ರಾಜ್ಯದಲ್ಲಿ ಡ್ರಗ್ಸ್‌ ಅಲರ್ಟ್‌: ವರ್ಷಾಂತ್ಯದಲ್ಲಿ ವಿಶೇಷ ಕಾರ್ಯಾಚರಣೆ

ರಾಜ್ಯಾದ್ಯಂತ ಆನ್‌ಲೈನ್‌, ಡಾರ್ಕ್‌ವೆಬ್‌ ಮೇಲೂ ನಿಗಾ

Team Udayavani, Dec 25, 2022, 7:00 AM IST

ರಾಜ್ಯದಲ್ಲಿ ಡ್ರಗ್ಸ್‌ ಅಲರ್ಟ್‌: ವರ್ಷಾಂತ್ಯದಲ್ಲಿ ವಿಶೇಷ ಕಾರ್ಯಾಚರಣೆ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗ ಳೂರು, ಮಂಗಳೂರು, ಉಡುಪಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸಹಿತ ರಾಜ್ಯಾದ್ಯಂತ ಡ್ರಗ್ಸ್‌ (ಮಾದಕ ವಸ್ತು) ಪ್ರವೇಶ ತಡೆಯಲು ರಾಜ್ಯ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಹೊಸ ವರ್ಷಾಚರಣೆಗೆ ಬೆಂಗಳೂರು, ಮಂಗಳೂರು ಸಹಿತ ರಾಜ್ಯದ ಪ್ರಮುಖ ನಗರಗಳಲ್ಲಿ ಕೋಟ್ಯಂತರ ರೂ. ವಹಿ ವಾಟು ನಡೆಸಲು ಡ್ರಗ್‌ ಪೆಡ್ಲರ್‌ಗಳು ಮುಂದಾಗುತ್ತಿರುವುದು ಹಾಗೂ ಆನ್‌ ಲೈನ್‌ ಮೂಲಕ ಆರ್ಡರ್‌ ಪಡೆಯು ತ್ತಿರುವ ಸುಳಿವು ಸಿಕ್ಕಿರುವ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ.

ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಒಂದು ವಾರ ಕಾಲ ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಹಾಗೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್‌ ಆಯು ಕ್ತರು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ವರ್ಷಾಚರಣೆಗೆ 200 ಕೋಟಿ ರೂ.ಗೂ ಹೆಚ್ಚು ಡ್ರಗ್ಸ್‌ ವಹಿವಾಟು ನಡೆ ಸುವ ಸಾಧ್ಯತೆಯಿದೆ ಎಂದು ಅಂದಾಜಿಸ ಲಾಗಿದ್ದು, ಇದನ್ನು ತಡೆಗಟ್ಟಲು ನಿರ್ದೇಶನ ನೀಡಲಾಗಿದೆ. ಈ ಹಿಂದೆ ಡ್ರಗ್ಸ್‌ ಸಾಗಣೆ ಪ್ರಕರಣಗಳಲ್ಲಿ ಬಂಧಿತರಾಗಿ ಬಿಡುಗಡೆ ಗೊಂಡಿರುವವರು ಹಾಗೂ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಗ್ಗೆ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಡಿಜಿಪಿ ಪ್ರವೀಣ್‌ ಸೂದ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾದಕ ವಸ್ತು ಮಾರಾಟ ಜಾಲ ಹತ್ತಿಕ್ಕುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ನಿರಂತರವಾಗಿ ನಿಗಾ ಇಟ್ಟಿದೆ ಎಂದು ಹೇಳಿದ್ದಾರೆ.

ಕಳ್ಳ ಮಾರ್ಗ ಬೆಂಗಳೂರು ಸಹಿತ ರಾಜ್ಯದ ಪ್ರಮುಖ ನಗರಗಳಿಗೆ ಕಳ್ಳ ಮಾರ್ಗದ ಮೂಲಕ ಡ್ರಗ್ಸ್‌ ಪ್ರವೇಶವಾಗುತ್ತಿದೆ. ವಿಮಾನ, ಹಡಗುಗಳ ಮೂಲಕ ಎಲ್‌ಎಸ್‌ಡಿ, ಎಂಡಿಎಂಎ, ಎಲ್‌ಎಸ್‌ಡಿ ಸ್ಟಿಪ್ಸ್‌, ಎಕ್ಸ್‌ಟೆಸ್ಸಿ, ಬ್ರೌನ್‌ ಶುಗರ್‌, ಕೊಕೇನ್‌, ಹ್ಯಾಶಿಶ್‌, ಚರಸ್‌ಗಳು ದೊಡ್ಡ ಪ್ರಮಾಣದಲ್ಲಿ ಇರಾನ್‌ ದೇಶಕ್ಕೆ ಬಂದು, ಅಲ್ಲಿಂದ ಹಡಗಿನಲ್ಲಿ ಕಳ್ಳಸಾಗಾಣಿಕೆ ಮೂಲಕ ಕೊಚ್ಚಿ, ಗೋವಾ, ಚೆನ್ನೈ, ಮುಂಬಯಿಗೆ ತಲುಪಿ ರಾಜ್ಯಕ್ಕೆ ರವಾನೆಯಾಗುತ್ತಿದೆ. ಎನ್‌ಸಿಬಿ ಅಧಿಕಾರಿಗಳ ಕಣ್ಣು ತಪ್ಪಿಸಿ ಡಾರ್ಕ್‌ವೆಬ್‌ನಟಾರ್‌ ಬ್ರೋಸರ್ಸ್‌, ಡ್ರಿಯೇಡ್‌ ವೆಬ್‌ ಸೈಟ್‌, ಕೊರಿಯರ್‌ ಮೂಲಕ ತಲುಪಿ ಸುವ ಜಾಲವೇ ರಾಜ್ಯದಲ್ಲಿದೆ.

