ಶಾಸನ ಸಭೆಗೆ ಉಡುಪಿ, ದ.ಕ.ದಿಂದ 6 ಹೊಸಮುಖ


Team Udayavani, May 15, 2023, 7:31 AM IST

vidhana soudha

ಉಡುಪಿ/ಮಂಗಳೂರು: ಜಿಲ್ಲೆಯಿಂದ ರಾಜ್ಯ ವಿಧಾನಸಭೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಆಯ್ಕೆಯಾಗಿರುವ 13 ಜನಪ್ರತಿನಿಧಿಗಳಲ್ಲಿ ಇಬ್ಬರು ಹೊಸಬರು ಎನ್ನುವುದು ಈ ಬಾರಿಯ ವಿಶೇಷ.

ಪ್ರತೀ ಚುನಾವಣೆಯಲ್ಲೂ ಕರಾವಳಿಯಿಂದ ಒಬ್ಬರು ಅಥವಾ ಇಬ್ಬರು ಹೊಸಬರು ವಿಧಾನಸಭೆ ಪ್ರವೇಶ ಮಾಡುತ್ತಾರೆ. ಒಂದೇ ಬಾರಿಗೆ ಆರು ಮಂದಿ ಹೊಸಬರು ಪ್ರವೇಶ ಮಾಡಿರುವುದು ಇತ್ತೀಚಿನ ಚುನಾವಣೆಗಳಲ್ಲಿ ಇದೇ ಮೊದಲು. ಅದರಲ್ಲೂ ಐವರು ಒಂದೇ ಪಕ್ಷಕ್ಕೆ ಸೇರಿದವರು.

ಉಡುಪಿ ಕ್ಷೇತ್ರದಿಂದ ಯಶ್‌ಪಾಲ್‌ ಎ. ಸುವರ್ಣ, ಕಾಪುವಿನಿಂದ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರಿನಿಂದ ಗುರುರಾಜ ಗಂಟಿಹೊಳೆ, ಕುಂದಾಪುರದಿಂದ ಕಿರಣ್‌ ಕೊಡ್ಗಿ, ಸುಳ್ಯದಿಂದ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರಿನಿಂದ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಶಾಸಕರಾಗಿ ವಿಧಾನಸೌಧ ಪ್ರವೇಶಿಸಲಿದ್ದಾರೆ. 2018ರಲ್ಲಿ ದ.ಕ.ದಲ್ಲೂ 8 ಕ್ಷೇತ್ರದಿಂದ 6 ಮಂದಿ ಹೊಸಬರು ಏಕಕಾಲಕ್ಕೆ ವಿಧಾನಸಭೆ ಪ್ರವೇಶ ಮಾಡಿದ್ದರು. ಆ ಆರು ಮಂದಿಯಲ್ಲಿ ಐವರು ಈ ಬಾರಿಯೂ ಪುನರ್‌ ಆಯ್ಕೆಯಾಗಿದ್ದಾರೆ. ಒಬ್ಬರು ಕಣದಲ್ಲಿರಲಿಲ್ಲ.

ಕಿರಣ್‌ ಕೊಡ್ಗಿಯವರ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಯಶ್‌ಪಾಲ್‌ ಸುವರ್ಣ ಅವರ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಕೆ.ರಘುಪತಿ ಭಟ್‌ ಹಾಗೂ ಗುರ್ಮೆ ಸುರೇಶ್‌ ಶೆಟ್ಟಿ ಆಯ್ಕೆಯಲ್ಲಿ ನಿರ್ಗಮಿತ ಶಾಸಕ ಲಾಲಾಜಿ ಮೆಂಡನ್‌ ಅವರ ಶ್ರಮವೂ ಇದೆ. ಆದರೆ, ಗುರುರಾಜ ಗಂಟಿಹೊಳೆಯವರಿಗೆ ನಿರ್ಗಮಿತ ಶಾಸಕರ ಬೆಂಬಲ ಸಿಗದೇ ಇದ್ದರೂ ಕಾರ್ಯಕರ್ತರು, ಪರಿವಾರ ಸಂಘಟನೆಗಳ ಪ್ರಮುಖರು ಕೈಬಿಡಲಿಲ್ಲ.

