ಒಂದು ಠೇವಣಿ; ಪ್ರತಿ ತಿಂಗಳು ನಿಗದಿತ ಡ್ರಾ : ಏನಿದು ಯೋಜನೆ? ಏನಿದರ ಲಾಭ?


Team Udayavani, Feb 21, 2021, 6:30 AM IST

ಒಂದು ಠೇವಣಿ; ಪ್ರತಿ ತಿಂಗಳು ನಿಗದಿತ ಡ್ರಾ : ಏನಿದು ಯೋಜನೆ? ಏನಿದರ ಲಾಭ?

ಭಾರತದ ಅತೀ ದೊಡ್ಡ ಸಾರ್ವ ಜನಿಕ ವಲಯದ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (ಎಸ್‌ಬಿಐ) ತನ್ನ ವರ್ಷಾಶನ(ಆ್ಯನ್ವಿಟಿ) ಠೇವಣಿ ಯೋಜನೆಯ ನ್ನು ಪರಿಚಯಿಸಿದೆ. ಬ್ಯಾಂಕಿನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ವಿವರಗಳ ಪ್ರಕಾರ, ಇದರಲ್ಲಿ ಠೇವಣಿ ದಾರರು ಒಂದು ಬಾರಿ ಒಟ್ಟು ಮೊತ್ತವನ್ನು ಠೇವಣಿ ಮಾಡ ಬೇಕು. ಹೀಗೆ ಠೇವಣಿ ಮಾಡಿದ ಮೊತ್ತವನ್ನು ಮಾಸಿಕ ಮೊತ್ತದ ರೂಪದಲ್ಲಿ ಬಡ್ಡಿ ಸಹಿತ ಪಡೆಯಬಹುದಾಗಿದೆ.

ಯಾರು ಅರ್ಹರು?
ಅಪ್ರಾಪ್ತ ವಯಸ್ಕರು ಸಹಿತ ಯಾವು ದೇ ವ್ಯಕ್ತಿ ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯನ್ನು ತೆರೆಯಬ ಹುದು. ಆದರೆ ಎನ್‌ಆರ್‌ಐ ಅಥವಾ ಎನ್‌ಜಿಒ ವಿಭಾಗಗಳಲ್ಲಿ ಖಾತೆ ಹೊಂದಿದ ಯಾವುದೇ ಗ್ರಾಹಕರು ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಗೆ ಅನರ್ಹರಾಗಿರುತ್ತಾರೆ.

ಅವಧಿ ಎಷ್ಟು?
ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯ ಹೂಡಿಕೆದಾರರು 36 ತಿಂಗಳು (3 ವರ್ಷ), 60 ತಿಂಗಳು (5 ವರ್ಷ), 84 ತಿಂಗಳು (7 ವರ್ಷ), ಅಥವಾ 120 ತಿಂಗಳು (10 ವರ್ಷ) ಗಳಿಂದ ಠೇವಣಿ ಅವಧಿಯನ್ನು ಆರಿಸಬೇಕಾಗುತ್ತದೆ. ಹೂಡಿಕೆಯ ಮೇಲಿನ ಬಡ್ಡಿದರವು ಎಫ್ಡಿ ದರದಂತೆ ಅನ್ವಯಿಸುತ್ತದೆ. ಉದಾಹರಣೆಗೆ ನೀವು 5 ವರ್ಷಗಳ ವರೆಗೆ ಠೇವಣಿ ಮಾಡಿದರೆ, 5 ವರ್ಷಗಳ ಸ್ಥಿರ ಠೇವಣಿ(ಎಫ್ಡಿ)ಗೆ ಅನ್ವಯವಾಗುವ ಬಡ್ಡಿದರಕ್ಕೆ ಅನುಗುಣವಾಗಿ ನೀವು ಬಡ್ಡಿಯನ್ನು ಪಡೆಯುತ್ತೀರಿ. ಇದರಲ್ಲಿ ಸಿಂಗಲ್‌ ಅಥವಾ ಜಾಯಿಂಟ್‌ ಖಾತೆಯನ್ನು ಹೊಂದಬಹುದಾಗಿದೆ.

ಬಡ್ಡಿ ದರ ಎಷ್ಟು?
ಎಸ್‌ಬಿಐ ವರ್ಷಾಶನ ಯೋಜನೆಗೆ ಅನ್ವಯವಾಗುವ ಬಡ್ಡಿದರ ಎಸ್‌ಬಿಐ ಸ್ಥಿರ ಠೇವಣಿ (ಎಫ್ಡಿ)ಯಂತೆಯೇ ಇರುತ್ತದೆ. ನೀವು 5 ವರ್ಷಗಳ ಕಾಲ ಹಣವನ್ನು ಠೇವಣಿ ಮಾಡಿದ್ದರೆ, ಅನಂತರ 5 ವರ್ಷಗಳ ಸ್ಥಿರ ಠೇವಣಿಗೆ ಅನ್ವಯವಾಗುವ ಬಡ್ಡಿದರಕ್ಕೆ ಅನುಗುಣವಾಗಿ ಬಡ್ಡಿಯನ್ನು ಮಾತ್ರ ಪಡೆಯುತ್ತೀರಿ. ಪ್ರಸ್ತುತ ಎಸ್‌ಬಿಐ 5 ರಿಂದ 10 ವರ್ಷಗಳ ಅವಧಿಯ ಠೇವಣಿಗಳ ಮೇಲೆ ಶೇ. 5.40ರಷ್ಟು ಬಡ್ಡಿ ದರವನ್ನು ನೀಡುತ್ತದೆ. 3ರಿಂದ 5 ವರ್ಷದೊಳಗಿನ ಅವಧಿಯ ಎಫ್ಡಿಗಳಿಗೆ ಎಸ್‌ಬಿಐ ಶೇ. 5.30ರಷ್ಟು ಬಡ್ಡಿದರವನ್ನು ನೀಡುತ್ತದೆ.