ಒಡಿಶಾ, ಬಾಂಗ್ಲಾದೇಶ, ಆಂಧ್ರಪ್ರದೇಶ ಕರ್ನೂಲ್ , ಅನಂತಪುರ, ವಿಶಾಖಪಟ್ಟಣ, ತಮಿಳುನಾಡಿನ ಕೃಷ್ಣಗಿರಿ, ಗೋವಾದಿಂದ ಸ್ಥಳೀಯ ಗಾಂಜಾ, ಅಫೀಮು ಬರುವ ಸುಳಿವು ಸಿಕ್ಕಿದೆ.

ವಿದ್ಯಾರ್ಥಿಗಳು ಹೊಸ ವರ್ಷಾಚರಣೆಗೆ ವೆಬ್‌ಸೈಟ್‌ಗಳು, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಗ್ರೂಪ್‌, ಟೆಲಿಗ್ರಾಮ್‌, ಇನ್‌ಸ್ಟಾ ಗ್ರಾಂನಲ್ಲಿ ಗ್ರೂಪ್‌ ಸೃಷ್ಟಿಸಿ ಇದರಲ್ಲಿರುವ ಪೆಡ್ಲರ್‌ಗಳನ್ನು ಸಂಪರ್ಕಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆ ಆರಂಭ
ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರನ್ನು ಹೆಡೆಮುರಿ ಕಟ್ಟುವ ಕಾರ್ಯಾಚರಣೆ ಬೆಂಗಳೂರಿನಲ್ಲಿ ಶನಿವಾರದಿಂದಲೇ ಶುರುವಾಗಿದ್ದು, ಕೇರಳ ಮೂಲದ ಶಬೀರ್‌ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಎರಡು ಲಕ್ಷ ರೂ. ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಮತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಹೊಸ ವರ್ಷ ಮತ್ತು ಕ್ರಿಸ್ಮಸ್‌ ಹಬ್ಬ ಹಿನ್ನೆಲೆಯಲ್ಲಿ ಮಾದಕ ವಸ್ತುಗಳನ್ನು ಸಂಗ್ರಹಿಸಿ, ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಆರೋಪದಲ್ಲಿ ಒಡಿಶಾದ ಇಬ್ಬರನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ 35 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ.

ಹೊಸ ವರ್ಷಾಚರಣೆ ವೇಳೆ ಡ್ರಗ್ಸ್‌ ಸೇವಿಸುವವರ ವಿರುದ್ಧ ಪೊಲೀಸರು ಎಲ್ಲೆಡೆ ನಿಗಾ ಇಡಲಿದ್ದಾರೆ. ಕಾನೂನು ಉಲ್ಲಂ ಸದೆ ಹೊಸ ವರ್ಷ ಆಚರಿಸಿ. ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕ್ರಮಕ್ಕೆ ಪೊಲೀಸ್‌ ಇಲಾಖೆ ಸಜ್ಜಾಗಿದೆ.-ಪ್ರವೀಣ್‌ ಸೂದ್‌, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ.

ಡ್ಯಾನ್ಸ್‌ ಬಾರ್‌ಗಳೇ ಡ್ರಗ್ಸ್‌ ಅಡ್ಡೆ
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಪ್ರಮುಖ ಡ್ಯಾನ್ಸ್‌ಬಾರ್‌ಗಳು, ಪಬ್‌ಗಳು, ಬಾನೆತ್ತರದ ಅಪಾರ್ಟ್‌ಮೆಂಟ್‌ಗಳು, ಪಂಚತಾರಾ ಹೊಟೇಲ್‌ಗ‌ಳ ರೂಂಗಳು, ನಗರದ ಹೊರ ವಲಯದ ನಿರ್ಜನ ಪ್ರದೇಶಗಳೇ ಡ್ರಗ್ಸ್‌ ಸೇವನೆಯ ಅಡ್ಡೆಯಾಗಿದೆ.

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.