಜನಿಕರಿಗೆ ಪ್ರತಿ ವರದಿಗೆ 700-900 ರೂ. ಪಡೆದುಕೊಂಡು ನೆಗೆಟಿವ್ ವರದಿ ನೀಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.