ಒಂದು ಠೇವಣಿ; ಪ್ರತಿ ತಿಂಗಳು ನಿಗದಿತ ಡ್ರಾ : ಏನಿದು ಯೋಜನೆ? ಏನಿದರ ಲಾಭ?


Team Udayavani, Feb 21, 2021, 6:30 AM IST

ಒಂದು ಠೇವಣಿ; ಪ್ರತಿ ತಿಂಗಳು ನಿಗದಿತ ಡ್ರಾ : ಏನಿದು ಯೋಜನೆ? ಏನಿದರ ಲಾಭ?

ಭಾರತದ ಅತೀ ದೊಡ್ಡ ಸಾರ್ವ ಜನಿಕ ವಲಯದ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (ಎಸ್‌ಬಿಐ) ತನ್ನ ವರ್ಷಾಶನ(ಆ್ಯನ್ವಿಟಿ) ಠೇವಣಿ ಯೋಜನೆಯ ನ್ನು ಪರಿಚಯಿಸಿದೆ. ಬ್ಯಾಂಕಿನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ವಿವರಗಳ ಪ್ರಕಾರ, ಇದರಲ್ಲಿ ಠೇವಣಿ ದಾರರು ಒಂದು ಬಾರಿ ಒಟ್ಟು ಮೊತ್ತವನ್ನು ಠೇವಣಿ ಮಾಡ ಬೇಕು. ಹೀಗೆ ಠೇವಣಿ ಮಾಡಿದ ಮೊತ್ತವನ್ನು ಮಾಸಿಕ ಮೊತ್ತದ ರೂಪದಲ್ಲಿ ಬಡ್ಡಿ ಸಹಿತ ಪಡೆಯಬಹುದಾಗಿದೆ.

ಯಾರು ಅರ್ಹರು?
ಅಪ್ರಾಪ್ತ ವಯಸ್ಕರು ಸಹಿತ ಯಾವು ದೇ ವ್ಯಕ್ತಿ ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯನ್ನು ತೆರೆಯಬ ಹುದು. ಆದರೆ ಎನ್‌ಆರ್‌ಐ ಅಥವಾ ಎನ್‌ಜಿಒ ವಿಭಾಗಗಳಲ್ಲಿ ಖಾತೆ ಹೊಂದಿದ ಯಾವುದೇ ಗ್ರಾಹಕರು ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಗೆ ಅನರ್ಹರಾಗಿರುತ್ತಾರೆ.

ಅವಧಿ ಎಷ್ಟು?
ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯ ಹೂಡಿಕೆದಾರರು 36 ತಿಂಗಳು (3 ವರ್ಷ), 60 ತಿಂಗಳು (5 ವರ್ಷ), 84 ತಿಂಗಳು (7 ವರ್ಷ), ಅಥವಾ 120 ತಿಂಗಳು (10 ವರ್ಷ) ಗಳಿಂದ ಠೇವಣಿ ಅವಧಿಯನ್ನು ಆರಿಸಬೇಕಾಗುತ್ತದೆ. ಹೂಡಿಕೆಯ ಮೇಲಿನ ಬಡ್ಡಿದರವು ಎಫ್ಡಿ ದರದಂತೆ ಅನ್ವಯಿಸುತ್ತದೆ. ಉದಾಹರಣೆಗೆ ನೀವು 5 ವರ್ಷಗಳ ವರೆಗೆ ಠೇವಣಿ ಮಾಡಿದರೆ, 5 ವರ್ಷಗಳ ಸ್ಥಿರ ಠೇವಣಿ(ಎಫ್ಡಿ)ಗೆ ಅನ್ವಯವಾಗುವ ಬಡ್ಡಿದರಕ್ಕೆ ಅನುಗುಣವಾಗಿ ನೀವು ಬಡ್ಡಿಯನ್ನು ಪಡೆಯುತ್ತೀರಿ. ಇದರಲ್ಲಿ ಸಿಂಗಲ್‌ ಅಥವಾ ಜಾಯಿಂಟ್‌ ಖಾತೆಯನ್ನು ಹೊಂದಬಹುದಾಗಿದೆ.

