Congress: ಕೈನಿಂದ “ಶೇ.50 ಸರ್ಕಾರ” ಅಭಿಯಾನ ಶುರು
ಮಧ್ಯಪ್ರದೇಶದಲ್ಲಿ ಕರ್ನಾಟಕದ ಅಸ್ತ್ರ ಬಳಕೆಗೆ ತೀರ್ಮಾನ
Team Udayavani, Jun 27, 2023, 7:18 AM IST
ಭೋಪಾಲ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಬಳಸಿದ ಅಸ್ತ್ರವನ್ನೇ ಮಧ್ಯಪ್ರದೇಶದಲ್ಲೂ ಕೈ ನಾಯಕತ್ವ ಬಳಸುತ್ತಿದೆ. ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ “50% ಸರ್ಕಾರ” ಎಂಬ ಅಭಿಯಾನವನ್ನು ಸೋಮವಾರ ಆರಂಭಿಸಿದೆ. ಶೇ.50ರಷ್ಟು ಕಮಿಷನ್ ಕೊಡಿ ಮತ್ತು ಫೋನ್ನಲ್ಲೇ ಕೆಲಸ ಆಗುವಂತೆ ಮಾಡಿ” ಎಂಬ ಟ್ಯಾಗ್ಲೈನ್ನೊಂದಿಗೆ ಎಲ್ಲೆಡೆ ಪೋಸ್ಟರ್ಗಳನ್ನು ಹಾಕಲು ಕಾಂಗ್ರೆಸ್ ಶುರು ಮಾಡಿದೆ. ಫೋನ್ ಪೇ ಲೋಗೋ, ಕ್ಯೂಆರ್ ಕೋಡ್ ರೀತಿಯಲ್ಲೇ ಈ ಪೋಸ್ಟರ್ ಅನ್ನು ಚಿತ್ರಿಸಲಾಗಿದೆ. ಕ್ಯೂಆರ್ ಕೋಡ್ನಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರವನ್ನು ಹಾಕಲಾಗಿದೆ.
ಇನ್ನೊಂದೆಡೆ, ತನ್ನ ಹೆಸರು, ಲೋಗೊ ಮತ್ತು ಚಿತ್ರವನ್ನು ಬಳಸಿದಕ್ಕಾಗಿ ಫೋನ್ ಪೇ ಕಂಪನಿಯು ಕಾಂಗ್ರೆಸ್ಗೆ ಸ್ಟಷ್ಟನೆಯನ್ನು ಕೇಳಿದೆ.
ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ “40% ಸರ್ಕಾರ” ಮತ್ತು “ಪೇ ಸಿಎಂ” ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಳಸಿತ್ತು. ಇದೇ ವೇಳೆ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ರೂಪಿಸಿದ್ದ ಗ್ಯಾರೆಂಟಿ ಯೋಜನೆಗಳನ್ನೇ ಮಧ್ಯಪ್ರದೇಶದ ಚುನಾವಣೆಯಲ್ಲೂ ಪರಿಚಯಿಸಲು ಕಾಂಗ್ರೆಸ್ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS; ಮೋಹನ್ ಭಾಗವತ್ ಅವರಿಗೆ 5 ಪ್ರಶ್ನೆಗಳನ್ನು ಮುಂದಿಟ್ಟ ಕೇಜ್ರಿವಾಲ್!
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ
Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.