Heavy Rain ಚುರುಕುಗೊಂಡ ಮುಂಗಾರು; ಕೃತಕ ನೆರೆ, ಹಾನಿ
Team Udayavani, Jun 8, 2024, 11:05 PM IST
ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯಾದ್ಯಂತ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದೆ. ಇದೇ ರೀತಿ ಬಿರುಸಿನ ಮಳೆ ಕೆಲ ದಿನ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜೂ. 9ರಂದು “ರೆಡ್ ಅಲರ್ಟ್’ ಘೋಷಿಸಿದೆ.
ಶನಿವಾರ ಭಾರೀ ಮಳೆಗೆ ನಗರದ ಕೊಟ್ಟಾರ, ಕೊಟ್ಟಾರ ಚೌಕಿ, ಬಿಜೈ ಸಹಿತ ಕೆಲವೊಂದು ರಸ್ತೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಸುಬ್ರಹ್ಮಣ್ಯ, ಸುಳ್ಯ, ಐನೆಕಿದು, ಕೊಲ್ಲಮೊಗ್ರು, ಅರಂತೋಡು, ಜಾಲ್ಸೂರು, ಕಡಬ, ಬೆಳ್ಳಾರೆ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಚಾರ್ಮಾಡಿ, ಮಡಂತ್ಯಾರು, ವೇಣೂರು, ಕೊಕ್ಕಡ, ನೆಲ್ಯಾಡಿ, ಪುತ್ತೂರು, ಕುಂಬ್ರ, ಉಪ್ಪಿನಂಗಡಿ, ಇಳಂತಿಲ, ಪೆರ್ನೆ, ಕರಾಯ, ಕಲ್ಲೇರಿ, ಸುರತ್ಕಲ್, ಮುಲ್ಕಿ, ಉಳ್ಳಾಲ, ಕನ್ಯಾನ, ವಿಟ್ಲ, ಮಂಜೇಶ್ವರ, ಬಾಯಾರು, ಬಂಟ್ವಾಳ, ಬಿ.ಸಿ. ರೋಡ್, ಕಲ್ಲಡ್ಕ ಸಹಿತ ವಿವಿಧ ಕಡೆಗಳಲ್ಲಿ ಬಿರುಸಿನ ಮಳೆಯಾಗಿದೆ. ಕಡಲಿನ ಅಲೆಗಳ ಅಬ್ಬರವೂ ಹೆಚ್ಚಿತ್ತು.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸನ್ನದ್ಧ
ಮುಂಗಾರು ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡ ಸನ್ನದ್ಧವಾಗಿವೆ. ದೀಪಕ್ ಕುಮಾರ್ ಅವರ ನೇತೃತ್ವದ 28 ಮಂದಿಯ ಎನ್ಡಿಆರ್ಎಫ್ ತಂಡ ಪಣಂಬೂರಿನ ಸಿಐಎಸ್ಎಫ್ ವಿಭಾಗದಲ್ಲಿ ತಂಗಿ ದ್ದಾರೆ. 25 ಮಂದಿಯ ಎಸ್ಡಿಆರ್ಎಫ್ ತಂಡ ಪಣಂಬೂರಿನಲ್ಲಿ ಸನ್ನದ್ಧವಾಗಿದೆ. ಅಗತ್ಯ ಬಿದ್ದರೆ ಜಿಲ್ಲೆಯ ವಿವಿಧ ಭಾಗಕ್ಕೆ ತೆರಳಲು ಸಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.