ಬಡ್ಡಿ ದರ ಎಷ್ಟು?
ಎಸ್‌ಬಿಐ ವರ್ಷಾಶನ ಯೋಜನೆಗೆ ಅನ್ವಯವಾಗುವ ಬಡ್ಡಿದರ ಎಸ್‌ಬಿಐ ಸ್ಥಿರ ಠೇವಣಿ (ಎಫ್ಡಿ)ಯಂತೆಯೇ ಇರುತ್ತದೆ. ನೀವು 5 ವರ್ಷಗಳ ಕಾಲ ಹಣವನ್ನು ಠೇವಣಿ ಮಾಡಿದ್ದರೆ, ಅನಂತರ 5 ವರ್ಷಗಳ ಸ್ಥಿರ ಠೇವಣಿಗೆ ಅನ್ವಯವಾಗುವ ಬಡ್ಡಿದರಕ್ಕೆ ಅನುಗುಣವಾಗಿ ಬಡ್ಡಿಯನ್ನು ಮಾತ್ರ ಪಡೆಯುತ್ತೀರಿ. ಪ್ರಸ್ತುತ ಎಸ್‌ಬಿಐ 5 ರಿಂದ 10 ವರ್ಷಗಳ ಅವಧಿಯ ಠೇವಣಿಗಳ ಮೇಲೆ ಶೇ. 5.40ರಷ್ಟು ಬಡ್ಡಿ ದರವನ್ನು ನೀಡುತ್ತದೆ. 3ರಿಂದ 5 ವರ್ಷದೊಳಗಿನ ಅವಧಿಯ ಎಫ್ಡಿಗಳಿಗೆ ಎಸ್‌ಬಿಐ ಶೇ. 5.30ರಷ್ಟು ಬಡ್ಡಿದರವನ್ನು ನೀಡುತ್ತದೆ.

ಇವರಿಗೆ ಬಡ್ಡಿ ದರ ಹೆಚ್ಚು
ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯಲ್ಲಿ 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ನಿಗದಿತ ಬಡ್ಡಿದರಕ್ಕಿಂತ ಶೇ. 0.50ರಷ್ಟು ಹೆಚ್ಚು ಪಡೆಯಲಿದ್ದಾರೆ. ಆದರೆ ಎಸ್‌ಬಿಐ ಸಿಬಂದಿ ಮತ್ತು ಎಸ್‌ಬಿಐ ಪಿಂಚಣಿದಾರರಿಗೆ ಬಡ್ಡಿದರವು ಶೇ. 1ರಷ್ಟು ಹೆಚ್ಚಿರಲಿದೆ.

ಪಾವತಿ ಸಮಯ
ವರ್ಷಾಶನ ಪಾವತಿ ಠೇವಣಿ ತಿಂಗಳ ಕಡೆಯ ದಿನದಂದು ಪಾವತಿ ಮಾಡಲಾಗುತ್ತದೆ. ಒಂದು ವೇಳೆ ತಿಂಗಳಿನ 29, 30 ಮತ್ತು 31ನೇ ತಾರೀಕಿನಂದು ಆಗದೇ ಇದ್ದರೆ ಮುಂದಿನ ತಿಂಗಳ 1ರಂದು ಪಾವತಿಸಲಾಗುತ್ತದೆ. ಬಡ್ಡಿ ಮೊತ್ತದ ಮೇಲೆ ವರ್ಷಾಶನ ಪಾವತಿಗಳು ಟಿಡಿಎಸ್‌ಗೆ ಒಳಪಟ್ಟಿರುತ್ತವೆ ಎಂಬುದನ್ನು ಹೂಡಿಕೆದಾರರು ಗಮನಿಸಬೇಕು. ಇದನ್ನು ಲಿಂಕ್ಡ್ ಸೇವಿಂಗ್ಸ್‌ ಬ್ಯಾಂಕ್‌ (ಎಸ್‌ಬಿ) ಅಥವಾ ಕರೆಂಟ್‌ ಅಕೌಂಟ್‌ (ಸಿಎ) ಖಾತೆಗೆ ಜಮೆ ಮಾಡಲಾಗುತ್ತದೆ.

ಇತರ ಸೌಲಭ್ಯಗಳು
ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯೊಂದಿಗೆ ನಾಮನಿ ರ್ದೇಶನ ಸೌಲಭ್ಯವನ್ನು ನೀಡುತ್ತದೆ. ಇದಲ್ಲದೆ ವಿಶೇಷ ಪ್ರಕರಣಗಳಲ್ಲಿ ವರ್ಷಾಶನದ ಬಾಕಿ ಮೊತ್ತದ ಶೇ. 75 ರಷ್ಟು ಓವರ್‌ಡ್ರಾಫ್ಟ್ ಅಥವಾ ಸಾಲವನ್ನು ನೀಡಬಹುದು. ಈ ಯೋಜನೆಯ ಅವಧಿ, ಮೊತ್ತ ಹಾಗೂ ಬಡ್ಡಿ ದರಗಳ ಕುರಿತ ಪೂರ್ಣ ಮಾಹಿತಿಗೆ ನಿಮ್ಮ ಸಮೀಪದ ಎಸ್‌ಬಿಐ ಬ್ರ್ಯಾಂಚ್‌ ಅನ್ನು ಸಂಪರ್ಕಿಸಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.