![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 22, 2022, 2:38 PM IST
ನವದೆಹಲಿ: ಪಟಾಕಿ ತಯಾರಿಸುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಂಡ ಪರಿಣಾಮ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ (ಫೆ.22) ಹಿಮಾಚಲ್ ಪ್ರದೇಶದ ಉನಾ ಜಿಲ್ಲೆಯ ಫ್ಯಾಕ್ಟರಿಯೊಂದರಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸೈನಿಕನ ತಾಯಿ ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳ ಬಂಧನಕ್ಕೆ ಆಗ್ರಹ
ಹಿರಿಯ ಅಧಿಕಾರಿಗಳ ಮಾಹಿತಿ ಪ್ರಕಾರ, ಉನಾ ಜಿಲ್ಲೆಯ ಬಾಥು ಕೈಗಾರಿಕಾ ವಲಯದಲ್ಲಿ ಈ ಘಟನೆ ನಡೆದಿದೆ. ಸ್ಫೋಟದಲ್ಲಿ ಗಾಯಗೊಂಡವರನ್ನು ಉನಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಮೂಲಗಳು ಹೇಳಿವೆ.
ಸಾವನ್ನಪ್ಪಿರುವವರು ಮತ್ತು ಗಾಯಗೊಂಡವರಲ್ಲಿ ಬಹುತೇಕ ಮಂದಿ ವಲಸೆ ಕಾರ್ಮಿಕರಾಗಿದ್ದಾರೆ ಎಂದು ಉನಾ ಡೆಪ್ಯುಟಿ ಕಮಿಷನರ್ ರಾಘವ್ ಶರ್ಮಾ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ರಕ್ಷಣಾ ಸಿಬಂದಿಗಳು ಹಾಜರಿದ್ದರು.
ಹಿಮಾಚಲ್ ಪ್ರದೇಶದ ಪಟಾಕಿ ತಯಾರಿಕೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.