Heatwave: ದಿಲ್ಲಿ ಸುತ್ತ ಉಷ್ಣಮಾರುತ: 15 ಸಾವು; 12 ಮಂದಿಗೆ ಐಸಿಯು ಚಿಕಿತ್ಸೆ

ದಿಲ್ಲಿಯಲ್ಲಿ 5, ನೋಯ್ಡಾದಲ್ಲಿ 10 ಸಾವು

Team Udayavani, Jun 19, 2024, 5:16 PM IST

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

ಹೊಸದಿಲ್ಲಿ: ಕಳೆದ 2 -3 ದಿನಗಳ ಅವಧಿಯಲ್ಲಿ ರಾಷ್ಟ್ರ ರಾಜಧಾನಿ ಹೊಸದಿಲ್ಲಿ ಹಾಗೂ ಅದರ ಸುತ್ತಮುತ್ತಲ ಸ್ಥಳಗಳಲ್ಲಿ ಉಷ್ಣಮಾರುತದ ಹೊಡೆತಕ್ಕೆ 15 ಮಂದಿ ಮೃತಪಟ್ಟಿದ್ದಾರೆ. ಇದರ ಜತೆಗೆ 12 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ. ಈ ಮಧ್ಯೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಬುಧವಾರ ಅಧಿಕಾರಿಗಳ ಸಭೆಯನ್ನು ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಕಳೆದ ಎರಡು ದಿನದಲ್ಲಿ ಸರಕಾರಿ ಸ್ವಾಮ್ಯದ ಆರ್‌ಎಂಎಲ್‌ ಹಾಸ್ಪಿಟಲ್‌ಗೆ 22 ರೋಗಿಗಳು ದಾಖಲಾಗಿದ್ದು, ಐವರು ಮೃತ ಪಟ್ಟಿದ್ದಾರೆ ಮತ್ತು 12ರಿಂದ 13 ಜನರಿಗೆ ವೆಂಟಿಲೇಟರ್‌ ನೆರವು ಒದಗಿಸಲಾಗಿದೆ. ಅದೇ ರೀತಿ ಸಫ‌ªರ್‌ಗಂಜ್‌ ಹಾಸ್ಪಿಟಲ್‌ನಲ್ಲೂ 60 ಉಷ್ಣಾಘಾತ ಪ್ರಕರಣಗಳು ವರದಿಯಾಗಿವೆ.

ಈ ಪೈಕಿ 42 ಜನರು ಆಸ್ಪತ್ರೆಗೆ ದಾಖಲಾದರೆ 6 ಜನರು ಮೃತಪಟ್ಟಿದ್ದಾರೆ. ಇನ್ನು ಎಲ್‌ಜೆಪಿ ಹಾಸ್ಪಿಟಲ್‌ನಲ್ಲಿ ಉಷ್ಣಾಘಾತ ಕಾರಣದಿಂದ ನಾಲ್ವರು ರೋಗಿಗಳು ಸಾವಿಗೀಡಾಗಿದ್ದಾರೆ. ಸರ್‌ ಗಂಗಾ ರಾಮ್‌ ಹಾಸ್ಪಿಟಲ್‌ ಹೊರರೋಗಿಗಳ ವಿಭಾಗದಲ್ಲಿ ನಿತ್ಯ 30ರಿಂದ 35 ಉಷ್ಣಾಘಾತ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಸಿಗಾಳಿ ಹೊಡೆತದ ಪರಿಣಾಮ ಆಸ್ಪತ್ರೆಗಳಿಗೆ ದಾಖಲಾದವರ ಪೈಕಿ ಹೆಚ್ಚಿನವರು ಕಾರ್ಮಿಕರಾಗಿದ್ದಾರೆ.

ಬಿಸಿ ಗಾಳಿಯ ತೀವ್ರತೆಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ದಿಲ್ಲಿ ಮತ್ತು ಸುತ್ತಮುತ್ತ ಪ್ರದೇಶಗಳ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಬುಧವಾರ ಆದೇಶ ಹೊರಡಿಸಿದೆ.

12 ವರ್ಷಗಳಲ್ಲೇ ಜೂ. 18ರಂದು ದಿಲ್ಲಿಯಲ್ಲಿ ಗರಿಷ್ಠ “ಬಿಸಿ ರಾತ್ರಿ’
12 ವರ್ಷಗಳಲ್ಲೇ ಜೂ. 18ರಂದು ದಿಲ್ಲಿಯು ಗರಿಷ್ಠ “ಬಿಸಿ ರಾತ್ರಿ’ಗೆ ಸಾಕ್ಷಿಯಾಗಿದ್ದು, 35.2 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ದಾಖಲೆಗಳ ಪ್ರಕಾರ ಇದು ಸಾಮಾನ್ಯಕ್ಕಿಂತ 8 ಡಿಗ್ರಿ ಸೆ. ಹೆಚ್ಚು. ದಿನದಲ್ಲಿ ಗರಿಷ್ಠ 43.6 ಡಿ.ಸೆ. ತಾಪದಾಖಲಾಗಿದ್ದರೆ ಈ ಋತುವಿನ ಸಾಮಾನ್ಯ ಉಷ್ಣಾಂಶಕ್ಕಿಂತ 4.8ಕ್ಕಿಂತ ಹೆಚ್ಚು ಎಂದು ತಿಳಿಸಿದೆ.

11 ರಾಜ್ಯಗಳಲ್ಲಿ ಸರಾಸರಿ 45 ಡಿ.ಸೆ. ತಾಪ
ಹೊಸದಿಲ್ಲಿ: ಭಾರತದ ಉತ್ತರ ಹಾಗೂ ಪೂರ್ವ ದಿಕ್ಕಿನ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪಂಜಾಬ್‌, ಹರಿಯಾಣ, ಹೊಸದಿಲ್ಲಿ, ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ, ಹಿಮಾಚಲ ಪ್ರದೇಶ, ಒಡಿಶಾ, ಝಾರ್ಖಂಡ್‌, ಜಮ್ಮು, ಬಿಹಾರ ರಾಜ್ಯಗಳಲ್ಲಿ ಸರಾಸರಿ 43-45 ಡಿ.ಸೆ. ತಾಪಮಾನ ದಾಖಲಾಗಿದೆ. ಹರಿಯಾಣದ ನೂಹ್‌ನಲ್ಲಿ 45.3 ಡಿಗ್ರಿ ಸೆ., ಗುರುಗ್ರಾಮ, ಫ‌ರೀದಾಬಾದ್‌ನಲ್ಲಿ 45 ಡಿಗ್ರಿ ಸೆ. ತಾಪಮಾನ ದಾಖಲಾಗಿತ್ತು.

 

ಟಾಪ್ ನ್ಯೂಸ್

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.