Today ಸಚಿವ ಸೋಮಣ್ಣ ಸಭೆ: ಕರಾವಳಿ ಭಾಗದ ರೈಲ್ವೇ ಕುರಿತ ಸುದೀರ್ಘ‌ ಬೇಡಿಕೆಗಳ ಪಟ್ಟಿ


Team Udayavani, Jul 17, 2024, 6:42 AM IST

ಕರಾವಳಿ ಭಾಗದ ರೈಲ್ವೇ ಕುರಿತ ಸುದೀರ್ಘ‌ ಬೇಡಿಕೆಗಳ ಪಟ್ಟಿ

ಮಂಗಳೂರು : ಮಂಗಳೂರು ರೈಲ್ವೇ ಪ್ರತ್ಯೇಕ ವಿಭಾಗ, ಕೊಂಕಣ ರೈಲ್ವೇಯನ್ನು ರೈಲ್ವೇ ಇಲಾಖೆಯೊಂದಿಗೆ ಸೇರ್ಪಡೆ, ಹಲವು ಹೊಸ ರೈಲು, ಹಲವು ರೈಲುಗಳ ವಿಸ್ತರಣೆ, ಸೇವೆಯಲ್ಲಿನ ಬದಲಾವಣೆ ಸೇರಿದಂತೆ ವಿವಿಧ ಬೇಡಿಕೆಗಳ ಪಟ್ಟಿಯನ್ನು ಬುಧವಾರ (ಜು.17) ದಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಮುಂದಿಡಲು ವಿವಿಧ ರೈಲ್ವೇ ಯಾತ್ರಿ ಸಂಘದವರು ಸಿದ್ಧರಾಗಿದ್ದಾರೆ.

ಈಗಾಗಲೇ ಕೆಲವು ಮನವಿಗಳನ್ನು ಸಂಸದರಾದ ಕ್ಯಾ|ಬ್ರಿಜೇಶ್‌ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರು ಸಚಿವರ ಗಮನಕ್ಕೆ ತಂದಿದ್ದಾರೆ. ಹಲವು ವಿಷಯಗಳ ಕುರಿತು ತಾವೇ ಬಂದು ಚರ್ಚಿಸುವುದಾಗಿ ಹೇಳಿದಂತೆ ವಿ. ಸೋಮಣ್ಣನವರು ಜು.17ರಂದು ಬೆಳಗ್ಗೆ 10.45ಕ್ಕೆ ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಭೆಯಲ್ಲಿ ಶಾಸಕರು, ವಿಧಾನ ಪರಿಷತ್‌ ಸದಸ್ಯರೂ ಅಲ್ಲದೆ ದಕ್ಷಿಣ ರೈಲ್ವೇ, ನೈರುತ್ಯ ರೈಲ್ವೇ ಹಿರಿಯ ಅಧಿಕಾರಿಗಳು ಭಾಗವಹಿಸುವರು.

