![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2022, 9:36 PM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಇಲ್ಲಿನ ಪ್ರಭಾವಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.
ಶಾ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕಂದಾಯ ಸಚಿವ ಆರ್ ಅಶೋಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ದುರ್ಬಲ ಎಂದು ಪರಿಗಣಿಸಲಾಗಿರುವ ಬಿಜೆಪಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಗಳಿಸಲು ಈ ಬೆಲ್ಟ್ನತ್ತ ಗಮನಹರಿಸುತ್ತಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಹಳೇ ಮೈಸೂರು ಪ್ರದೇಶವನ್ನು ಜೆಡಿಎಸ್ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ, ಆದರೆ ಅಲ್ಲಿ ಕಾಂಗ್ರೆಸ್ ಸಹ ಪ್ರಬಲವಾಗಿದೆ, ಆದರೆ ಬಿಜೆಪಿಯು ಮೇಲುಗೈ ಸಾಧಿಸಲು ಪ್ರಯತ್ನಿಸುತ್ತಿದೆ. ಈ ಪ್ರದೇಶವು ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿದೆ.
ಒಕ್ಕಲಿಗರು ಮತ್ತು ಲಿಂಗಾಯತರಿಗೆ ಎರಡು ಹೊಸ ಒಬಿಸಿ ವರ್ಗಗಳನ್ನು ರಚಿಸಲು ಮತ್ತು 10% EWS ಕೋಟಾದ ಒಂದು ಭಾಗವನ್ನು ಬಳಸಿಕೊಳ್ಳುವ ಮೂಲಕ ಅವರ ಮೀಸಲಾತಿ ಬೇಡಿಕೆಯನ್ನು ಪೂರೈಸಲು ರಾಜ್ಯ ಸಚಿವ ಸಂಪುಟದ ಇತ್ತೀಚಿನ ನಿರ್ಧಾರದ ನಂತರ ಈ ಭೇಟಿಯು ಮಹತ್ವವನ್ನು ಪಡೆದುಕೊಂಡಿದೆ.ಹಳೆಯ ಮೈಸೂರು ಪ್ರದೇಶದಲ್ಲಿ ವಿಶೇಷವಾಗಿ ಪ್ರಬಲವಾದ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಬಿಜೆಪಿ ಈ ಬಾರಿ ಕಣ್ಣಿಟ್ಟಿದೆ.
ಶುಕ್ರವಾರ ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳನ್ನು ಪರಿವಾರವಾದಿ ರಾಜವಂಶೀಯ ಮತ್ತು ಭ್ರಷ್ಟ ಎಂದು ಬಣ್ಣಿಸಿ ಹಳೆ ಮೈಸೂರು ಭಾಗದ ಜನತೆಗೆ ಬಿಜೆಪಿಯನ್ನು ಬೆಂಬಲಿಸಲು ಕರೆ ನೀಡಿದ್ದರು.
ಅದಮ್ಯ ಚೇತನಕ್ಕೆ ಭೇಟಿ
ಮಠಕ್ಕೆ ಭೇಟಿ ನೀಡುವ ಮೊದಲು, ಶಾ, ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ತೇಜಸ್ವಿನಿ ಅನಂತ್ ಕುಮಾರ್ ಅವರು ನಡೆಸುತ್ತಿರುವ ಅದಮ್ಯ ಚೇತನ ಸೇವಾ ಸಂಸ್ಥೆಗೆ ಭೇಟಿ ನೀಡಿದರು.ಅದಮ್ಯ ಚೇತನದ ‘ಅಮೃತ ಮಹೋತ್ಸವ-ಅನಂತ ಸೇವಾ ಉತ್ಸವ’ದಲ್ಲಿ ಭಾಗವಹಿಸಿದ್ದಲ್ಲದೆ, ಇಲ್ಲಿನ ಗವಿಪುರದಲ್ಲಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಗೂ ಭೇಟಿ ನೀಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.