ಇವರಿಗೆ ಬಡ್ಡಿ ದರ ಹೆಚ್ಚು
ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯಲ್ಲಿ 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ನಿಗದಿತ ಬಡ್ಡಿದರಕ್ಕಿಂತ ಶೇ. 0.50ರಷ್ಟು ಹೆಚ್ಚು ಪಡೆಯಲಿದ್ದಾರೆ. ಆದರೆ ಎಸ್‌ಬಿಐ ಸಿಬಂದಿ ಮತ್ತು ಎಸ್‌ಬಿಐ ಪಿಂಚಣಿದಾರರಿಗೆ ಬಡ್ಡಿದರವು ಶೇ. 1ರಷ್ಟು ಹೆಚ್ಚಿರಲಿದೆ.

ಪಾವತಿ ಸಮಯ
ವರ್ಷಾಶನ ಪಾವತಿ ಠೇವಣಿ ತಿಂಗಳ ಕಡೆಯ ದಿನದಂದು ಪಾವತಿ ಮಾಡಲಾಗುತ್ತದೆ. ಒಂದು ವೇಳೆ ತಿಂಗಳಿನ 29, 30 ಮತ್ತು 31ನೇ ತಾರೀಕಿನಂದು ಆಗದೇ ಇದ್ದರೆ ಮುಂದಿನ ತಿಂಗಳ 1ರಂದು ಪಾವತಿಸಲಾಗುತ್ತದೆ. ಬಡ್ಡಿ ಮೊತ್ತದ ಮೇಲೆ ವರ್ಷಾಶನ ಪಾವತಿಗಳು ಟಿಡಿಎಸ್‌ಗೆ ಒಳಪಟ್ಟಿರುತ್ತವೆ ಎಂಬುದನ್ನು ಹೂಡಿಕೆದಾರರು ಗಮನಿಸಬೇಕು. ಇದನ್ನು ಲಿಂಕ್ಡ್ ಸೇವಿಂಗ್ಸ್‌ ಬ್ಯಾಂಕ್‌ (ಎಸ್‌ಬಿ) ಅಥವಾ ಕರೆಂಟ್‌ ಅಕೌಂಟ್‌ (ಸಿಎ) ಖಾತೆಗೆ ಜಮೆ ಮಾಡಲಾಗುತ್ತದೆ.

ಇತರ ಸೌಲಭ್ಯಗಳು
ಎಸ್‌ಬಿಐ ವರ್ಷಾಶನ ಠೇವಣಿ ಯೋಜನೆಯೊಂದಿಗೆ ನಾಮನಿ ರ್ದೇಶನ ಸೌಲಭ್ಯವನ್ನು ನೀಡುತ್ತದೆ. ಇದಲ್ಲದೆ ವಿಶೇಷ ಪ್ರಕರಣಗಳಲ್ಲಿ ವರ್ಷಾಶನದ ಬಾಕಿ ಮೊತ್ತದ ಶೇ. 75 ರಷ್ಟು ಓವರ್‌ಡ್ರಾಫ್ಟ್ ಅಥವಾ ಸಾಲವನ್ನು ನೀಡಬಹುದು. ಈ ಯೋಜನೆಯ ಅವಧಿ, ಮೊತ್ತ ಹಾಗೂ ಬಡ್ಡಿ ದರಗಳ ಕುರಿತ ಪೂರ್ಣ ಮಾಹಿತಿಗೆ ನಿಮ್ಮ ಸಮೀಪದ ಎಸ್‌ಬಿಐ ಬ್ರ್ಯಾಂಚ್‌ ಅನ್ನು ಸಂಪರ್ಕಿಸಿ.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

1-kittut

23 October 1824; ಕಿತ್ತೂರಿನ ಮೊದಲ ವಿಜಯೋತ್ಸವಕ್ಕೆ 200 ವರ್ಷ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Threats: ವಿಮಾನಗಳಿಗೆ ಹುಸಿ ಬಾಂ*ಬ್‌ ಬೆದರಿಕೆ; ಆರ್ಥಿಕ ಭಯೋತ್ಪಾದನೆ!?

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

Indian Railways: ಈ ವರ್ಷಾಂತ್ಯಕ್ಕೆ ಬರಲಿದೆ…ಹೈಡ್ರೋಜನ್‌ ರೈಲು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.