ಪ್ರಮುಖ ಬೇಡಿಕೆಗಳು
– ಸಕಲೇಶಪುರ-ಸುಬ್ರಹ್ಮಣ್ಯ ಭಾಗದ ರೈಲ್ವೇ ಹಳಿಯನ್ನು ಮೇಲ್ದರ್ಜೆಗೇರಿಸಬೇಕು, ಆ ಮೂಲಕ ಘಾಟ್‌ ಸೆಕ್ಷನ್‌ನ ಎಲ್ಲಾ ಸ್ಟೇಷನ್‌ಗಳಲ್ಲೂ ಕ್ರಾಸಿಂಗ್‌ಗೆ ಅವಕಾಶ ಕೊಡಬೇಕು ಹಾಗೂ ಸರಾಸರಿ ವೇಗವನ್ನು ಗಂಟೆಗೆ 30ರಿಂದ 35 ಕಿ.ಮೀಗೆ ಏರಿಸಬೇಕು. ಕಡಗರವಳ್ಳಿ ಹಾಗೂ ಯಡಕುಮರಿಯಲ್ಲಿ ಕ್ಯಾಚ್‌ ಸ್ಲೆಡಿಂಗ್‌ ನಿರ್ಮಿಸಬೇಕು.
ಬೆಳಗ್ಗೆ ಹಾಗೂ ಸಂಜೆಯ ಮಂಗಳೂರು-ಕಬಕ ಪುತ್ತೂರು ರೈಲು ಸುಬ್ರಹ್ಮಣ್ಯ ರೋಡ್‌ ವರೆಗೆ ವಿಸ್ತರಿಸಬೇಕು. ಬೆಂಗಳೂರು-ಮಂಗಳೂರು-ಕಣ್ಣೂರುನಂ 16511/12 ರೈಲಿನ ಈಗಿನ ವೇಳೆಯನ್ನು ಬದಲಾಯಿಸಬಾರದು.
– ಬೆಂಗಳೂರು-ಮುರುಡೇಶ್ವರ ಎಕ್ಸ್‌ ಪ್ರಸ್‌ ರೈಲು ಮಂಗಳೂರು ಸೆಂಟ್ರಲ್‌ ಮೂಲಕ ಹೋಗುತ್ತಿದ್ದು ಈ ಮಾರ್ಗ ಬದಲಾಯಿಸಬಾರದು. ಬೆಂಗಳೂರು ಕಣ್ಣೂರು ಎಕ್ಸ್‌ಪ್ರೆಸ್‌ ರೈಲಿಗೆ ಸುಧಾರಿತ ಎಲ್‌ಎಚ್‌ಬಿ ಕೋಚ್‌ ಒದಗಿಸಬೇಕು.
ಮಂಗಳೂರು ಜಂಕ್ಷನ್‌-ಮಂಗಳೂರು ಸೆಂಟ್ರಲ್‌ ಮಧ್ಯೆ ಇರುವ 3 ಕಿ.ಮೀ ದೂರದಲ್ಲಿ ಹಳಿ ದ್ವಿಗುಣ ಮಾಡಬೇಕು, ಮಂಗಳೂರು ಸೆಂಟ್ರಲ್‌ ಅನ್ನು ವಿಶ್ವದರ್ಜೆ ನಿಲ್ದಾಣವಾಗಿಸಬೇಕು.
– ಬಂದರು ಗೂಡ್ಸ್‌ಶೆಡ್‌ ಅನ್ನು ಟ್ರೈನ್‌ ಪಾರ್ಕಿಂಗ್‌, ನಿರ್ವಹಣ ಯಾರ್ಡ್‌ ಮಾಡುವ ಜತೆ ಸೂಕ್ತವಾದ ರಸ್ತೆ ಮೇಲ್ಸೇತುವೆಯನ್ನು ಪಾಂಡೇಶ್ವರದಲ್ಲಿ ನಿರ್ಮಿಸಬೇಕು.
– ಹಿಂದೆ ಸಂಚರಿಸುತ್ತಿದ್ದ ಮಂಗಳೂರು-ಮಾತಾ ವೈಷ್ಣೋದೇವಿ ಕಾಟ್ರ ನವಯುಗ ಎಕ್ಸ್‌ಪ್ರೆಸ್‌ ಅನ್ನು ಸುಬ್ರಹ್ಮಣ್ಯ ರಸ್ತೆ ಅರಸೀಕೆರೆ ಪುಣೆ ಹೊಸದಿಲ್ಲಿ ಮಾರ್ಗವಾಗಿ ಮರು ಪರಿಚಯಿಸಬೇಕು.
– 12133/34 ಸಿಎಸ್‌ಟಿಎಂ ಮುಂಬಯಿ ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಿಸಬೇಕು ಹಾಗೂ 12134 ರೈಲು ಮಂಗಳೂರಿನಿಂದ ಸಂಜೆ 4 ಕ್ಕೆ ಬಿಡುವಂತಾಗಬೇಕು.
– ಗುಜರಾತ್‌ ಸಂಪರ್ಕಿಸುವ ಮಂಗಳೂರು- ಭಾವನಗರ ರೈಲಿಗೆ ಸಾಕಷ್ಟು ಬೇಡಿಕೆ ಇರುವ ಕಾರಣ ಅದನ್ನು ಪರಿಚಯಿಸಲು ಕ್ರಮ ಕೈಗೊಳ್ಳುವುದು.
-ಬೆಂಗಳೂರು-ಮಂಗಳೂರು-ಕಣ್ಣೂರುನಂ.16511/12 ರೈಲನ್ನು ಕೋಝಿಕೋಡ್‌ಗೆ ವಿಸ್ತರಿಸುವ ಆಲೋಚನೆಯನ್ನು ಕೈ ಬಿಡಬೇಕು.
-ಮಂಗಳೂರು-ವಿಜಯಪುರ ಮಧ್ಯೆ ಸಂಚರಿಸುವ 07377/78 ರೈಲುಗಳು ಈಗಲೂ ವಿಶೇಷ ರೈಲುಗಳಾಗಿಯೇ ಓಡುತ್ತಿರುವುದು ಪ್ರಯಾಣಿಕರಿಗೆ ದುಬಾರಿಯಾಗುತ್ತಿದೆ, ಹಾಗಾಗಿ ಅವುಗಳನ್ನು ಸಾಮಾನ್ಯ ರೈಲುಗಳಾಗಿ ಪರಿವರ್ತಿಸಬೇಕು.
– 16575/76 ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೂ ವಿಸ್ತರಿಸಬೇಕು ಎನ್ನುವುದಕ್ಕೆ ದಕ್ಷಿಣ ರೈಲ್ವೇಯವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು ಮಂಡಳಿ ಅನುಮೋದನೆ ದೊರಕುವಂತೆ ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

