ರಾಜ್ಯ ವಿಧಾನಸಭೆ ಚುನಾವಣೆಯ ಫ‌ಲಿತಾಂಶ: BJP ವಿರೋಧಿ ಒಕ್ಕೂಟ ರಚನೆಗೆ ಮುನ್ನುಡಿ

ರಾಷ್ಟ್ರಮಟ್ಟದಲ್ಲಿರುವ ಬಿಜೆಪಿ ವಿರೋಧಿ ಪಕ್ಷಗಳಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ

Team Udayavani, May 20, 2023, 7:21 AM IST

vidhana soudha

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫ‌ಲಿತಾಂಶದಿಂದ ಬೀಗುತ್ತಿರುವ ಕಾಂಗ್ರೆಸ್‌ ಈ ಫ‌ಲಿತಾಂಶ ಮುಂದಿಟ್ಟುಕೊಂಡು ಬಿಜೆಪಿಗೆ ದೇಶವ್ಯಾಪಿ ಎಚ್ಚರಿಕೆಯ ಗಂಟೆ ಬಾರಿಸಲು ಕಾಂಗ್ರೆಸ್‌ ಸಜ್ಜಾಗುತ್ತಿದೆ.

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್‌ ಜನಸಾಗರದ ಮುಂದೆ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭಕ್ಕೆ ಬಿಜೆಪಿ ವಿರೋಧಿ ಪಕ್ಷಗಳನ್ನು ಆಹ್ವಾನಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರೋಧಿ ಒಕ್ಕೂಟ ರಚನೆಗೆ ಮುನ್ನುಡಿ ಬರೆಯಲು ಕಾಂಗ್ರೆಸ್‌ ಈ ಅವಕಾಶ ಬಳಸಿಕೊಳ್ಳಲು ಮುಂದಾಗಿದೆ.

ಕರ್ನಾಟಕದ ಫ‌ಲಿತಾಂಶವು ಬಿಜೆಪಿಗೆ ದೊಡ್ಡ ಆಘಾತ ನೀಡಿರುವುದು ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚುನಾವಣ ತಂತ್ರಗಾರಿಕೆ ಹಾಗೂ ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿರುವ ರಾಜ್ಯದ ಮತದಾರರಿಗೆ ಬಿಜೆಪಿ ವಿರೋಧಿ ಪಕ್ಷಗಳಿಂದ ಅಭೂತಪೂರ್ವ ಅಭಿನಂದನೆಗಳು ಸಲ್ಲಿಕೆಯಾಗಿವೆ. ಈ ರೀತಿಯ ತೀರ್ಪಿನ ಮೂಲಕ ರಾಜ್ಯದ ಮತದಾರರು ರಾಜಕೀಯ ಪ್ರೌಢಿಮೆ ಹಾಗೂ ಪ್ರಜ್ಞೆ ಮೆರೆದಿದ್ದಾರೆಂಬ ಶ್ಲಾಘನೆಗೂ ಒಳಗಾಗಿದ್ದಾರೆ.

ಹೀಗಾಗಿ ಈ ಫ‌ಲಿತಾಂಶ ಮುಂದಿಟ್ಟುಕೊಂಡು ಬಿಜೆಪಿಗೆ ಎಚ್ಚರಿಕೆ ಸಂದೇಶ ನೀಡುವ ಉದ್ದೇಶದಿಂದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರಮಟ್ಟದಲ್ಲಿರುವ ಬಿಜೆಪಿ ವಿರೋಧಿ ಪಕ್ಷಗಳಿಗೆ ಶನಿವಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದು ಬಹುತೇಕ ಎಲ್ಲರೂ ಸಮ್ಮತಿಸಿದ್ದಾರೆ. ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊರತುಪಡಿಸಿದರೆ ಇತರ 7 ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುತ್ತಿದ್ದಾರೆ. ಜತೆಗೆ ಎನ್‌ಸಿಪಿಯ ಶರದ್‌ ಪವಾರ್‌, ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲ ಹಾಗೂ ಜೆಡಿಯು, ಸಿಪಿಐ, ಸಿಪಿಎಂ, ಮತ್ತಿತರ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ನೇತೃತ್ವದಲ್ಲಿ ಬಿಜೆಪಿ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸುವ ವೇದಿಕೆಯಾಗಿ ಈ ಕಾರ್ಯಕ್ರಮಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್‌ ಪ್ರಯತ್ನ ನಡೆಸಿದೆ. ಹೀಗಾಗಿ ಬಿಜೆಪಿಗೆ ಕರ್ನಾಟಕದಿಂದಲೇ ದೊಡ್ಡ ಸಂದೇಶ ಕೊಡುವ ಪ್ರಯತ್ನ ಇದಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆದಿವೆ.

