ಶಾಸನ ಸಭೆಗೆ ಉಡುಪಿ, ದ.ಕ.ದಿಂದ 6 ಹೊಸಮುಖ


Team Udayavani, May 15, 2023, 7:31 AM IST

vidhana soudha

ಉಡುಪಿ/ಮಂಗಳೂರು: ಜಿಲ್ಲೆಯಿಂದ ರಾಜ್ಯ ವಿಧಾನಸಭೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಆಯ್ಕೆಯಾಗಿರುವ 13 ಜನಪ್ರತಿನಿಧಿಗಳಲ್ಲಿ ಇಬ್ಬರು ಹೊಸಬರು ಎನ್ನುವುದು ಈ ಬಾರಿಯ ವಿಶೇಷ.

ಪ್ರತೀ ಚುನಾವಣೆಯಲ್ಲೂ ಕರಾವಳಿಯಿಂದ ಒಬ್ಬರು ಅಥವಾ ಇಬ್ಬರು ಹೊಸಬರು ವಿಧಾನಸಭೆ ಪ್ರವೇಶ ಮಾಡುತ್ತಾರೆ. ಒಂದೇ ಬಾರಿಗೆ ಆರು ಮಂದಿ ಹೊಸಬರು ಪ್ರವೇಶ ಮಾಡಿರುವುದು ಇತ್ತೀಚಿನ ಚುನಾವಣೆಗಳಲ್ಲಿ ಇದೇ ಮೊದಲು. ಅದರಲ್ಲೂ ಐವರು ಒಂದೇ ಪಕ್ಷಕ್ಕೆ ಸೇರಿದವರು.

ಉಡುಪಿ ಕ್ಷೇತ್ರದಿಂದ ಯಶ್‌ಪಾಲ್‌ ಎ. ಸುವರ್ಣ, ಕಾಪುವಿನಿಂದ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರಿನಿಂದ ಗುರುರಾಜ ಗಂಟಿಹೊಳೆ, ಕುಂದಾಪುರದಿಂದ ಕಿರಣ್‌ ಕೊಡ್ಗಿ, ಸುಳ್ಯದಿಂದ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರಿನಿಂದ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಶಾಸಕರಾಗಿ ವಿಧಾನಸೌಧ ಪ್ರವೇಶಿಸಲಿದ್ದಾರೆ. 2018ರಲ್ಲಿ ದ.ಕ.ದಲ್ಲೂ 8 ಕ್ಷೇತ್ರದಿಂದ 6 ಮಂದಿ ಹೊಸಬರು ಏಕಕಾಲಕ್ಕೆ ವಿಧಾನಸಭೆ ಪ್ರವೇಶ ಮಾಡಿದ್ದರು. ಆ ಆರು ಮಂದಿಯಲ್ಲಿ ಐವರು ಈ ಬಾರಿಯೂ ಪುನರ್‌ ಆಯ್ಕೆಯಾಗಿದ್ದಾರೆ. ಒಬ್ಬರು ಕಣದಲ್ಲಿರಲಿಲ್ಲ.

ಕಿರಣ್‌ ಕೊಡ್ಗಿಯವರ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಯಶ್‌ಪಾಲ್‌ ಸುವರ್ಣ ಅವರ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಕೆ.ರಘುಪತಿ ಭಟ್‌ ಹಾಗೂ ಗುರ್ಮೆ ಸುರೇಶ್‌ ಶೆಟ್ಟಿ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಲಾಲಾಜಿ ಮೆಂಡನ್‌ ಅವರ ಶ್ರಮವೂ ಇದೆ. ಆದರೆ, ಗುರುರಾಜ ಗಂಟಿಹೊಳೆಯವರಿಗೆ ನಿರ್ಗಮಿತ ಶಾಸಕರ ಬೆಂಬಲ ಸಿಗದೇ ಇದ್ದರೂ ಕಾರ್ಯಕರ್ತರು, ಪರಿವಾರ ಸಂಘಟನೆಗಳ ಪ್ರಮುಖರು ಕೈಬಿಡಲಿಲ್ಲ.

ಈ ನಾಲ್ವರು ಹೊಸ ಮುಖ ಜಿಲ್ಲೆಯ ಹಲವು ಸಮಸ್ಯೆಗಳನ್ನು ಶಾಸನ ಸಭೆಗಳಲ್ಲಿ ಯಾವ ರೀತಿಯಲ್ಲಿ ಪ್ರಸ್ತುತ ಪಡಿಸಿ, ಅದಕ್ಕೆ ಉತ್ತರ ಕಂಡುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಯಶ್‌ಪಾಲ್‌ ಸುವರ್ಣ ಉಡುಪಿಯಿಂದ ಆಯ್ಕೆಯಾಗಿರುವ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಅವರು ಈ ಹಿಂದೆ ಉಡುಪಿ ನಗರಸಭೆಯೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ ಉಳಿದ ಮೂವರು ಜನಪ್ರತಿನಿಧಿಗಳಾಗಿರಲಿಲ್ಲ, ಪಕ್ಷದಲ್ಲಿ ಸಕ್ರಿಯರಾಗಿದ್ದರು.

ಕಿರಣ್‌ ಕೊಡ್ಗಿ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾಗಿದ್ದ ಕಿರಣ್‌ ಕೊಡ್ಗಿಯವರ ತಂದೆ ಎ.ಜಿ. ಕೊಡ್ಗಿಯವರು ಶಾಸಕರಾಗಿದ್ದರು.

ಗುರುರಾಜ ಗಂಟಿಹೊಳೆ ಗುರುರಾಜ ಗಂಟಿಹೊಳೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣವಧಿ ಪ್ರಚಾರಕರಾಗಿ 10 ವರ್ಷ ಸೇವೆ ಸಲ್ಲಿಸಿ, ಅನಂತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸುರೇಶ್‌ ಶೆಟ್ಟಿ ಸಮಾಜ ಸೇವಕರಾಗಿರುವ ಗುರ್ಮೆ ಸುರೇಶ್‌ ಶೆಟ್ಟಿಯವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಭಾಗೀರಥಿ ಮುರುಳ್ಯ ಮೀಸಲು ಕ್ಷೇತ್ರ ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯಅವರು ಜಿ.ಪಂ. ಮಾಜಿ ಸದಸ್ಯೆ. ಪ್ರಥಮ ಬಾರಿಗೆ ಬಿಜೆಪಿಯಿಂದ ಸುಳ್ಯದಲ್ಲಿ ಮಹಿಳಾ ಅಭ್ಯರ್ಥಿಯಾಗಿ ಕಣಕ್ಕಿಳಿದವರು. ಪಿಯುಸಿ ವಿದ್ಯಾಭ್ಯಾಸ ಹೊಂದಿದ್ದು, ಹೈನುಗಾರಿಕೆ, ಟೈಲರಿಂಗ್‌ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ.

ಅಶೋಕ್‌ ಕುಮಾರ್‌ ರೈ ಪುತ್ತೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಅವರು ಪುತ್ತೂರು ರೈ ಎಸ್ಟೇಟ್ಸ್‌ ಎಜುಕೇಶನ್‌ ಹಾಗೂ ಚಾರಿಟೆಬಲ್‌ ಟ್ರಸ್ಟ್‌ ಮುಖ್ಯಸ್ಥರು. ಟ್ರಸ್ಟ್‌ ಮೂಲಕ ಹತ್ತಾರು ಜನಪರ ಕಾರ್ಯ ನಡೆಸುತ್ತಿದ್ದಾರೆ. ಹಿಂದೆ ಬಿಜೆಪಿಯಲ್ಲಿದ್ದು ಕೆಲವು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.