Alanda

Alanda: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನಿಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು!

1-kejri

Anti-national ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ:ಜೈಲಿನಿಂದ ಹೊರಬಂದ ಕೇಜ್ರಿವಾಲ್

drowned

Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Bantwal: ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ನಗ-ನಗದು ಕಳವು

Mangaluru: ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕದಲ್ಲಿ ರಾಹುಲ್ ಹೇಳಿಕೆಗೆ ಬಿಜೆಪಿ ಖಂಡನೆ

Mangaluru: ಮೀಸಲಾತಿ ವ್ಯವಸ್ಥೆ ಕುರಿತು ಅಮೆರಿಕದಲ್ಲಿ ರಾಹುಲ್ ಹೇಳಿಕೆಗೆ ಬಿಜೆಪಿ ಖಂಡನೆ

Mangaluru: ವಿಷರಹಿತ ಹಾವೆಂದು ಹಿಡಿಯಲು ಹೋಗಿ ಕೈಗೆ ಕಚ್ಚಿದ ಕನ್ನಡ ಹಾವು.. ವ್ಯಕ್ತಿ ಮೃತ್ಯು

Mangaluru: ವಿಷರಹಿತ ಹಾವೆಂದು ಹಿಡಿಯಲು ಹೋಗಿ ಕೈಗೆ ಕಚ್ಚಿದ ಕನ್ನಡಿ ಹಾವು, ವ್ಯಕ್ತಿ ಮೃತ್ಯು

Mangaluru:ಕರಾವಳಿ ಉತ್ಸವದಲ್ಲಿ ಮಾರ್ಪಾಡು ನಿರೀಕ್ಷೆ;ನಗರ ಮಧ್ಯದಿಂದ ಪಿಲಿಕುಳಕ್ಕೆ ಸ್ಥಳಾಂತರ

Mangaluru:ಕರಾವಳಿ ಉತ್ಸವದಲ್ಲಿ ಮಾರ್ಪಾಡು ನಿರೀಕ್ಷೆ;ನಗರ ಮಧ್ಯದಿಂದ ಪಿಲಿಕುಳಕ್ಕೆ ಸ್ಥಳಾಂತರ

Baikampady ಜಂಕ್ಷನ್‌ ರಸ್ತೆಗೆ ಗುಣವಾಗದ ಕಾಯಿಲೆ!

Baikampady ಜಂಕ್ಷನ್‌ ರಸ್ತೆಗೆ ಗುಣವಾಗದ ಕಾಯಿಲೆ!

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

indian-flag

South Asia ಆ್ಯತ್ಲೆಟಿಕ್ಸ್‌ : ರಿಲೇಯಲ್ಲಿ ಭಾರತಕ್ಕೆ ಚಿನ್ನ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ

missing

Paralympics ಕಾಂಗೋ ಆ್ಯತ್ಲೀಟ್‌ಗಳು ನಾಪತ್ತೆ: ತನಿಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.