ಈ ನಾಲ್ವರು ಹೊಸ ಮುಖ ಜಿಲ್ಲೆಯ ಹಲವು ಸಮಸ್ಯೆಗಳನ್ನು ಶಾಸನ ಸಭೆಗಳಲ್ಲಿ ಯಾವ ರೀತಿಯಲ್ಲಿ ಪ್ರಸ್ತುತ ಪಡಿಸಿ, ಅದಕ್ಕೆ ಉತ್ತರ ಕಂಡುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಯಶ್‌ಪಾಲ್‌ ಸುವರ್ಣ ಉಡುಪಿಯಿಂದ ಆಯ್ಕೆಯಾಗಿರುವ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಅವರು ಈ ಹಿಂದೆ ಉಡುಪಿ ನಗರಸಭೆಯೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ ಉಳಿದ ಮೂವರು ಜನಪ್ರತಿನಿಧಿಗಳಾಗಿರಲಿಲ್ಲ, ಪಕ್ಷದಲ್ಲಿ ಸಕ್ರಿಯರಾಗಿದ್ದರು.

ಕಿರಣ್‌ ಕೊಡ್ಗಿ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾಗಿದ್ದ ಕಿರಣ್‌ ಕೊಡ್ಗಿಯವರ ತಂದೆ ಎ.ಜಿ. ಕೊಡ್ಗಿಯವರು ಶಾಸಕರಾಗಿದ್ದರು.

ಗುರುರಾಜ ಗಂಟಿಹೊಳೆ ಗುರುರಾಜ ಗಂಟಿಹೊಳೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣವಧಿ ಪ್ರಚಾರಕರಾಗಿ 10 ವರ್ಷ ಸೇವೆ ಸಲ್ಲಿಸಿ, ಅನಂತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸುರೇಶ್‌ ಶೆಟ್ಟಿ ಸಮಾಜ ಸೇವಕರಾಗಿರುವ ಗುರ್ಮೆ ಸುರೇಶ್‌ ಶೆಟ್ಟಿಯವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ, ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಭಾಗೀರಥಿ ಮುರುಳ್ಯ ಮೀಸಲು ಕ್ಷೇತ್ರ ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯಅವರು ಜಿ.ಪಂ. ಮಾಜಿ ಸದಸ್ಯೆ. ಪ್ರಥಮ ಬಾರಿಗೆ ಬಿಜೆಪಿಯಿಂದ ಸುಳ್ಯದಲ್ಲಿ ಮಹಿಳಾ ಅಭ್ಯರ್ಥಿಯಾಗಿ ಕಣಕ್ಕಿಳಿದವರು. ಪಿಯುಸಿ ವಿದ್ಯಾಭ್ಯಾಸ ಹೊಂದಿದ್ದು, ಹೈನುಗಾರಿಕೆ, ಟೈಲರಿಂಗ್‌ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ.

ಅಶೋಕ್‌ ಕುಮಾರ್‌ ರೈ ಪುತ್ತೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಅವರು ಪುತ್ತೂರು ರೈ ಎಸ್ಟೇಟ್ಸ್‌ ಎಜುಕೇಶನ್‌ ಹಾಗೂ ಚಾರಿಟೆಬಲ್‌ ಟ್ರಸ್ಟ್‌ ಮುಖ್ಯಸ್ಥರು. ಟ್ರಸ್ಟ್‌ ಮೂಲಕ ಹತ್ತಾರು ಜನಪರ ಕಾರ್ಯ ನಡೆಸುತ್ತಿದ್ದಾರೆ. ಹಿಂದೆ ಬಿಜೆಪಿಯಲ್ಲಿದ್ದು ಕೆಲವು ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.