ಉತ್ತರ ಪ್ರದೇಶದಲ್ಲಿ ಮತ್ತೊಂದು Encounter: ಮೋಸ್ಟ್ ವಾಂಟೆಡ್ ಕ್ರಿಮಿನಲ್ ಖತಂ
ನಟೋರಿಯಸ್ ಕ್ರಿಮಿನಲ್ ಆದಿತ್ಯ ರಾಣಾನನ್ನು ಹೊಡೆದುರುಳಿಸಿದ ಪೋಲಿಸರು
Team Udayavani, Apr 12, 2023, 5:02 PM IST
ಲಕ್ನೋ : ಉತ್ತರ ಪದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಆಡಳಿದ ಚುಕ್ಕಣಿ ಹಿಡಿದ ಬಳಿಕ ರಾಜ್ಯದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳವರ ಮೇಲೆ ಸರ್ಕಾರ ಮತ್ತು ಪೋಲಿಸ್ ಹದ್ದಿನ ಕಣ್ಣಿಟ್ಟಿದೆ. ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳನ್ನು ಎನ್ಕೌಂಟರ್ ಮಾಡಿದ ಸುದ್ದಿಗಳು ಉತ್ತರ ಪ್ರದೇಶದಿಂದ ಆಗಾಗ ಕೇಳಿಬರುತ್ತಿರುವುದೂ ಸರ್ವೇ ಸಾಮಾನ್ಯವಾಗಿದೆ.
ಇದೀಗ ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಕ್ರಿಮಿನಲ್ನನ್ನು ಪೋಲಿಸರು ಎನ್ಕೌಂಟರ್ ಮಾಡಿ ಹೊಡೆದುರುಳಿಸಿದ್ದಾರೆ. ಆದಿತ್ಯ ರಾಣಾ ಎಂಬ ಮೋಸ್ಟ್ ವಾಂಟೆಡ್ ಕ್ರಿಮಿನಲ್ನನ್ನು ಎನ್ಕೌಂಟರ್ ಮಾಡಲಾಗಿದೆ. ಈತನನ್ನು ಪತ್ತೆ ಹಚ್ಚಿವರಿಗೆ 2.50 ಲಕ್ಷ ಬಹುಮಾನ ನೀಡುವುದಾಗಿಯೂ ಘೋಷಿಸಲಾಗಿತ್ತು.
ʻಉತ್ತರ ಪ್ರದೇಶದ ಮೊಸ್ಟ್ ವಾಂಟೆಡ್, ನಟೋರಿಯಸ್ ಕ್ರಿಮಿನಲ್ ಆದಿತ್ಯ ರಾಣಾನನ್ನು ಬುಧವಾರ ಬೆಳಗ್ಗೆ ಬುಧನ್ಪುರ್ ಪೋಲಿಸ್ ಚೌಕಿ ಬಳಿ ಎನ್ಕೌಂಟರ್ ಮಾಡಲಾಗಿದೆ. ಈ ವೇಳೆ ಐವರು ಪೋಲಿಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆʼ ಎಂದು ಉತ್ತರ ಪ್ರದೇಶ ಪೋಲಿಸ್ ಅಧಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅತಿ ದೊಡ್ಡ ಮಾಫಿಯಾ ಡಾನ್ಗಳಲ್ಲಿ ಒಬ್ಬನಾಗಿದ್ದ ಆದಿತ್ಯ ರಾಣಾ ಮೇಲೆ 43 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 6 ಕೊಲೆ, 13 ದರೋಡೆ ಪ್ರಕರಣಗಳಲ್ಲೂ ಆದಿತ್ಯ ರಾಣಾ ಆರೋಪಿಯಾಗಿದ್ದ.
2017 ಮತ್ತು 2022ರಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾಗ ಎರಡು ಬಾರಿಯೂ ಆತ ಪೋಲಿಸರಿಗೆ ಚಳ್ಳೇಹಣ್ಣು ತಿನ್ನಿಸಿ ಕಸ್ಟಡಿಯಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ಆತನ ಗ್ಯಾಂಗ್ನಲ್ಲಿ ಸುಮಾರು 48 ಜನ ಸದಸ್ಯರಿದ್ದು 6 ಜನರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್ಬಸ್ ಸ್ಥಾವರ ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.