![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 24, 2022, 7:29 PM IST
ಬೆಳಗಾವಿ: ಹಿಡಕಲ್ ಡ್ಯಾಂ ನಲ್ಲಿರುವ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಾರ್ಯಾಲಯದ ಮೇಲೆ ಗುರುವಾರ ಮಧ್ನಾಹ್ನ ಭ್ರಷ್ಟಾಚಾರ ನಿರ್ಮೂಲನಾ ದಳ(ಎಸಿಬಿ) ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದರು.
ನೀರಾವರಿ ಯೋಜನೆಗಳು ಹಾಗೂ ಮತ್ತಿತರ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಲ್ಲಿ ವಿನಾಕಾರಣ ವಿಳಂಬ ಮಾಡುವುದು, ಪರಿಹಾರದಲ್ಲಿ ತಾರತಮ್ಯ ಎಸಗುವುದು ಹಾಗೂ ಪರಿಹಾರ ಮಂಜೂರು ಮಾಡಲು ಕಮಿಷನ್ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಗದಗ ಜಿಲ್ಲೆಯ ಸುಮಾರು 35ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ನಾಳೆಗೂ ಮುಂದುವರಿಯುವ ಸಾಧ್ಯತೆ ಇದೆ.
ಎಸಿಬಿ ಬೆಳಗಾವಿ ಎಸ್ಪಿ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ಗಳಾದ ಎ.ಎಸ್. ಗುದಿಗೊಪ್ಪ, ಸುನಿಲಕುಮಾರ, ಪರಮೇಶ್ವರ ಕವಟಗಿ, ಆರ್.ಎಫ್. ದೇಸಾಯಿ ಹಾಗೂ ಸಮೀರ್ ಮುಲ್ಲಾ ದಾಳಿ ನಡೆಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.