ಜ. 15: ಸೇನಾ ಶಕ್ತಿ ಪ್ರದರ್ಶನ: ಉದ್ಯಾನನಗರಿಯಲ್ಲಿ ಮೊದಲ ಬಾರಿಗೆ ಸೇನಾ ದಿನ ಆಚರಣೆ


Team Udayavani, Jan 11, 2023, 6:20 AM IST

ಜ. 15: ಸೇನಾ ಶಕ್ತಿ ಪ್ರದರ್ಶನ: ಉದ್ಯಾನನಗರಿಯಲ್ಲಿ ಮೊದಲ ಬಾರಿಗೆ ಸೇನಾ ದಿನ ಆಚರಣೆ

ಬೆಂಗಳೂರು: ದಕ್ಷಿಣ ಭಾರತದಲ್ಲಿ ನಡೆಯಲಿರುವ ಮೊತ್ತಮೊದಲ ಭಾರತೀಯ ಸೇನಾ ದಿನಾಚರಣೆಗೆ ಉದ್ಯಾನ ನಗರಿ ಸಜ್ಜಾಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಹೊರಗಡೆ ಇದೇ ಪ್ರಥಮ ಬಾರಿಗೆ ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮಕ್ಕೆ ನಗರದ ಮದ್ರಾಸ್‌ ಎಂಜಿನಿಯರಿಂಗ್‌ ಗ್ರೂಪ್‌ ಆ್ಯಂಡ್‌ ಸೆಂಟರ್‌ (ಎಂಇಜಿ) ಮೈದಾನ ಸಾಕ್ಷಿಯಾಗಲಿದೆ.

ಇಲ್ಲಿನ ಗೋವಿಂದಸ್ವಾಮಿ ಪರೇಡ್‌ ಮೈದಾನದಲ್ಲಿ ಪೂರ್ವಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಸೇನಾ ದಿನದ ಅಂಗವಾಗಿ ಜ. 15ರಂದು ದೇಶದ ಪ್ರಮುಖ ಎಂಟು ರೆಜಿಮೆಂಟ್‌ಗಳ ಆಕರ್ಷಕ ಪಥಸಂಚಲನ, ದೇಶೀಯ ನಿರ್ಮಿತ ರಕ್ಷಣ ಉಪಕರಣಗಳ ಪ್ರದರ್ಶನ, ಸೇನಾ ಸಾಮರ್ಥ್ಯ ಪ್ರದರ್ಶನ ನಡೆಯಲಿದೆ. ಅಂದು ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಭೂಸೇನಾ ಮುಖ್ಯಸ್ಥ ಜ| ಮನೋಜ್‌ ಪಾಂಡೆ ಭಾಗವಹಿಸಲಿದ್ದಾರೆ ಎಂದು ಕೇರಳ ಆ್ಯಂಡ್‌ ಕರ್ನಾಟಕ ಸಬ್‌ ಏರಿಯಾದ ಜನರಲ್‌ ಆಫೀಸರ್‌ ಕಮಾಂಡಿಂಗ್‌ ಜ| ರವಿ ಮುರುಗನ್‌ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ವೈಮಾನಿಕ ಕಸರತ್ತು
ಪ್ರಮುಖ ಆಕರ್ಷಣೆ
ಧ್ರುವ ಮತ್ತು ರುದ್ರ ಹೆಲಿಕಾಪ್ಟರ್‌ಗಳಿಂದ ವೈಮಾನಿಕ ಕಸರತ್ತು ಪ್ರದರ್ಶನ, ಬಹುಹಂತದ ರಾಕೆಟ್‌ ಉಡ್ಡಯನ ವ್ಯವಸ್ಥೆ “ಪಿನಾಕಾ’, ಸ್ವಯಂಚಾಲಿತ ಕೆ-9 ವಜ್ರ ಗನ್‌, ಟಿ-90 ಟ್ಯಾಂಕ್‌ಗಳು, ಸ್ವಾತಿ ರೇಡಾರ್‌, 155 ಎಂಎಂ ಗನ್‌ಗಳು, ಬಿಎಂಪಿ- 2, ಭೀಷ್ಮ ಟ್ಯಾಂಕರ್‌, ತುಂಗುಸ್ಕಾ ವೈಮಾನಿಕ ರಕ್ಷಣ ವ್ಯವಸ್ಥೆ, ಸೇತುವೆ ನಿರ್ಮಾಣಕ್ಕೆ ಬಳಸುವ ಟ್ಯಾಂಕ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ರಕ್ಷಣ ಸಚಿವರು ಭಾಗಿ
ಜ. 15ರಂದು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಆರ್ಮಿ ಸರ್ವಿಸ್‌ ಸೆಂಟರ್‌ (ಎಸ್‌ಸಿ)ನಲ್ಲಿ ನಡೆಯಲಿರುವ ಮಿಲಿಟರಿ ಟ್ಯಾಟೂನಲ್ಲಿ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದಾರೆ. ಅಲ್ಲಿ ವಿನೂತನ ಕಾರ್ಯಕ್ರಮಗಳು ಜರಗಲಿವೆ.

11 ಸಾವಿರ ಜನ ವೀಕ್ಷಣೆ
3 4ದಿನಗಳಿಂದ ಎಂಇಜಿ ಮೈದಾನದಲ್ಲಿ ಸೇನಾ ದಿನಾಚರಣೆಯ ಪೂರ್ವಪ್ರದರ್ಶನ ನಿರಂತರವಾಗಿ ನಡೆಯುತ್ತಿದ್ದು, ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಇದುವರೆಗೆ 11 ಸಾವಿರ ಜನ ಪ್ರದರ್ಶನ ವೀಕ್ಷಿಸಿದ್ದು, ಇದರಲ್ಲಿ ಮಕ್ಕಳೇ ಹೆಚ್ಚು ಎಂದು ಜ| ರವಿ ಮುರುಗನ್‌ ತಿಳಿಸಿದರು. ಬುಧವಾರದಿಂದ ಪಾಸ್‌ ಹೊಂದಿದವರಿಗೆ ಮಾತ್ರ ಅವಕಾಶ ಇರಲಿದೆ.

ಸಾಮಾನ್ಯವಾಗಿ ದಿಲ್ಲಿಯಲ್ಲಿ ಭಾಗವಹಿಸುತ್ತಿದ್ದೆವು. ಈಗ ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲೇ ನಮ್ಮವರೆದುರು ಪ್ರದರ್ಶನ ನೀಡಲಿರುವುದು ಸಹಜವಾಗಿ ಹೆಮ್ಮೆ ಮತ್ತು ಖುಷಿ ಕೊಡುತ್ತಿದೆ. ಹತ್ತು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ.
– ಶಿವನಗೌಡ ಕೆಂಚನಗೌಡರ,
ಎಂಇಜಿ ಆ್ಯಂಡ್‌ ಸೆಂಟರ್‌ ಯೋಧ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.