ಪ್ರಮಾಣ ವಚನಕ್ಕೆ ಸಾಕ್ಷಿಯಾಗಲಿರುವ ನಾಯಕರು 
ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್‌ ಗಾಂಧಿ, ಎಂ.ಕೆ.ಸ್ಟಾಲಿನ್‌ (ತಮಿಳುನಾಡು ಸಿಎಂ), ನಿತೀಶ್‌ ಕುಮಾರ್‌ (ಬಿಹಾರ ಸಿಎಂ), ಹೇಮಂತ್‌ ಸೊರೇನ್‌ (ಜಾರ್ಖಂಡ್‌ ಸಿಎಂ), ತೇಜಸ್ವಿ ಯಾದವ್‌ (ಬಿಹಾರ ಡಿಸಿಎಂ), ಶರದ್‌ ಪವಾರ್‌ (ಎನ್‌ಸಿಪಿ ಮುಖ್ಯಸ್ಥ).

ಉದ್ಧವ್‌ ಠಾಕ್ರೆ (ಮಹಾರಾಷ್ಟ್ರ ಮಾಜಿ ಸಿಎಂ), ಅಖೀಲೇಶ್‌ ಯಾದವ್‌ (ಉತ್ತರ ಪ್ರದೇಶ ಮಾಜಿ ಸಿಎಂ), ಫಾರೂಕ್‌ ಅಬ್ದುಲ್ಲ (ಜಮ್ಮು-ಕಾಶ್ಮೀರ ಮಾಜಿ ಸಿಎಂ), ಮೆಹಬೂಬ ಮುಫ್ತಿ (ಜಮ್ಮು-ಕಾಶ್ಮೀರ ಮಾಜಿ ಸಿಎಂ), ಸಿಪಿಎಂ ಮುಖಂಡರಾದ ಸೀತಾರಾಂ ಯೆಚೂರಿ, ಡಿ.ರಾಜಾ.

ಮಧ್ಯಪ್ರದೇಶ ಜೆಡಿಯು ಅಧ್ಯಕ್ಷ ಲಲ್ಲನ್‌ ಸಿಂಗ್‌, ಎಂಡಿಎಂಕೆ ಅಧ್ಯಕ್ಷ ವೈಕೋ, ಆರ್‌ಎಸ್‌ಪಿ ಮುಖ್ಯಸ್ಥ ಎನ್‌.ಕೆ. ಪ್ರೇಮಾನಂದನ್‌, ಸಿಪಿಐಎಂಎಲ್‌ ಮುಖಂಡ ದಿಪ್ನಾಕರ್‌ ಭಟ್ಟಾಚಾರ್ಯ, ವಿಸಿಕೆ ಮುಖ್ಯಸ್ಥ ತೋಲ್‌ ತಿರುಮಾವಲನ್‌. ಆರ್‌ಎಲ್‌ಡಿ ಅಧ್ಯಕ್ಷ ಜಯಂತ್‌ ಚೌಧರಿ, ಕೇರಳ ಕಾಂಗ್ರೆಸ್‌ ಮುಖ್ಯಸ್ಥ ಜೋಸೆ ಕೆ ಮಣಿ, ಐಯುಎಂಎಲ್‌ ಮುಖ್ಯಸ್ಥ ಸಾದಿಕ್‌ ಅಲಿ ಥಂಗಲ್‌ ಹಾಗೂ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಪರವಾಗಿ ಕಾಕೋಲಿ ಘೋಷ್‌ ಭಾಗವಹಿಸಲಿದ್ದಾರೆ.

2018ರಲ್ಲೂ ಗಣ್ಯರ ಭಾಗಿ
2018 ರಲ್ಲಿ ವಿಧಾನಸೌಧ ಮುಂಭಾಗ ಆಯೋಜಿಸದ್ದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೋನಿಯಾ ಗಾಂಧಿ, ಮಾಯಾವತಿ, ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್‌ ಸಹಿತ ಡಿಎಂಕೆ, ಎನ್‌ಸಿಪಿ, ಎಡಪಕ್ಷಗಳ ನಾಯಕರು ಆಗಮಿಸಿದ್ದರು. ಈ ಬಾರಿಯೂ ಬಿಜೆಪಿಯೇತರ ನಾಯಕರು ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಗೆ ಈ ಕಾರ್ಯಕ್ರಮದ ಮೂಲಕ ಬಿಜೆಪಿ ಹಾಗೂ ಮಿತ್ರ ಪಕ್ಷಗಳಿಗೆ ಸಂದೇಶ ರವಾನೆಗೆ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.