Kerala:ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ:ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ
10 ಕಿಲೋ ಮೀಟರ್ ವ್ಯಾಪ್ತಿವರೆಗಿನ ಪ್ರದೇಶವನ್ನು ಕಣ್ಗಾವಲು ವಲಯ ಎಂದು ಘೋಷಿಸಲಾಗಿದೆ
Team Udayavani, Aug 19, 2023, 1:13 PM IST
ಕೇರಳ: ಉತ್ತರ ಕೇರಳದ ಕಣ್ಣೂರು ಜಿಲೆಯ ಕಣಿಚಾರ್ ಪ್ರದೇಶದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಎರಡು ಫಾರ್ಮ್ ಗಳಲ್ಲಿ ಇರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ:ಅಮರನಾಥ ಯಾತ್ರೆ ವೇಳೆ 300 ಅಡಿ ಪ್ರಪಾತಕ್ಕೆ ಬಿದ್ದು ಯಾತ್ರಿಕ ಮೃತ್ಯು, ಇನ್ನೋರ್ವನಿಗೆ ಗಾಯ
ಮಲೆಯಂಪಾಡಿಯಲ್ಲಿರುವ ಖಾಸಗಿ ಫಾರ್ಮ್ ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದಾಗಿ ಜಿಲ್ಲಾ ಪಶುಸಂಗೋಪನಾ ಅಧಿಕಾರಿಗಳು ದೃಢಪಡಿಸಿದ್ದಾರೆ.
ಅದೇ ರೀತಿ ಸುಮಾರು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಇನ್ನೊಂದು ಫಾರ್ಮ್ ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಶಿಷ್ಟಾಚಾರದ ನಿಯಮದಂತೆ ಆ ಹಂದಿಗಳನ್ನು ಹೂಳಲು ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.
ಹಂದಿ ಸಾಕಾಣೆ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೋಂಕು ಪತ್ತೆಯಾದ ಸ್ಥಳವೆಂದು ಘೋಷಿಸಲಾಗಿದೆ. ಮತ್ತು 10 ಕಿಲೋ ಮೀಟರ್ ವ್ಯಾಪ್ತಿವರೆಗಿನ ಪ್ರದೇಶವನ್ನು ಕಣ್ಗಾವಲು ವಲಯ ಎಂದು ಘೋಷಿಸಲಾಗಿದೆ.
ಈ ಪ್ರದೇಶದಲ್ಲಿನ ಹಂದಿಗಳ ಮಾರಾಟ ಮತ್ತು ಸಾಗಾಟವನ್ನು ಮೂರು ತಿಂಗಳ ಕಾಲದವರೆಗೆ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಫಾರ್ಮ್ ಗಳಲ್ಲಿ ಸೋಂಕಿಗೆ ಒಳಗಾಗಿರುವ ಹಂದಿಗಳನ್ನು ಬೇರೆ ಫಾರ್ಮ್ ಗಳಿಂದ ಖರೀದಿಸಲಾಗಿತ್ತೇ ಎಂಬ ಬಗ್ಗೆ ಶೀಘ್ರವೇ ವರದಿ ಸಲ್ಲಿಸುವಂತೆ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.